ಮಸಿ ಬಳಿಯುತ್ತಿರುವ ಕರವೇ ಕಾರ್ಯಕರ್ತರು 
ರಾಜ್ಯ

ಹಿಂದಿ ಹೇರಿಕೆಗೆ ವಿರೋಧ: ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕಕ್ಕೆ ಕರವೇ ಮಸಿ!

ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಬೆಂಗಳೂರು: ಹಿಂದಿ ಹೇರಿಕೆಯನ್ನು ವಿರೋಧಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಅಹೋರಾತ್ರಿ ಪ್ರತಿಭಟನೆ ನಡೆಸಿದ್ದು, ನಗರದ ವಿವಿಧ ಮೆಟ್ರೋ ನಿಲ್ದಾಣಗಳ ನಾಮಫಲಕದ ಹಿಂದಿ ಅಕ್ಷರಗಳಿಗೆ ಕಪ್ಪು ಮಸಿ ಬಳಿದಿದ್ದಾರೆ.

ಕಳೆದ ರಾತ್ರಿ ಇಡೀ ಪ್ರತಿಭಟನೆ ನಡೆಸಿರುವ ಕರವೇ ಕಾರ್ಯಕರ್ತರು ಹಿಂದಿ ಹೇರಿಕೆ ವಿರುದ್ಧ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿದ್ದಾರೆ. ಅಲ್ಲದೆ ರಾಜ್ಯಗಳ ಮೇಲೆ ಹಿಂದಿ ಹೇರಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ  ಕಾರ್ಯಕರ್ತರು ರಾತ್ರಿ ಇಡೀ ನಗರದಾದ್ಯಂತ ಸಂಚರಿಸಿ ನಗರದ ಮೆಟ್ರೋ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.

ನಗರದ ಯಶವಂತಪುರ, ರಾಜಾಜಿ ನಗರ, ಇಂದಿರಾನಗರ, ದೀಪಾಂಜಲಿ ನಗರ, ನ್ಯಾಷನಲ್ ಕಾಲೇಜು, ಮೈಸೂರು ರಸ್ತೆ ಸೇರಿದಂತೆ ವಿವಿಧ ನಿಲ್ದಾಣಗಳಲ್ಲಿರುವ ಹಿಂದಿ ನಾಮಫಲಕಕ್ಕೆ ಮಸಿ ಬಳಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!