ಸಂಗ್ರಹ ಚಿತ್ರ 
ರಾಜ್ಯ

ಯಾವ ಶಾಸಕರ ಮೇಲೂ ಒತ್ತಡ ಹೇರಿಲ್ಲ: ಸಚಿವ ಡಿ.ಕೆ. ಶಿವಕುಮಾರ್ ಸ್ಪಷ್ಟನೆ

ಬಿಜೆಪಿಯಿಂದ ಕುದುರೆ ವ್ಯಾಪಾರ ತಪ್ಪಿಸುವ ಸಲುವಾಗಿ ಗುಜರಾತ್‌ ನ ಕಾಂಗ್ರೆಸ್ ಶಾಸಕರನ್ನು ಇಲ್ಲಿಗೆ ಕರೆ ತರಲಾಗಿದೆಯೇ ಹೊರತು ಯಾವುದೇ ಶಾಸಕರ ಮೇಲೂ ಒತ್ತಡ ಹೇರಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಮನಗರ: ಬಿಜೆಪಿಯಿಂದ ಕುದುರೆ ವ್ಯಾಪಾರ ತಪ್ಪಿಸುವ ಸಲುವಾಗಿ ಗುಜರಾತ್‌ ನ ಕಾಂಗ್ರೆಸ್ ಶಾಸಕರನ್ನು ಇಲ್ಲಿಗೆ ಕರೆ ತರಲಾಗಿದೆಯೇ ಹೊರತು ಯಾವುದೇ ಶಾಸಕರ ಮೇಲೂ ಒತ್ತಡ ಹೇರಿಲ್ಲ ಎಂದು ಇಂಧನ ಸಚಿವ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

ರಾಜ್ಯಸಭೆ ಚುನಾವಣೆ ಹಿನ್ನಲೆಯಲ್ಲಿ ಗುಜರಾತ್ ನಲ್ಲಿ ನಡೆಯುತ್ತಿರುವ ಆಪರೇಷನ್ ಕಮಲ ಭೀತಿಯಿಂದ ಬೆಂಗಳೂರಿನಲ್ಲಿ ವಾಸ್ತವ್ಯ ಹೂಡಿರುವ ಗುಜರಾತ್ ಕಾಂಗ್ರೆಸ್ ಶಾಸಕರನ್ನು ನಿನ್ನೆ ತಡರಾತ್ರಿ ಭೇಟಿ ಮಾಡಿ ಇಂಧನ ಸಚಿವ  ಡಿಕೆ ಶಿವಕುಮಾರ್ ಅವರು ಚರ್ಚೆ ನಡೆಸಿದರು. ಬಳಿಕ ಈಗಲ್ಟನ್ ರೆಸಾರ್ಟ್‌ ನಿಂದ ಹೊರಗೆ ಬರುವಾಗ ಸುದ್ದಿಗಾರರೊಂದಿಗೆ ಮಾತನಾಡಿದ ಶಿವಕುಮಾರ್ ಅವರು, "ನಮ್ಮ ಯಾವುದೇ ಶಾಸಕರ ಮೇಲೂ ನಾವು ಒತ್ತಡ ಹೇರಿಲ್ಲ  ಅಥವಾ ಬೆದರಿಕೆ ಹಾಕಿಲ್ಲ. ಶಾಸಕರೆಲ್ಲರೂ ಸ್ವಇಚ್ಛೆಯಿಂದಲೇ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿದ್ದಾರೆ ಎಂದು ಹೇಳಿದರು.

"ನಮ್ಮ ಶಾಸಕರ ಮೇಲೆ ಒತ್ತಡವಿದ್ದು, ಗುಜರಾತ್‌ನಲ್ಲಿ ಪ್ರವಾಹ ಪರಿಸ್ಥಿತಿ ಇರುವ ಕಾರಣ ಹೆಚ್ಚೆಚ್ಚು ದೂರವಾಣಿ ಕರೆಗಳು ಬರುತ್ತಿವೆ. ಹೀಗಾಗಿ ಅವರ ಮೊಬೈಲ್‌ ಗಳು ಸ್ವಿಚ್ ಆಫ್ ಆಗಿವೆ. ಆದರೆ ನಾವು ಯಾರಿಗೂ ಮೊಬೈಲ್  ಬಳಕೆಗೆ ನಿರ್ಬಂಧ ಹೇರಿಲ್ಲ. ಅಂತೆಯೇ ಯಾವ ಶಾಸಕರೂ ತಪ್ಪಿಸಿಕೊಂಡಿಲ್ಲ. ಎಲ್ಲರೂ ಜತೆಗೆ ಇದ್ದಾರೆ. ರಾಜ್ಯದ ವಿವಿಧ ಸ್ಥಳಗಳಿಗೆ ಪ್ರವಾಸ ತೆರಳಲಿದ್ದಾರೆ. ಆದರೆ ಎಲ್ಲಿಗೆ ಹೋಗಬೇಕು ಎನ್ನುವುದನ್ನು ಇನ್ನೂ ನಿರ್ಧರಿಸಿಲ್ಲ' ಎಂದು  ಅವರು ಹೇಳಿದರು.

ಇದೇ ವೇಳೆ ಮಧ್ಯಾಹ್ನ 3.30ರ ಸುಮಾರಿಗೆ ಶಾಸಕರೇ ಮಾಧ್ಯಮದ ಮುಂದೆ ಬರಲಿದ್ದಾರೆ ಎಂದು ಅವರು ಹೇಳಿದರು. ಇದೇ ವೇಳೆ ಗುಜರಾತ್ ಪ್ರವಾಹದ ಕುರಿತು ಮಾತನಾಡಿದ ಡಿಕೆ ಶಿವಕುಮಾರ್ ಅವರು, ಅಲ್ಲಿಯೂ ಒಂದು  ಸರ್ಕಾರವಿದೆ. ಅವರೇ ಎಲ್ಲ ಪರಿಸ್ಥಿತಿಯನ್ನು ನಿಭಾಯಿಸುತ್ತಾರೆ. ಪ್ರವಾಸದ ವೆಚ್ಚವನ್ನು ಸ್ವತಃ ಶಾಸಕರೇ ಭರಿಸಲಿದ್ದಾರೆ ಎಂದೂ ಶಿವ ಕುಮಾರ್ ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT