ಬೆಂಬಲಿಗರೊಂದಿಗೆ ಆಗಮಿಸಿದ್ದ ಟಿಟಿವಿ ದಿನಕರನ್ 
ರಾಜ್ಯ

ಶಶಿಕಲಾ ಭೇಟಿಗೆ ಬಂದ ದಿನಕರನ್: ಅವಕಾಶ ನೀಡದೇ ವಾಪಸ್ ಕಳುಹಿಸಿದ ಜೈಲು ಸಿಬ್ಬಂದಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಎಐಎಡಿಎಂಕೆ ನಾಯಕಿ ಶಶಿಕಲಾ ..

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.  ಎಐಎಡಿಎಂಕೆ ನಾಯಕಿ ಶಶಿಕಲಾ ಅವರನ್ನು ಭೇಟಿ ಮಾಡಲು ಅವರ ಸಂಬಂಧಿ ಟಿಟಿವಿ ದಿನಕರನ್  ಆಗಮಿಸಿದ್ದರು. 
ಈ ವೇಳೆ ಶಶಿಕಲಾ ಭೇಟಿ ಮಾಡಲು ದಿನಕರನ್ ಗೆ ಅವಕಾಶ ನೀಡಲು ಜೈಲು ಸಿಬ್ಬಂದಿ ನಿರಾಕರಿಸಿದರು. ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ದಿನಕರನ್ ಶಶಿಕಲಾ ಅವರಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕಲ್ಪಿಸಿಲ್ಲ, ಆರೋಪಗಳೆಲ್ಲವೂ ನಿರಾಧಾರ ಎಂದು ಹೇಳಿದರು.
ಮಧ್ಯಾಹ್ನದ ವೇಳೆಗೆ ತಮ್ಮ ಬೆಂಬಲಿಗರೊಂದಿಗೆ ಜೈಲಿಗೆ ಬಂದಿದ್ದ ದಿನಕರನ್ ಶಶಿಕಲಾ ಭೇಟಿ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಜೈಲಿನ ಸಮೀಪದ ಚೆಕ್ ಪೋಸ್ಟ್ ಬಳಿಯೇ ಅವರನ್ನು ತಡೆದ ಅಧಿಕಾರಿಗಳು ಭೇಟಿ ಮಾಡಲು ಅವಕಾಶ ನೀಡದೇ ವಾಪಸ್ ಕಳುಹಿಸಿದರು.
ಈ ವೇಳೆ ದಿನಕರನ್ ಬೆಂಬಲಿಗರು ಜೈಲು ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ, ಹಿರಿಯ ರಾಜಕಾರಣಿಗಳಿಗೆ ಕರೆ ಮಾಡಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.  ಆದರೆ ಅಂತಿಮವಾಗಿ  ಶಶಿಕಲಾ ಭೇಟಿ ಮಾಡಲು ಸಾಧ್ಯವಾಗದೇ ದಿನಕರ್ ವಾಪಸ್ ತೆರಳಿದರು.
ಶಶಿಕಲಾ ಭೇಟಿ ಮಾಡಲು ದಿನಕರನ್ ಮುಂಚಿತವಾಗಿ ಅನುಮತಿ ಪಡೆದಿರಲಿಲ್ಲ ಹೀಗಾಗಿ ಅವರ ಭೇಟಿಗೆ ಅವಕಾಶ ಕಲ್ಪಿಸಲಾಗಲಿಲ್ಲ ಎಂದು ಜೈಲು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಬಹು ಅಂಗಾಂಗ ವೈಫಲ್ಯದಿಂದ ಗಾಯಕಿ ಆಶಾ ಭೋಸ್ಲೆ ನಿಧನ': ಬ್ರೀಚ್ ಕ್ಯಾಂಡಿ ಆಸ್ಪತ್ರೆ ಸ್ಪಷ್ಟನೆ

ಪ್ರತಿ ಪಂದ್ಯಕ್ಕೂ ಬನ್ನಿ... ನೀವು ನನ್ನ ಅದೃಷ್ಟ: IPLನಲ್ಲಿ ಶತಕ ಸಿಡಿಸಿ ವಿನಮ್ರ ಮನವಿ ಮಾಡಿದ ಸಂಜು ಸ್ಯಾಮ್ಸನ್, Video!

'ಇರಾನ್‌ಗೆ ಸಮವಸ್ತ್ರ, ಅಮೆರಿಕಕ್ಕೆ ಸೂಟ್': ಶಾಂತಿ ಮಾತುಕತೆಗೂ ಮುನ್ನ ಗಮನಸೆಳೆದ ಪಾಕ್ ಸೇನಾ ಮುಖ್ಯಸ್ಥ ಅಸಿಮ್ ಮುನೀರ್ ಉಡುಗೆ!

ಬೇಡ ಬೇಡ ಹೀಗೆಲ್ಲಾ ಮಾಡಬೇಡಿ: ರಸ್ತೆಯಲ್ಲೇ ಗಳಗಳನೆ ಅತ್ತ ನಟಿ ರಮ್ಯಾ

ಮುಂಬೈ: ಖ್ಯಾತ ಹಿರಿಯ ಗಾಯಕಿ ಆಶಾ ಭೋಸ್ಲೆ ನಿಧನ, ಗಣ್ಯರ ಕಂಬನಿ

SCROLL FOR NEXT