ಧರಂ ಸಿಂಗ್ ಅಂತ್ಯ ಸಂಸ್ಕಾರ 
ರಾಜ್ಯ

ಮಾಜಿ ಸಿಎಂ ಧರಂ ಸಿಂಗ್ ಪಂಚಭೂತಗಳಲ್ಲಿ ಲೀನ

ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ರಾಜ್ಯ ರಾಜಕಾರಣದಲ್ಲಿ ಅಜಾತ ಶತ್ರು ಎಂದು ಕರೆಯಿಸಿಕೊಳ್ಳುತ್ತಿದ್ದ ಮಾಜಿ....

ಜೇವರ್ಗಿ: ನಿನ್ನೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದ ರಾಜ್ಯ ರಾಜಕಾರಣದಲ್ಲಿ ಅಜಾತ ಶತ್ರು ಎಂದು ಕರೆಯಿಸಿಕೊಳ್ಳುತ್ತಿದ್ದ ಮಾಜಿ ಮುಖ್ಯಮಂತ್ರಿ ಎನ್. ಧರಂ ಸಿಂಗ್ ಶುಕ್ರವಾರ ಪಂಚಭೂತಗಳಲ್ಲಿ ಲೀನವಾದರು. 
ಧರಂ ಸಿಂಗ್ ಅವರ ಹುಟ್ಟೂರು ನೆಲೋಗಿಯ ತೋಟದಲ್ಲಿ ಸಕಲ ಸರ್ಕಾರಿ ಗೌರವದೊಂದಿಗೆ ಇಂದು ಅಂತ್ಯ ಸಂಸ್ಕಾರ ನಡೆಯಿತು. ಅವರ ಹಿರಿಯ ಪುತ್ರ ವಿಜಯ್ ಸಿಂಗ್ ಅವರು ರಜಪೂತ ಸಂಪ್ರದಾಯದಂತೆ ಅಂತಿಮ ಕಾರ್ಯ ನೆರವೇರಿಸಿದರು. ನರಸಿಂಹ ಶಾಸ್ತ್ರಿ, ವಿಶ್ವಶರ್ಮ ನೇತೃತ್ವದಲ್ಲಿ ಅಂತಿಮ ವಿಧಿ ವಿಧಾನ ನೆರವೇರಿಸಲಾಯಿತು. ಬಳಿಕ ವಿಜಯ್ ಸಿಂಗ್ ಅವರು ಗಂಧದ ಕಟ್ಟಿಗೆಯ ಚಿತೆಗೆ ಅಗ್ನಿಸ್ಪರ್ಶ ಮಾಡಿದರು.
ಅಗ್ನಿಸ್ಪರ್ಶಕ್ಕೂ ಮೊದಲು ಮುಕ್ತಿ ಹವನ ನೆರವೇರಿಸಲಾಯಿತು. ಗಂಧದ ಕಟ್ಟಿಗೆಯ ಚಿತೆಗೆ ವಿಜಯ್ ಅವರು ಗಡಿಗೆ ನೀರು ತುಂಬಿಕೊಂಡು ಮೂರು ಸುತ್ತು ಸುತ್ತಿ, ಬಳಿಕ ಚಿತೆಗೆ ಅಗ್ನಿಸ್ಪರ್ಶ ಮಾಡಿದರು. 
ಅಜಾತಶತ್ರುವಿನ ಅಂತಿಮ ದರ್ಶನಕ್ಕಾಗಿ ನೆಲೋಗಿಗೆ ಜನಸಾಗರವೇ ಹರಿದು ಬಂದಿತ್ತು. ಇಡೀ ಗ್ರಾಮ ಶೋಕಸಾಗರದಲ್ಲಿ ಮುಳುಗಿತ್ತು. ತಮ್ಮ ನೆಚ್ಚಿನ ನಾಯಕನನ್ನು ನೆನೆದು ಕಣ್ಣೀರು ಹಾಕಿದರು.
ಮಾಜಿ ಮುಖ್ಯಮಂತ್ರಿಯ ಅಂತ್ಯ ಸಂಸ್ಕಾರದ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಜಲಸಂಪನ್ಮೂಲ ಸಚಿವ ಎಂಬಿ ಪಾಟೀಲ್, ಮಲ್ಲಿಕಾರ್ಜುನ ಖರ್ಗೆ, ವೀರಪ್ಪ ಮೊಯ್ಲಿ, ದಿಗ್ವಿಜಯ್ ಸಿಂಗ್, ರಾಜ್ಯ ಕಾಂಗ್ರೆಸ್ ಉಸ್ತುವಾರಿ ವೇಣುಗೋಪಾಲ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

IPL 2026: MI vs RCB; ವಾಂಖೆಡೆ ಕ್ರೀಡಾಂಗಣದಲ್ಲಿ ಇತಿಹಾಸ ಬರೆದ ಬೆಂಗಳೂರು, ಅತ್ಯಧಿಕ ಮೊತ್ತ!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

SCROLL FOR NEXT