ಸಂಗ್ರಹ ಚಿತ್ರ 
ರಾಜ್ಯ

ಮೈಸೂರು ದಸರಾ 2017: ಸರಳ, ದುರ್ಗಾ ಪರಮೇಶ್ವರಿಗೆ ವಿಶ್ರಾಂತಿ, ಅರ್ಜುನನಿಗೆ ಅಂಬಾರಿ ಹೊಣೆ!

ಪ್ರಸಕ್ತ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ದಸರಾ ಆನೆಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಬಾರಿಯೂ ಅರ್ಜುನ ಆನೆಗೆ ಅಂಬಾರಿ ಹೊರುವ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ.

ಮೈಸೂರು: ಪ್ರಸಕ್ತ ಸಾಲಿನ ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವ ದಸರಾ ಆನೆಗಳ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡಿದ್ದು, ಈ ಬಾರಿಯೂ ಅರ್ಜುನ ಆನೆಗೆ ಅಂಬಾರಿ ಹೊರುವ ಜವಾಬ್ದಾರಿ ನೀಡಲು ನಿರ್ಧರಿಸಲಾಗಿದೆ.

ಮೈಸೂರು ಅರಣ್ಯಾಧಿಕಾರಿಗಳ ತಂಡ ದಸರೆಗಾಗಿ ಒಟ್ಟು 15 ಆನೆಗಳ ಪಟ್ಟಿಯನ್ನು ಅಂತಿಮಗೊಳಿಸಿದ್ದು, ಕಳೆದ ವರ್ಷದ ಉಚ್ಸವದಲ್ಲಿ ಪಾಲ್ಗೊಂಡಿದ್ದ ಸರಳ, ದುರ್ಗಾ ಪರಮೇಶ್ವರಿ ಆನೆಗಳಿಗೆ ಈ ಬಾರಿ ವಿಶ್ರಾಂತಿ ನೀಡಲು  ನಿರ್ಧರಿಸಲಾಗಿದೆ. ಸರಳ, ದುರ್ಗಾ ಪರಮೇಶ್ವರಿ ಆನೆಗಳು ಗರ್ಭಧರಿಸಿದ್ದು ಇದೇ ಕಾರಣಕ್ಕೆ ಈ ಬಾರಿ ದಸರೆಯಿಂದ ವಿಶ್ರಾಂತಿ ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಉಳಿದಂತೆ ಕಳೆದ ಸಾಲಿನಂತೆಯೇ ಈ  ಬಾರಿಯೂ ಅರ್ಜುನ ಆನೆ ಅಂಬಾರಿ ಹೊರಲಿದ್ದು, ಉಳಿದಂತೆ ಬಲರಾಮ, ಅಭಿಮನ್ಯು ಮತ್ತು ಗೋಪಾಲವಾಮಿ, ದುಬಾರೆ ಆನೆ ಶಿಬಿರದಲ್ಲಿರುವ ಕಾವೇರಿ, ವಿಜಯ, ವಿಕ್ರಮ್, ಗೋಪಿ, ಹರ್ಷ ಮತ್ತು ಪ್ರಶಾಂತ, ಗಜೇಂದ್ರ ದಸರೆಯಲ್ಲಿ  ಪಾಲ್ಗೊಳ್ಳಲಿವೆ.

ಅಂತೆಯೇ ಈ ವರ್ಷ 4 ಹೊಸ ಆನೆಗಳನ್ನು ಉತ್ಸವಕ್ಕೆ ಆಯ್ಕೆ ಮಾಡಲಾಗಿದ್ದು, ಈ ಬಾರಿ ಕೃಷ್ಣ, ದ್ರೋಣ ಮತ್ತು ಭೀಮಾ ಮತ್ತು ವರಲಕ್ಷ್ಮಿ ಎಂಬ ಆನೆಗಳನ್ನು ಉತ್ಸವಕ್ಕೆ ಆಯ್ಕೆ ಮಾಡಲಾಗಿದೆ ಎಂದು ಡಿಸಿಎಫ್ (ವನ್ಯಜೀವಿ ) ವಿ. ಏಡುಕೊಂಡಲು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT