ಏರ್ ಇಂಡಿಯಾ ವಿಮಾನ 
ರಾಜ್ಯ

ಆಗಸ್ಟ್ ನಿಂದ ಪ್ರತಿದಿನ ಹುಬ್ಬಳ್ಳಿ-ಬೆಂಗಳೂರು ಏರ್‌ ಇಂಡಿಯಾ ವಿಮಾನ ಸಂಚಾರ

ಪ್ರತಿದಿನ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ವಿಮಾನ ಆಗಸ್ಚ್ ನಿಂದ ಸಂಚರಿಸಲಿದೆ, ಸದ್ಯ ವಾರದಲ್ಲಿ ಐದು ದಿನ ಮಾತ್ರ ವಿಮಾನ ...

ಹುಬ್ಬಳ್ಳಿ: ಪ್ರತಿದಿನ ಹುಬ್ಬಳ್ಳಿಯಿಂದ ಬೆಂಗಳೂರಿಗೆ ಏರ್ ಇಂಡಿಯಾ ವಿಮಾನ ಆಗಸ್ಚ್ ನಿಂದ ಸಂಚರಿಸಲಿದೆ, ಸದ್ಯ ವಾರದಲ್ಲಿ ಐದು ದಿನ ಮಾತ್ರ ವಿಮಾನ ಸಂಚಾರವಿದೆ. 
ಏರ್‌ ಇಂಡಿಯಾ ಮುಖ್ಯ ಕಚೇರಿಯಲ್ಲಿ ಮಂಗಳವಾರ ಸಂಸದ ಪ್ರಹ್ಲಾದ ಜೋಶಿ ಹಾಗೂ ವಿಧಾನಸಭೆ ವಿರೋಧ  ಪಕ್ಷದ ನಾಯಕ ಜಗದೀಶ ಶೆಟ್ಟರ ಅವರೊಂದಿಗೆ ಎಂ.ಡಿ. ಅಶ್ವಿ‌ನ್‌ ಅವರನ್ನು ಭೇಟಿಯಾಗಿ ಬೆಂಗಳೂರು-ಹುಬ್ಬಳ್ಳಿ ಏರ್‌ ಇಂಡಿಯಾ ವಿಮಾನವು ಪ್ರತಿದಿನ ಹಾರಾಟ  ನಡೆಸುವಂತೆ ಆಗ್ರಹಿಸಿದರು. 
ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಎಂಡಿ ಲೋಹಾನಿ, ಆಗಸ್ಟ್‌ ಮೊದಲ ವಾರದಿಂದ ಬೆಂಗಳೂರು-ಹುಬ್ಬಳ್ಳಿ ಪ್ರತಿದಿನ ಹಾರಾಟ ನಡೆಸಲಾಗುವುದೆಂದು ತಿಳಿಸಿದ್ದಾರೆ. ಮೂರು ತಿಂಗಳ ಹಿಂದೆಯೇ ಹುಬ್ಬಳ್ಳಿ-ಧಾರವಾಡ ವಿಮಾನ ಸಂಚಾರ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಸಿಬ್ಬಂದಿ ಕೊರತೆ ಕಾರಣ ಈ ಯೋಜನೆ ಮುಂದೂಡಲಾಯಿತು. 
ಹುಬ್ಬಳ್ಳಿ-ಮುಂಬೈ ನಡುವೆ ಸಂಪರ್ಕ ಕಲ್ಪಿಸಲು ಬಹುದಿನಗಳ ಒತ್ತಾಯವನ್ನು ಈಡೇರಿಸುವಂತೆ ಈ ವೇಳೆ ಕೋರಲಾಯಿತು. ಇದಕ್ಕೆ ಪ್ರತಿಕ್ರಿಯಿಸಿದ ಎಂಡಿ ಅಶ್ವಿ‌ನ್‌, ಈ ಮಾರ್ಗ ಮಧ್ಯ ವಿಮಾನ ಹಾರಾಟಕ್ಕೆ ಪೂರ್ವಭಾವಿಯಾಗಿ ಕೈಗೊಳ್ಳಬೇಕಾದ ತಾಂತ್ರಿಕ ಹಾಗೂ ವೇಳಾಪಟ್ಟಿ ಹೊಂದಾಣಿಕೆ ಕಾರ್ಯ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT