ಯು.ಆರ್. ರಾವ್ (ಸಂಗ್ರಹ ಚಿತ್ರ) 
ರಾಜ್ಯ

ಬಾಹ್ಯಾಕಾಶ ವಿಜ್ಞಾನಿ, ಇಸ್ರೋ ಮಾಜಿ ಅಧ್ಯಕ್ಷ ಯು.ಆರ್. ರಾವ್ ವಿಧಿವಶ

ಅಂತರಾಷ್ಟ್ರೀಯ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯ ನೇತೃತ್ವವಹಿಸಿದ್ದ ಯು.ಆರ್. ರಾವ್ ಅವರು ಸೋಮವಾರ ವಿಧಿವಶವರಾಗಿದ್ದಾರೆ...

ಬೆಂಗಳೂರು: ಅಂತರಾಷ್ಟ್ರೀಯ ಖ್ಯಾತ ಬಾಹ್ಯಾಕಾಶ ವಿಜ್ಞಾನಿ ಹಾಗೂ ಭಾರತದ ಮೊದಲ ಉಪಗ್ರಹ ಆರ್ಯಭಟ ಉಡಾವಣೆಯ ನೇತೃತ್ವವಹಿಸಿದ್ದ ಯು.ಆರ್. ರಾವ್ ಅವರು ಸೋಮವಾರ ವಿಧಿವಶವರಾಗಿದ್ದಾರೆ. 


ಹಲವು ದಿನಗಳಿಂದಲೂ ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ ಯು.ಆರ್. ರಾವ್ ಅವರು ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. 

ಇಸ್ರೋ ಅಧ್ಯರಾಗಿ ಸೇವೆ ಸಲ್ಲಿಸಿದ್ದ ಯು.ಆರ್. ರಾವ್ ಅವರಿಗೆ 85 ವರ್ಷ ವಯಸ್ಸಾಗಿತ್ತು. ಹಲವು ಪ್ರಮುಖ ಯೋಜನೆಗಳಿಗೂ ರೂವಾರಿಯಾಗಿದ್ದರು. ವಿದೇಶಿ ವಿಶ್ವವಿದ್ಯಾಲಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರಿಗೆ ಹಲವಾರು ಅಂತರಾಷ್ಟ್ರೀಯ ಹಾಗೂ ರಾಷ್ಟ್ರೀಯ ಗೌರವಗಳು ಸಂದಿದ್ದವು. 

ಸತೀಶ್ ಧವನ್ ಅವರ ನಂತರ ಇಸ್ರೋ ಅಧ್ಯಕ್ಷರಾಗಿ ಹತ್ತು ವರ್ಷಗಳ ಕಾಲ ರಾವ್ ಅವರು ಜವಾಬ್ದಾರಿ ವಹಿಸಿದ್ದರು. 1984ರಿಂದ 1994ರ ವರೆಗೆ ಇಸ್ರೋ ಮುಖ್ಯಸ್ಥರಾಗಿ ಸೇವೆ ಸಲ್ಲಿಸಿದ್ದ ರಾವ್ ಅವರು ತಿರುವನಂತಪುರಂ ನಲ್ಲಿ ಇಂಡಿಯನ್ ಇನ್ಸ್ಟಿಟ್ಯೂಟ್ ಆಫ್ ಸೈನ್ಸ್ ಆ್ಯಂಡ್ ಟೆಕ್ನಾಲಜಿಯ ಚಾನ್ಸಲರ್ ಆಗಿ ಸೇವೆ ಸಲ್ಲಿಸುತ್ತಿದ್ದರು. 

ಕರ್ನಾಟಕ ಉಡುಪಿಯಲ್ಲಿನ ಹಳ್ಳಿಯೊಂದರಲ್ಲಿ ಜನಿಸಿದ್ದ ರಾವ್ ಅವರು, ಎಂಜಿಕೆ ಮೆನನ್, ಸತೀಶ್ ಧವನ್ ಮತ್ತು ವಿಕ್ರಮ್ ಸಾರಾಭಾಯಿ ಅಂಥಹವರ ಜೊತೆಗೆ ಕಾರ್ಯನಿರ್ವಹಿಸಿದ್ದರು. ವಿಕ್ರಂ ಸಾರಾಭಾಯ್ ಮಾರ್ಗದರ್ಶನದಲ್ಲಿ ವಿಶ್ವವಿಕರಣಗಳ ಬಗ್ಗೆ ಅಧ್ಯಯನ ಮಾಡಿದ್ದರು. ಆರ್ಯಭಟದಿಂದ ಮೊದಲುಗೊಂಡ ಮಂಗಳಯಾನದವರೆಗೆ ರಾವ್ ಅವರ ಕೊಡುಗೆ ಅನನ್ಯವಾದದ್ದು ಎಂಬುದನ್ನು ಸ್ಮರಿಸಬಹುದು. ಪ್ರಸಕ್ತ ವರ್ಷದ ಜನವರಿ ತಿಂಗಳಿನಲ್ಲಿ ರಾವ್ ಅವರಿಗೆ ಪದ್ಮ ವಿಭೂಷಣ ಗೌರವ ನೀಡಲಾಗಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT