ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಆನ್ ಲೈನ್ ಪೋರ್ಟಲ್ ಮೂಲಕ ಜನರನ್ನು ವಂಚಿಸುತ್ತಿದ್ದ ನಾಲ್ವರು ಯುವಕರ ಬಂಧನ

ಆನ್ ಲೈನ್ ಮೂಲಕ ಸಾವಿರಾರು ಗ್ರಾಹಕರನ್ನು ವಂಚಿಸುತ್ತಿದ್ದ ಜಾರ್ಖಂಡ್ ಮೂಲದ ನಾಲ್ವರನ್ನು ಪೊಲೀಸರು...

ಬೆಂಗಳೂರು: ಆನ್ ಲೈನ್ ಮೂಲಕ ಸಾವಿರಾರು ಗ್ರಾಹಕರನ್ನು ವಂಚಿಸುತ್ತಿದ್ದ ಜಾರ್ಖಂಡ್ ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕಾಲೇಜು ಬಿಟ್ಟ ಯುವಕರೆಂದು ಹೇಳಲಾಗುತ್ತಿರುವ ನಾಲ್ವರ ಕಂಪ್ಯೂಟರ್ ನಲ್ಲಿ 16,000 ಗ್ರಾಹಕರ ಬ್ಯಾಂಕ್ ಖಾತೆಗಳು, ಪ್ಯಾನ್ ಕಾರ್ಡು ಸಂಖ್ಯೆಗಳು ಮತ್ತು 460 ಸಿಮ್ ಕಾರ್ಡುಗಳನ್ನು ಕಂಡ ತನಿಖಾಧಿಕಾರಿಗಳಿಗೆ ನಿಜಕ್ಕೂ ಆಘಾತವಾಗಿತ್ತು. ಹೂಡಿಕೆಯಿಂದ ಹಣ ಸಿಗಲಿದೆ ಎಂದು ಈ ನಾಲ್ವರು ಯುವಕರು ಜನರನ್ನು ವಂಚಿಸುತ್ತಿದ್ದರು. 
ಸಿಐಡಿಯ ಆರ್ಥಿಕ ಅಪರಾಧಗಳ ವಿಭಾಗದ ತನಿಖಾಧಿಕಾರಿಗಳು ಈ ಆನ್ ಲೈನ್ ದಂಧೆಯನ್ನು ಬಯಲಿಗೆಳೆದಿದ್ದು, ತಮ್ಮ ಮೋಸದ ಜಾಲ ಹೆಣೆಯಲು ಆನ್ ಲೈನ್ ಪೋರ್ಟಲ್ ಮೂಲಕ ಎಲೆಕ್ಟ್ರಾನಿಕ್ಸ್ ವಸ್ತುಗಳನ್ನು ಮತ್ತು ಇತರ ಗೃಹೋಪಯೋಗಿ ಸಲಕರಣೆಗಳನ್ನು ಕಡಿಮೆ ಮೊತ್ತಕ್ಕೆ ಆನ್ ಲೈನ್ ಮೂಲಕ ನೀಡುತ್ತಿದ್ದರು. ಗ್ರಾಹಕರ ಖಾತೆ ಸಂಖ್ಯೆಯನ್ನು  ಹೊಂದಿದ್ದ 15 ಮೊಬೈಲ್ ಫೋನ್ ಗಳು, ಲ್ಯಾಪ್ ಟಾಪ್ ಮತ್ತು ಹಾರ್ಡ್ ಡಿಸ್ಕ್ ಗಳನ್ನು ಆರೋಪಿಗಳಿಂದ ವಶಪಡಿಸಿಕೊಂಡಿದ್ದಾರೆ. ಗ್ರಾಹಕರು ಹಾಕುವ ಬಂಡವಾಳದ ಮೇಲೆ ಶೇಕಡಾ 2ರಷ್ಟು ಬಡ್ಡಿ ನೀಡುವುದಾಗಿ ಇವರು ಸುಳ್ಳು ಭರವಸೆ ನೀಡಿದ್ದರು.
ಬಂಧಿತರನ್ನು ಜಾರ್ಖಂಡ್ ಮೂಲದ ಬೊಕರೊದ ಅಜಯ್ ಸಿಂಗ್, ಸೂರಜ್ ಕುಮಾರ್, ಸುಶೀಲ್ ಕುಮಾರ್ ಮತ್ತು ಬಿಪ್ಲವ್ ಕುಮಾರ್ ಎಂದು ಗುರುತಿಸಲಾಗಿದೆ. ಇವರು ಉನ್ನತ ವ್ಯಾಸಂಗಕ್ಕೆಂದು 5 ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದರು. ಅವರು ಡಿಪ್ಲೊಮಾಗೆ ಸೇರಿ ಅರ್ಧಕ್ಕೆ ವಿದ್ಯಾಭ್ಯಾಸ ಬಿಟ್ಟಿದ್ದರು. ಅವರಲ್ಲಿಬ್ಬರು ಕಾಲ್ ಸೆಂಟರ್ ನಲ್ಲಿ ಕೆಲಸ ಮಾಡುತ್ತಿದ್ದರು. 
ಈ ನಾಲ್ವರ ಗ್ಯಾಂಗ್ ಜನರಿಂದ ಸುಮಾರು 15 ಲಕ್ಷ ರೂಪಾಯಿ ವಂಚಿಸಿರಬಹುದು ಎಂದು ಸಿಐಡಿ ಅಧಿಕಾರಿಗಳ ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

SCROLL FOR NEXT