ಕೈಲಾಶ್ ಸತ್ಯಾರ್ಥಿ 
ರಾಜ್ಯ

ಶಿಕ್ಷಣವಿಲ್ಲದೇ ಸಾಮಾಜಿಕ ನ್ಯಾಯ ಸಾಧ್ಯವಿಲ್ಲ: ಕೈಲಾಶ್ ಸತ್ಯಾರ್ಥಿ

ನಾನು ಸಮಾಜದಿಂದ ಬಹಿಷ್ಕೃತಗೊಂಡಿದ್ದೆ ಹಾಗಾಗಿ ನಾನು ಇಡೀ ಸಮಾಜದ ಜಾತಿ ವ್ಯನಸ್ಥೆ ಬದಲಾಯಿಸಲು ನಿರ್ಧರಿಸಿದೆ ಎಂದು ನೊಬೆಲ್ ...

ಬೆಂಗಳೂರು: ನಾನು ಸಮಾಜದಿಂದ ಬಹಿಷ್ಕೃತಗೊಂಡಿದ್ದೆ ಹಾಗಾಗಿ ನಾನು ಇಡೀ ಸಮಾಜದ ಜಾತಿ ವ್ಯನಸ್ಥೆ ಬದಲಾಯಿಸಲು ನಿರ್ಧರಿಸಿದೆ ಎಂದು ನೊಬೆಲ್ ಪುರಸ್ಕೃತ ಸಾಮಾಜಿಕ ಹೋರಾಟಗಾರ ಕೈಲಾಶ್ ಸತ್ಯಾರ್ಥಿ ಹೇಳಿದ್ದಾರೆ.
ಕರ್ನಾಟಕ ಸರ್ಕಾರದ ವತಿಯಿಂದ ಜಿಕೆವಿಕೆ ಆವರಣದಲ್ಲಿ ಆಯೋಜಿಸಲಾಗಿರುವ ಡಾ. ಬಿ.ಆರ್. ಅಂಬೇಡ್ಕರ್ ಅಂತರರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮೊದಲ ನಮ್ಮನ್ನು ನಾವು ಸ್ವತಃ ಶುದ್ಧೀಕರಿಸಬೇಕು, ಗಂಗಾ ನದಿಯಲ್ಲಿ ಸ್ನಾನ ಮಾಡಿ, 101 ಪೂಜಾರಿಗಳ ಪಾದ ತೊಳೆದು  ಆ ನೀರು ಕಡಿಯಬೇಕೆಂದು ನನಗೆ ಆದೇಶವಾಗಿತ್ತು.  ಮನೆಯಲ್ಲಿ ಪ್ರತ್ಯೇಕ ಕೊಠಡಿ ನೀಡಲಾಗಿತ್ತು ಎಂದು ಸತ್ಯಾರ್ಥಿ ತಮ್ಮ ಬಾಲ್ಯದಲ್ಲಿ ನಡೆದ ಘಟನೆಗಳ ಬಗ್ಗೆ ತಿಳಿಸಿದ್ದಾರೆ.
ಬ್ರಾಹ್ಮಣರ ಕುಟುಂಬದಲ್ಲಿ ಹುಟ್ಟಿದ್ದರೂ ತಮ್ಮದೇ ಸ್ವಂತ ಕುಟುಂಬದಿಂದ ಅವರನ್ನು ಹೊರಗಿಡಲಾಗಿತ್ತು. ಗ್ರಾಮದಲ್ಲಿ  ಮೇಲ್ಜಾತಿ ಜನರಿಗೆ ದಲಿತರು ಅಡುಗೆ ಮಾಡಿ ಕೊಡುವಂತೆ ಅವಕಾಶ ಕಲ್ಪಿಸಲಾಗಿತ್ತು. 
ತಮ್ಮ ಹೆಸರಿನಲ್ಲಿ ಶರ್ಮಾ ಎಂಬ ಸರ್ ನೇಮ್  ಬದಲು ಸತ್ಯಾರ್ಥಿ (ಸತ್ಯ ಹುಡುಕುವವನು) ಎಂದು ಬದಲಾಯಿಸಿಕೊಂಡೆ ಎಂದು ಹೇಳಿದ ಅವರು, ದಲಿತ ವ್ಯಕ್ತಿಯನ್ನು ದೇವಾಸ್ಥಾನದೊಳಗೆ ಕರೆದೊಯ್ದಿದ್ದಕ್ಕೆ, ಪೂಜಾರಿ ಮತ್ತು ಅಲ್ಲಿಗೆ ಬಂದ ಗುಂಪೊಂದು ನನ್ನ ಮೇಲೆ ಹಲ್ಲೆ ಮಾಡಿ, ನಾನು ರಕ್ತದ ಮಡುವಿನಲ್ಲಿ ಬಿದ್ದಿದ್ದೆ ಎಂದು ಸತ್ಯಾರ್ಥಿ ಹೇಳಿದರು. 
ಅಂಬೇಡ್ಕರ್ ಅವರನ್ನು ನೆನಪಿಸಿಕೊಂಡರೇ ಮಾತ್ರ ಸಾಲದು, ಶಿಕ್ಷಣವಿಲ್ಲದೇ  ಸಾಮಾಜಿಕ ನ್ಯಾಯ ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಭಾರತದಲ್ಲಿ 16.8 ಕೋಟಿ ಮಕ್ಕಳು ಬಾಲ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ, ಶೈಕ್ಷಣಿಕ ಹಕ್ಕು ಪ್ರತಿಪಾದಿಸಿದವರಲ್ಲಿ ಅಂಬೇಡ್ಕರ್ ಮೊದಲಿಗರು ಎಂದು ಹೇಳಿದ್ದಾರೆ. ಸಾವಿರಾರು ಮಕ್ಕಳು ಶಿಕ್ಷಣ ಪಡೆಯುವ ಕನಸು ಕಾಣುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

BPSC ಪರೀಕ್ಷೆ ವಿವಾದ: ಬಿಹಾರ ಸಿಎಂ ನಿವಾಸದ ಬಳಿ ಬ್ಯಾರಿಕೇಡ್ ಮುರಿದ ವಿದ್ಯಾರ್ಥಿಗಳು, ಜಲಫಿರಂಗಿಗೆ ಜಗ್ಗದೆ ರೇನ್ ಡ್ಯಾನ್ಸ್ ಮಾಡಿ ಪ್ರತಿಭಟನೆ!

'ಕಾಂಗ್ರೆಸ್ ಸರ್ಕಾರದ ವೈಫಲ್ಯ' ವಿರೋಧಿಸಿ ಸೆಪ್ಟೆಂಬರ್ 1 ರಿಂದ 10ರವರೆಗೆ ರಾಯಚೂರಿನಿಂದ ಬಳ್ಳಾರಿಗೆ BJP-JDS ಪಾದಯಾತ್ರೆ!

Uorfi Javed: ಮದ್ವೆ ಆಗ್ತೀನೋ ಇಲ್ಲವೋ ಗೊತ್ತಿಲ್ಲ, ಆದ್ರೆ ತಾಯಿ ಆಗ್ತೀನಿ; ಸೀಕ್ರೆಟ್‌ ರಿವೀಲ್ ಮಾಡಿದ ಉರ್ಫಿ ಜಾವೇದ್