ಬೆಂಬಲಿಗರೊಂದಿಗೆ ಆಗಮಿಸಿದ್ದ ಟಿಟಿವಿ ದಿನಕರನ್ 
ರಾಜ್ಯ

ಶಶಿಕಲಾ ಭೇಟಿಗೆ ಬಂದ ದಿನಕರನ್: ಅವಕಾಶ ನೀಡದೇ ವಾಪಸ್ ಕಳುಹಿಸಿದ ಜೈಲು ಸಿಬ್ಬಂದಿ

ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಎಐಎಡಿಎಂಕೆ ನಾಯಕಿ ಶಶಿಕಲಾ ..

ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಬಳಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.  ಎಐಎಡಿಎಂಕೆ ನಾಯಕಿ ಶಶಿಕಲಾ ಅವರನ್ನು ಭೇಟಿ ಮಾಡಲು ಅವರ ಸಂಬಂಧಿ ಟಿಟಿವಿ ದಿನಕರನ್  ಆಗಮಿಸಿದ್ದರು. 
ಈ ವೇಳೆ ಶಶಿಕಲಾ ಭೇಟಿ ಮಾಡಲು ದಿನಕರನ್ ಗೆ ಅವಕಾಶ ನೀಡಲು ಜೈಲು ಸಿಬ್ಬಂದಿ ನಿರಾಕರಿಸಿದರು. ನಂತರ, ಮಾಧ್ಯಮಗಳೊಂದಿಗೆ ಮಾತನಾಡಿದ ದಿನಕರನ್ ಶಶಿಕಲಾ ಅವರಿಗೆ ಜೈಲಿನಲ್ಲಿ ಯಾವುದೇ ವಿಶೇಷ ಸೌಲಭ್ಯ ಕಲ್ಪಿಸಿಲ್ಲ, ಆರೋಪಗಳೆಲ್ಲವೂ ನಿರಾಧಾರ ಎಂದು ಹೇಳಿದರು.
ಮಧ್ಯಾಹ್ನದ ವೇಳೆಗೆ ತಮ್ಮ ಬೆಂಬಲಿಗರೊಂದಿಗೆ ಜೈಲಿಗೆ ಬಂದಿದ್ದ ದಿನಕರನ್ ಶಶಿಕಲಾ ಭೇಟಿ ಮಾಡಲು ಅವಕಾಶ ನೀಡುವಂತೆ ಒತ್ತಾಯಿಸಿದರು. ಆದರೆ ಜೈಲಿನ ಸಮೀಪದ ಚೆಕ್ ಪೋಸ್ಟ್ ಬಳಿಯೇ ಅವರನ್ನು ತಡೆದ ಅಧಿಕಾರಿಗಳು ಭೇಟಿ ಮಾಡಲು ಅವಕಾಶ ನೀಡದೇ ವಾಪಸ್ ಕಳುಹಿಸಿದರು.
ಈ ವೇಳೆ ದಿನಕರನ್ ಬೆಂಬಲಿಗರು ಜೈಲು ಸಿಬ್ಬಂದಿ ವಿರುದ್ಧ ಘೋಷಣೆ ಕೂಗಿ, ಹಿರಿಯ ರಾಜಕಾರಣಿಗಳಿಗೆ ಕರೆ ಮಾಡಲು ಯತ್ನಿಸಿದರೂ ಯಾವುದೇ ಪ್ರಯೋಜನವಾಗಲಿಲ್ಲ.  ಆದರೆ ಅಂತಿಮವಾಗಿ  ಶಶಿಕಲಾ ಭೇಟಿ ಮಾಡಲು ಸಾಧ್ಯವಾಗದೇ ದಿನಕರ್ ವಾಪಸ್ ತೆರಳಿದರು.
ಶಶಿಕಲಾ ಭೇಟಿ ಮಾಡಲು ದಿನಕರನ್ ಮುಂಚಿತವಾಗಿ ಅನುಮತಿ ಪಡೆದಿರಲಿಲ್ಲ ಹೀಗಾಗಿ ಅವರ ಭೇಟಿಗೆ ಅವಕಾಶ ಕಲ್ಪಿಸಲಾಗಲಿಲ್ಲ ಎಂದು ಜೈಲು ಅಧಿಕಾರಿಗಳು ಸ್ಪಷ್ಟ ಪಡಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT