ಸಾಂದರ್ಭಿಕ ಚಿತ್ರ 
ರಾಜ್ಯ

ಮಹದಾಯಿಗಾಗಿ ಹೋರಾಟ; ನವಲಗುಂದದಲ್ಲಿ ರೈತರ ಉಪವಾಸ ಸತ್ಯಾಗ್ರಹ

ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮಹದಾಯಿ ನದಿ ನೀರು...

ನವಲಗುಂದ: ಪೊಲೀಸರಿಂದ ದೌರ್ಜನ್ಯಕ್ಕೊಳಗಾದವರಿಗೆ ಪರಿಹಾರ ನೀಡಬೇಕೆಂದು ಒತ್ತಾಯಿಸಿ, ಮಹದಾಯಿ ನದಿ ನೀರು ಯೋಜನೆ ಜಾರಿ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪಕ್ಷಾತೀತ ಹೋರಾಟ ಸಮಿತಿ ಅಧ್ಯಕ್ಷ ಲೋಕನಾಥ ಹೆಬಸೂರು ಮತ್ತು ನಿವೃತ್ತ ಶಿಕ್ಷಕ ಡಿ.ವಿ.ಕುರಹಟ್ಟಿ ಅವರ ನೇತೃತ್ವದಲ್ಲಿ ನವಲಗುಂದದಲ್ಲಿ ರೈತರು ಆಮರಣ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ.
ತಾಲೂಕು ಬರಪೀಡಿತವಾಗಿದ್ದು, ರೈತರು ಆರ್ಥಿಕ ಸಂಕಷ್ಟ  ಎದುರಿಸುತ್ತಿದ್ದಾರೆ. ಹೀಗಾಗಿ ತಾಲೂಕನ್ನು ಬರಪೀಡಿತ ಪ್ರದೇಶವೆಂದು ಘೋಷಿಸಿ ರೈತರಿಗೆ ವಿಶೇಷ ಪ್ಯಾಕೇಜ್‌ ನೀಡಬೇಕು ಎಂದು ಲೋಕನಾಥ ಹೆಬಸೂರು ಒತ್ತಾಯಿಸಿದರು. ಮಹದಾಯಿ ಯೋಜನೆ ಜಾರಿ ಕುರಿತು ಸರ್ಕಾರಗಳು ಸ್ಪಷ್ಟ ನಿಲುವು ತಾಳುವವರೆಗೂ ಉಪವಾಸ ಸತ್ಯಾಗ್ರಹ ನಿಲ್ಲಿಸುವುದಿಲ್ಲ ಎಂದು ಹೇಳಿದರು.
ಲೋಕನಾಥ ಹೆಬಸೂರ ಹಾಗೂ ಡಿ.ಬಿ.ಕುರಹಟ್ಟಿ ಮಧುಮೇಹ, ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ಇವರ ಆರೋಗ್ಯದಲ್ಲಿ ಏರುಪೇರಾದರೆ ಸರ್ಕಾರವೇ ಹೊಣೆ ಎಂದು ರೈತ ಹೋರಾಟಗಾರರು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT