ಕಾಂಗ್ರೆಸ್ ಶಾಸಕ ಎನ್.ಎ.ಹ್ಯಾರಿಸ್ 
ರಾಜ್ಯ

ಇರಾಕ್ ನಲ್ಲಿ ಸೆರೆಯಲ್ಲಿರುವ 39 ಭಾರತೀಯರನ್ನು ಕರೆತರುವಲ್ಲಿ ಕೇಂದ್ರ ಸರ್ಕಾರ ವಿಫಲ: ಕಾಂಗ್ರೆಸ್ ಆರೋಪ

ಮೂರು ವರ್ಷಗಳ ಹಿಂದೆ ಐಸಿಸ್ ಉಗ್ರರಿಂದ ಇರಾನ್ ನ ಮೊಸುಲ್ ನಗರದಿಂದ ಅಪಹರಣಕ್ಕೀಡಾದ...

ಬೆಂಗಳೂರು: ಮೂರು ವರ್ಷಗಳ ಹಿಂದೆ ಐಸಿಸ್ ಉಗ್ರರಿಂದ ಇರಾನ್ ನ ಮೊಸುಲ್ ನಗರದಿಂದ ಅಪಹರಣಕ್ಕೀಡಾದ 39 ಮಂದಿ ಭಾರತೀಯರನ್ನು ವಾಪಸ್ಸು ಕರೆತರಲು ಭಾರತ ಸರ್ಕಾರದ ಪ್ರಯತ್ನ ಶೂನ್ಯವಾಗಿದೆ ಎಂದು ಕಾಂಗ್ರೆಸ್ ಪಕ್ಷ ಆರೋಪಿಸಿದೆ. ಅಲ್ಲದೆ ಮಧ್ಯ ಪ್ರಾಚ್ಯ ರಾಷ್ಟ್ರಗಳಿಗೆ ಪ್ರಧಾನಿ ಮೋದಿಯವರು ಭೇಟಿ ನೀಡಿದ್ದರ ಫಲಿತಾಂಶವೇನು ಎಂದು ಪ್ರಶ್ನಿಸಿದೆ.
ಬೆಂಗಳೂರಿನಲ್ಲಿಂದು ಎಎನ್ಐ ಸುದ್ದಿ ಸಂಸ್ಥೆಯೊಂದಿಗೆ ಮಾತನಾಡಿದ ಕಾಂಗ್ರೆಸ್ ನಾಯಕ ಎನ್.ಎ.ಹ್ಯಾರಿಸ್, ಐಸಿಸ್ ಉಗ್ರರಿಗೆ ಸಿಕ್ಕಿಹಾಕಿಕೊಂಡಿರುವ ಭಾರತೀಯರನ್ನು ಕರೆತರುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಕಳೆದ ಆರು ತಿಂಗಳಿನಿಂದ ಈ ವಿಷಯ ಬಾಕಿ ಉಳಿದಿದೆ. ನಮ್ಮ ಸರ್ಕಾರ ಏನು ಮಾಡುತ್ತಿದೆ ಎಂದು ಗೊತ್ತಾಗುತ್ತಿಲ್ಲ. ಐಸಿಸ್ ಉಗ್ರರ ಬಳಿ ಸಿಕ್ಕಿಹಾಕಿಕೊಂಡಿರುವ ಮುಗ್ಧ ಜನರ ಕುಟುಂಬದವರು ಕಷ್ಟಪಡುತ್ತಿದ್ದಾರೆ. ನಮ್ಮ ದೇಶದ ಪ್ರಯತ್ನ ಶೂನ್ಯವಾಗಿದೆ. ಮಧ್ಯ ಪ್ರಾಚ್ಯಾಕ್ಕೆ ಭೇಟಿ ನೀಡಿರುವ ಪ್ರಧಾನಿಯವರ ಸಾಧನೆಯೇನು ಎಂದು ಕೇಳಿದರು.
ಇದರ ಹೊಣೆಯನ್ನು ವಿದೇಶಾಂಗ ಸಚಿವಾಲಯ ಹೊರಬೇಕು. ವಿದೇಶಗಳಲ್ಲಿರುವ ಭಾರತೀಯರು ತೊಂದರೆಯಲ್ಲಿದ್ದರೆ ಭಾರತ ಸರ್ಕಾರ ಸಹಾಯ ಮಾಡದಿದ್ದರೆ ಮತ್ತೆ ಯಾರು ಮಾಡಬೇಕು ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

SCROLL FOR NEXT