ಸಾಂದರ್ಭಿಕ ಚಿತ್ರ 
ರಾಜ್ಯ

ಕಲಬುರಗಿ: ಅಪಹರಣಕಾರರ ಮೇಲೆ ಗುಂಡಿನ ದಾಳಿ, ಪೊಲೀಸರು ಸೇರಿ ಐವರಿಗೆ ಗಾಯ

ವ್ಯಕ್ತಿಯೊಬ್ಬರನ್ನು ಅಪಹರಿಸಿ ಲಕ್ಷಾಂತರ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಾಕಾರರ ಮೇಲೆ ಸೋಮವಾರ ಪೊಲೀಸರು ಗುಂಡು...

ಕಲಬುರಗಿ: ವ್ಯಕ್ತಿಯೊಬ್ಬರನ್ನು ಅಪಹರಿಸಿ ಲಕ್ಷಾಂತರ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಾಕಾರರ ಮೇಲೆ ಸೋಮವಾರ ಪೊಲೀಸರು ಗುಂಡು ಹಾರಿಸಿದ ಘಟನೆ ಕಲಬುರಗಿ ತಾಲೂಕಿನ ಬಸನಾಳ ಗ್ರಾಮದ ಬಳಿ ನಡದಿದೆ. ಘಟನೆಯಲ್ಲಿ ಮೂವರು ಪೊಲೀಸ್ ಸಿಬ್ಬಂದಿ ಹಾಗೂ ಇಬ್ಬರು ಆರೋಪಿಗಳು ಗಂಭೀರವಾಗಿ ಗಾಯಗೊಂಡಿದ್ದಾರೆ.
ಆರೋಪಿಗಳಾದ ಕಿರಣ್ ಕುಮಾರ್ ಮತ್ತು ದೀಪಕ್ ಕಳೆದ ಶನಿವಾರ ಚಿತ್ತಾಪುರ ತಾಲೂಕಿನ ತಾವರಖೆಡ ಗ್ರಾಮದ ಶ್ರೀನಾಥ್ ಎಂಬುವವರನ್ನು ಅಪಹರಿಸಿ ಅವರಿಂದ 15 ಲಕ್ಷ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಈಶಾನ್ಯ ವಲಯ ಐಜಿಪಿ ಅಲೋಕ್ ಕುಮಾರ್ ಅವರು ಮಾಧ್ಯಮಕ್ಕೆ ತಿಳಿಸಿದ್ದಾರೆ.
15 ಲಕ್ಷ ರುಪಾಯಿ ಹಣಕ್ಕೆ ಬೇಡಿಕೆ ಇಟ್ಟಿದ್ದ ಆರೋಪಿಗಳು, ಹಣ ನೀಡದಿದ್ದರೆ ಮತ್ತು ಅಪಹರಣ ವಿಚಾರವನ್ನು ಪೊಲೀಸರಿಗೆ ತಿಳಿಸಿದರೆ ಶ್ರೀನಾಥ್ ಮತ್ತು ಆತನ ಕುಟುಂಬದವನ್ನು ಕೊಲೆ ಮಾಡುವುದಾಗಿ ಬೆದರಿಕೆ ಹಾಕಿದ್ದರು. ಆದರೆ 15 ಲಕ್ಷ ರುಪಾಯಿ ಕೊಡಲು ಸಾಧ್ಯವಿಲ್ಲ ಎಂದಾಗ 4 ಲಕ್ಷಕ್ಕೆ ಬೇಡಿಕೆ ಇಟ್ಟಿದ್ದರು ಎಂದು ಅಲೋಕ್ ಕುಮಾರ್ ಹೇಳಿದ್ದಾರೆ.
4 ಲಕ್ಷ ರುಪಾಯಿ ನೀಡುವ ಸ್ಥಿತಿಯಲ್ಲಿರದ ಕುಟಂಬ ಅಂತಿಮವಾಗಿ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ಬೆನ್ನತ್ತಿದ ಪೊಲೀಸರು, ಅಪಹರಣಾಕಾರರು ಬಸನಾಳ ಬಳಿ ಇದ್ದಾರೆ ಎಂಬ ಖಚಿತ ಮಾಹಿತಿಯನ್ನಾಧರಿಸಿ, ದಾಳಿ ನಡೆಸಿದ್ದಾರೆ. ಈ ವೇಳೆ ಅಪಹರಣಾಕಾರರೂ ಪೊಲೀಸರ ಮೇಲೆ ದಾಳಿ ನಡೆಸಿದ್ದು, ಆತ್ಮ ರಕ್ಷಣೆಗಾಗಿ ಪೊಲೀಸರು ಅವರ ಮೇಲೆ ಗುಂಡು ಹಾರಿಸಿದ್ದಾರೆ. ದಾಳಿಯಲ್ಲಿ ಆರೋಪಿಗಳ ಕಾಲಿಗೆ ಗುಂಡು ತಗುಲಿದೆದ್ದೂ, ಮೂವರು ಪೊಲೀಸ್ ಸಿಬ್ಬಂದಿಗೂ ಸಣ್ಣ ಪುಟ್ಟ ಗಾಯಗಳಾಗಿವೆ.
ಆರೋಪಿಗಳನ್ನು ಚಿಕಿತ್ಸೆಗಾಗಿ ಜಿಲ್ಲಾ ಆಸ್ಪತ್ರೆಗೆ ಹಾಗೂ ಪೊಲೀಸರನ್ನು ಬಸವೇಶ್ವರ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT