ಸಾಂದರ್ಭಿಕ ಚಿತ್ರ 
ರಾಜ್ಯ

ಆಗಸ್ಟ್ 6ರಂದು ಬೆಂಗಳೂರಿನಲ್ಲಿ ಬಿಜೆಪಿ ಸಾಮಾಜಿಕ ಮಾಧ್ಯಮ ಸಮಾವೇಶ

ಸಾಮಾಜಿಕ ಮಾಧ್ಯಮ ಇಂದು ಜನತೆಗೆ ಪರಿಣಾಮಕಾರಿಯಾಗಿ ತಲುಪುತ್ತಿರುವ ಸಂದರ್ಭದಲ್ಲಿ ಜನತೆಗೆ...

ಬೆಂಗಳೂರು: ಸಾಮಾಜಿಕ ಮಾಧ್ಯಮ ಇಂದು ಜನತೆಗೆ ಪರಿಣಾಮಕಾರಿಯಾಗಿ ತಲುಪುತ್ತಿರುವ ಸಂದರ್ಭದಲ್ಲಿ ಜನತೆಗೆ ಬಹುಬೇಗನೆ ತಲುಪಲು ಭಾರತೀಯ ಜನತಾ ಪಾರ್ಟಿ ಬೃಹತ್ ಸಾಮಾಜಿಕ ಮಾಧ್ಯಮ ಸಮಾಲೋಚನೆ ನಡೆಸಲು ಮುಂದಾಗಿದೆ. ಮುಂದಿನ ವರ್ಷ ವಿಧಾನಸಭೆ ಚುನಾವಣೆ ಇರುವುದರಿಂದ ಮತದಾರರನ್ನು ಸೆಳೆಯುವ ಕಾರ್ಯತಂತ್ರವಾಗಿ ಈ ಸಾಮಾಜಿಕ ಮಾಧ್ಯಮ ಸಮಾಲೋಚನೆ ಬೆಂಗಳೂರಿನಲ್ಲಿ ನಡೆಯಲಿದೆ.
ಪಕ್ಷದ ಸಾಮಾಜಿಕ ಮಾಧ್ಯಮ ಘಟಕ ಈಗಾಗಲೇ ಎಲ್ಲಾ 224 ವಿಧಾನಸಭಾ ಕ್ಷೇತ್ರಗಳಲ್ಲಿ ಸಾಮಾಜಿಕ ಮಾಧ್ಯಮ ತಂಡವನ್ನು ನೇಮಿಸುವ ಕಾರ್ಯದಲ್ಲಿ ತೊಡಗಿದೆ. ಪ್ರತಿ ತಂಡದಲ್ಲಿ ಕನಿಷ್ಠ 20 ಮಂದಿ ಸದಸ್ಯರಿರುತ್ತಾರೆ. ಅದಕ್ಕೆ ಹೊರತಾಗಿ ಪಕ್ಷಕ್ಕೆ ಉತ್ಸಾಹಿ ಯುವಕ, ಯುವತಿಯರ ಹೆಸರುಗಳನ್ನು ದಾಖಲು ಮಾಡಿಕೊಳ್ಳಲಾಗುತ್ತಿದೆ. 
ಈ ಕುರಿತು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಜೊತೆ ಮಾತನಾಡಿದ, ಜಿಲ್ಲಾ ಬಿಜೆಪಿ ಸಾಮಾಜಿಕ ಘಟಕದ ಸಂಚಾಲಕ, ಬಾಲಾಜಿ ಶ್ರೀನಿವಾಸ್, ಬಿಜೆಪಿಯ ಸಾಮಾಜಿಕ ಮಾಧ್ಯಮದ ಸಕ್ರಿಯ ಕಾರ್ಯಕರ್ತರ ಬೃಹತ್ ಮೇಳವನ್ನು ಆಯೋಜಿಸಲಿದ್ದು, ಆಗಸ್ಟ್ 6ರಂದು ಅರಮನೆ ಮೈದಾನದಲ್ಲಿ ನಡೆಯಲಿದೆ. ಇಲ್ಲಿಯವರೆಗೆ 12,000 ಜನರು ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೆಸರು ದಾಖಲು ಮಾಡಿಕೊಂಡಿದ್ದಾರೆ. ಸುಮಾರು 6,000 ಜನರು ಭಾಗವಹಿಸುವ ನಿರೀಕ್ಷೆಯಿದೆ ಎಂದು ಹೇಳಿದರು.
ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಖಾತೆ ಸಚಿವೆ ನಿರ್ಮಲಾ ಸೀತಾರಾಮನ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಬಾಲಾಜಿ ಶ್ರೀನಿವಾಸ್ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

SCROLL FOR NEXT