ಅಪಘಾತ 
ರಾಜ್ಯ

ದೇವನಹಳ್ಳಿ ಬಳಿ ಭೀಕರ ಅಪಘಾತ: ತಡವಾಗಿ ಬಂದ ಆ್ಯಂಬುಲೆನ್ಸ್, ಬೈಕ್ ಸವಾರ ಸಾವು

ಬೈಕ್ ಅಪಘಾತದಲ್ಲಿ ಯುವಕರಿಬ್ಬರು ತೀವ್ರವಾಗಿ ಗಾಯಗೊಂಡಿದ್ದು ಆ್ಯಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆ ತಡವಾಗಿ ಬಂದಿದ್ದರಿಂದ ತೀವ್ರವಾಗಿ...

ಬೆಂಗಳೂರು: ಬೈಕ್ ಅಪಘಾತದಲ್ಲಿ ಯುವಕರಿಬ್ಬರು ತೀವ್ರವಾಗಿ ಗಾಯಗೊಂಡಿದ್ದು ಆ್ಯಂಬುಲೆನ್ಸ್ ಗೆ ಕರೆ ಮಾಡಿ ಒಂದು ಗಂಟೆ ತಡವಾಗಿ ಬಂದಿದ್ದರಿಂದ ತೀವ್ರವಾಗಿ ಗಾಯಗೊಂಡಿದ್ದ ಯುವಕ ಸಾವನ್ನಪ್ಪಿದ್ದಾನೆ ಎಂದು ಆತನ ಸ್ನೇಹಿತರು ಆರೋಪಿಸಿದ್ದಾರೆ. 
ವೀಕೆಂಡ್ ಮಸ್ತಿಗಾಗಿ ಆರು ಮಂದಿ ಯುವಕರ ಗುಂಪು ಮೂರು ಬೈಕ್ ನಲ್ಲಿ ನಂದಿ ಬೆಟ್ಟಕ್ಕೆ ತೆರಳುತ್ತಿದ್ದು ಈ ವೇಳೆ ದೇವನಹಳ್ಳಿಯ ಕುಂದನ ರಸ್ತೆ ಬಳಿ ಬೈಕ್ ಗೆ ಟ್ರ್ಯಾಕ್ಟರ್ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರರು ಗಾಳಿಯಲ್ಲಿ ತೂರಿ ಕೆಳಕ್ಕೆ ಬಿದ್ದಿದ್ದಾರೆ. ಇದರಲ್ಲಿ ಬೈಕ್ ನ ಹಿಂದೆ ಕುಳಿತ್ತಿದ್ದ ಯುವಕ ಅಪಘಾತ ಸ್ಥಳದಲ್ಲೇ ಮೃತಪಟ್ಟಿದ್ದು ಮತ್ತೋರ್ವ ಗಂಭೀರ ಗಾಯಗಳಿಂದ ನರಳುತ್ತಿದ್ದ. ಅಪಘಾತ ಬಳಿಕ ನಾವು ಆ್ಯಂಬುಲೆನ್ಸ್ ಗೆ ಕರೆ ಮಾಡಿದೆವು. ಆಗ ಅವರ 20 ನಿಮಿಷದಲ್ಲಿ ಬರುವುದಾಗಿ ಹೇಳಿ ಒಂದು ಗಂಟೆ ತಡವಾಗಿ ಬಂದರು ಎಂದು ಮೃತ ಯುವಕರ ಸ್ನೇಹಿತ ಶಬ್ಬೀರ್ ಹೇಳಿದ್ದಾನೆ. 
ಮೃತ ಯುವಕರನ್ನು ಕೇರಳದ ಕೊಟ್ಟಾಯಂ ಜಿಲ್ಲೆಯ ಪಾಲಾ ಮೂಲದ 23 ವರ್ಷದ ಅಜೋ ರಾಜು ಮತ್ತು 22 ವರ್ಷದ ಅಪ್ಪು ಶಾಜಿ ಎಂದು ಗುರುತಿಸಲಾಗಿದೆ. ಈ ಅಪಘಾತ ಮುಂಜಾನೆ 4.45ರ ಸುಮಾರಿಗೆ ನಡೆದಿದ್ದು ರಾಜು ಮತ್ತು ಶಾಜಿ ಆ್ಯಕ್ಟೀವ್ ಹೊಂಡಾದಲ್ಲಿ ತೆರಳುತ್ತಿದ್ದರು. ಬೈಕ್ ಅನ್ನು ರಾಜು ಓಡಿಸುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT