ಸಿದ್ದರಾಮಯ್ಯ 
ರಾಜ್ಯ

ಬರ ಪರಿಹಾರ ನಿಧಿ: ಕೇಂದ್ರದ ವಿರುದ್ಧ ಸಿಎಂ ಸಿದ್ದರಾಮಯ್ಯ ಅಸಮಾಧಾನ

ಬರ ಪರಿಹಾರ ನಿಧಿಗಾಗಿ ಕೇಂದ್ರ ಹಣಕಾಸು ಆಯೋಗ ಯಾವ ಮಾನದಂಡವಿಲ್ಲದೇ ಶಿಫಾರಸು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ...

ಬೆಂಗಳೂರು:  ಬರ ಪರಿಹಾರ ನಿಧಿಗಾಗಿ ಕೇಂದ್ರ ಹಣಕಾಸು ಆಯೋಗ ಯಾವ ಮಾನದಂಡವಿಲ್ಲದೇ ಶಿಫಾರಸು ಮಾಡಿದೆ ಎಂದು ಸಿಎಂ ಸಿದ್ದರಾಮಯ್ಯ ಆರೋಪಿಸಿದ್ದಾರೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವ ಸಿಎಂ, 2015-16 ರಿಂದ 2019-20 ರ ವರೆಗೆ ಐದು ವರ್ಷಗಳಿಗಾಗಿ ರಾಜ್ಯಕ್ಕೆ 1,527 ಕೋಟಿ ರು.ವಿಪತ್ತು ಪರಿಹಾರ ಹಣ ನಿಧಿ ಬಿಡುಗಡೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಬೇರೆ ರಾಜ್ಯಗಳಿಗೆ ಹೋಲಿಸಿದರೇ ಇದು ಗಣನೀಯವಾಗಿ ಕಡಿಮೆಯಾಗಿದೆ. ಆಂಧ್ರ ಪ್ರದೇಶ, ಮಧ್ಯಪ್ರದೇಶ, ಮಹಾರಾಷ್ಟ್ರ, ತಮಿಳುನಾಡು, ಮತ್ತು ಗುಜರಾತ್ ಗಳಿಗಿಂತ ಕಡಿಮೆಯಾಗಿದೆ.
ಕರ್ನಾಟಕ ಶೇ.60 ರಷ್ಟು ಭೌಗೋಳಿಕವಾಗಿ ಬರಪೀಡಿತವಾಗಿದೆ. ಆದರೂ ಕರ್ನಾಟಕಕ್ಕೆ ಕಡಿಮೆ ಹಣ ಬಿಡುಗಡೆ ಮಾಡಲಾಗಿದೆ. ಕರ್ನಾಟಕ, ಆಂಧ್ರ, ಮತ್ತು ರಾಜಸ್ತಾನಗಳ 24 ರಲ್ಲಿ 16 ಜಿಲ್ಲೆಗಳನ್ನು ಬರಪೀಡಿತ ಎಂದು ಘೋಷಿಸಿದ್ದಾರೆ. ರಾಜಸ್ತಾನಕ್ಕೆ ಹೋಲಿಸಿದರೇ ಕರ್ನಾಟಕದಲ್ಲಿ ನೀರಾವರಿ ಪ್ರಮಾಣ  ಕಡಿಮೆಯಿದೆ.
ಕಳೆದ ಆರು ವರ್ಷಗಳ ಮಾಹಿತಿ ಆಧಾರದ ಮೇಲೆ ನಿರ್ಧರಿಸಲಾಗಿದೆ. ರಾಜ್ಯ ವಿಪತ್ತು ನಿರ್ವಹಣಾ ಪರಿಹಾರ ನಿಧಿಯಡಿಯಲ್ಲಿ ವಾರ್ಷಿಕವಾಗಿ ರು. 215.74 ಕೋಟಿ ಬಿಡುಗಡೆ ಮಾಡಲಾಗಿದೆ.
ರಾಷ್ಟ್ರೀಯ ವಿಪತ್ತು ನಿರ್ವಹಣಾ ನಿಧಿಯಡಿಯಲ್ಲಿ  ರು.1,029.28 ಕೋಟಿ ರು ಬಿಡುಗಡೆ ಮಾಡಲಾಗಿದೆ. ಹಳೆಯ ಅನುಭವದ ಮೇಲೆ ಹಣಕಾಸು ಆಯೋಗ ಶಿಫಾರಸು ಮಾಡಲಾಗಿದೆ ಎಂದು ಸಿಎಂ ಹೇಳಿದ್ದಾರೆ.
1990-2005 ರಲ್ಲಿ ಕರ್ನಾಟಕಕ್ಕೆ 3.5 ರಷ್ಟು ವಿಪತ್ತು ಪರಿಹಾರ ನಿಧಿಯಡಿಯಲ್ಲಿ ರು. 1,435.95 ಕೋಟಿ ಹಣ ಬಿಡುಗಡೆ ಮಾಡಲಾಗಿತ್ತು.2015-2020 ರ ಅವಧಿಯಲ್ಲಿ ಶೇಕಡವಾರು ಹಣ ಬಿಡುಗಡೆ ಕಡಿಮೆಯಾಗಿದ್ದು, ಶೇ.2.4 ರಷ್ಟು ಬಿಡುಗಡೆ ಮಾಡಲಾಗಿತ್ತು. ಅನುದಾನ ಹಂಚಿಕೆ  ಮಾಡುವಾಗ ಸರಿಯಾದ ರೀತಿಯಲ್ಲಿ  ಮಾಡಬೇಕು ಎಂದು ಸಿಎಂ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT