ಮಸಿ ಬಳಿಯುತ್ತಿರುವ ಕರವೇ ಕಾರ್ಯಕರ್ತರು 
ರಾಜ್ಯ

ಹಿಂದಿ ಹೇರಿಕೆಗೆ ವಿರೋಧ: ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕಕ್ಕೆ ಕರವೇ ಮಸಿ!

ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಬೆಂಗಳೂರು: ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಕಳೆದ ರಾತ್ರಿ ಇಡೀ ಪ್ರತಿಭಟನೆ ನಡೆಸಿರುವ ಕರವೇ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಅಲ್ಲದೆ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ  ಕಾರ್ಯಕರ್ತರು ರಾತ್ರಿ ಇಡೀ ನಗರದಾದ್ಯಂತ ಸಂಚರಿಸಿ ನಗರದ ಮೆಟ್ರೋ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.

ನಗರದ ಯಶವಂತಪುರ, ರಾಜಾಜಿ ನಗರ, ಇಂದಿರಾನಗರ, ದೀಪಾಂಜಲಿ ನಗರ, ನ್ಯಾಷನಲ್ ಕಾಲೇಜು, ಮೈಸೂರು ರಸ್ತೆ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

SCROLL FOR NEXT