ಪ್ರತಿಭಟನಾಕಾರರು 
ರಾಜ್ಯ

ಬೆಂಗಳೂರು: ಉದ್ಯೋಗ ಭದ್ರತೆಗೆ ಆಗ್ರಹಿಸಿ ಐಟಿ ಉದ್ಯೋಗಿಗಳಿಂದ ಪ್ರತಿಭಟನೆ

ಉದ್ಯೋಗ ಭದ್ರತೆಗೆ ಆಗ್ರಹಿಸಿ ನಗರದ ಪ್ರತಿಷ್ಠಿತ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಮತ್ತು ಕೆಲಸ ಕಳೆದುಕೊಂಡ ನೂರಾರು ಮಂದಿ....

ಬೆಂಗಳೂರು: ಉದ್ಯೋಗ ಭದ್ರತೆಗೆ ಆಗ್ರಹಿಸಿ ನಗರದ ಪ್ರತಿಷ್ಠಿತ ಐಟಿ ಕಂಪನಿಗಳಲ್ಲಿ ಕೆಲಸ ಮಾಡುತ್ತಿರುವ ಮತ್ತು ಕೆಲಸ ಕಳೆದುಕೊಂಡ ನೂರಾರು ಮಂದಿ ಶನಿವಾರ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಿದರು.
ಐಟಿ ಕಂಪನಿಗಳು ಒತ್ತಾಯಪೂರ್ವಕವಾಗಿ ರಾಜಿನಾಮೆ ಪಡೆಯುತ್ತಿರುವುದನ್ನು ಖಂಡಿಸಿ ಮಾಹಿತಿ ತಂತ್ರಜ್ಞಾನ ಉದ್ಯೋಗಿಗಳ ಒಕ್ಕೂಟ(ಐಟಿಇಯು) ಇಂದು ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ.
ಕಾನೂನು ಬಾಹಿರವಾಗಿ ಸಾಮೂಹಿಕವಾಗಿ ಉದ್ಯೋಗದಿಂದ ತೆಗೆದು ಹಾಕುವುದನ್ನು ನಿಲ್ಲಿಸಬೇಕು ಮತ್ತು ರಾಜ್ಯ ಸರ್ಕಾರ ಐಟಿ ಕ್ಷೇತ್ರದಲ್ಲೂ ಕಡ್ಡಾಯವಾಗಿ ಕಾರ್ಮಿಕ ಕಾನೂನುನ್ನು ಜಾರಿಗೊಳಿಸಬೇಕು ಎಂದು ಐಟಿ ಉದ್ಯೋಗಿಗಳು ಒತ್ತಾಯಿಸಿದ್ದಾರೆ.
ಈ ವೇಳೆ ಇಂಡಿಯನ್ ಎಕ್ಸ್ ಪ್ರೆಸ್ ನೊಂದಿಗೆ ಮಾತನಾಡಿದ ಪ್ರತಿಭಟನಾನಿರತ ವಿಪ್ರೋ ಕಂಪನಿಯ ಉದ್ಯೋಗಿಯೊಬ್ಬರು, ನನಗೆ ಯಾವುದೇ ಸಂದರ್ಭದಲ್ಲೂ ರಾಜಿನಾಮೆ ನೀಡುವಂತೆ ಕಂಪನಿಯ ಎಚ್ ಆರ್ ಯಿಂದ ಕರೆ ಬರಬಹುದು ಎಂದರು.
ಐಟಿ ಕ್ಷೇತ್ರದಲ್ಲಿ ಸಾಮೂಹಿಕ ಉದ್ಯೋಗ ಕಡಿತವನ್ನು ತಪ್ಪಿಸಲು ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹಾಗೂ ಕಾರ್ಮಿಕ ಸಚಿವ ಸಂತೋಷ್ ಲಾಡ್ ಅವರಿಗೆ ಮನವಿ ಸಲ್ಲಿಸಿದ್ದೇವೆ ಎಂದು ಐಟಿಇಯು ಅಧ್ಯಕ್ಷ ಕುಮಾರಸ್ವಾಮಿ ಎಸಿ ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT