ರಾಜ್ಯ

ಹಿಂದಿ ಹೇರಿಕೆಗೆ ವಿರೋಧ: ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕಕ್ಕೆ ಕರವೇ ಮಸಿ!

Srinivasamurthy VN

ಬೆಂಗಳೂರು: ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಕಳೆದ ರಾತ್ರಿ ಇಡೀ ಪ್ರತಿಭಟನೆ ನಡೆಸಿರುವ ಕರವೇ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಅಲ್ಲದೆ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ  ಕಾರ್ಯಕರ್ತರು ರಾತ್ರಿ ಇಡೀ ನಗರದಾದ್ಯಂತ ಸಂಚರಿಸಿ ನಗರದ ಮೆಟ್ರೋ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.

ನಗರದ ಯಶವಂತಪುರ, ರಾಜಾಜಿ ನಗರ, ಇಂದಿರಾನಗರ, ದೀಪಾಂಜಲಿ ನಗರ, ನ್ಯಾಷನಲ್ ಕಾಲೇಜು, ಮೈಸೂರು ರಸ್ತೆ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.

SCROLL FOR NEXT