ಸಂಗ್ರಹ ಚಿತ್ರ 
ರಾಜ್ಯ

ಪ್ರೀತಿ ವಿಚಾರ ತಿಳಿದು ಮಗಳನ್ನು ದೊಣ್ಣೆಯಿಂದ ಹೊಡೆದು ಕೊಂದ ತಾಯಿ

ಮಗಳ ಪ್ರೀತಿಯ ತಿಳಿದ ತಾಯಿ ಆಕೆಯನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಕೋಲಾರದ ಚಿನ್ನಾಪುರದಲ್ಲಿ ನಡೆದಿದೆ...

ಕೋಲಾರ: ಮಗಳ ಪ್ರೀತಿಯ ತಿಳಿದ ತಾಯಿ ಆಕೆಯನ್ನು ದೊಣ್ಣೆಯಿಂದ ಹೊಡೆದು ಕೊಂದಿರುವ ಘಟನೆ ಕೋಲಾರದ ಚಿನ್ನಾಪುರದಲ್ಲಿ ನಡೆದಿದೆ. 
18 ವರ್ಷದ ರಾಜೇಶ್ವರಿ ತಾಯಿಯಿಂದ ಹತ್ಯೆಯಾದ ನತದೃಷ್ಟೆ. ದ್ವಿತೀಯ ಪಿಯುಸಿಯಲ್ಲಿ ಓದುತ್ತಿದ್ದ ರಾಜೇಶ್ವರಿ ಮೊನ್ನೆ ಬಂದ ಪಿಯು ಫಲಿತಾಂಶದಲ್ಲಿ ಫೇಲ್ ಆಗಿದ್ದಳು. ಇದರಿಂದ ತಾಯಿ 45 ವೆಂಕಟಮ್ಮ ಕೋಪಗೊಂಡಿದ್ದರು. ಈ ಮಧ್ಯೆ ತಮ್ಮ ಮಗಳು ಯುವಕನ ಪ್ರೀತಿಯಲ್ಲಿ ಬಿದ್ದಿರುವುದಾಗಿ ಗ್ರಾಮಸ್ಥರಿಂದ ತಿಳಿದ ಆಕೆ ಆವೇಶದಲ್ಲಿ ದೊಣ್ಣೆ ತೆಗೆದುಕೊಂಡು ಮಗಳನ್ನು ಕೊಂದು ಹಾಕಿದ್ದಾರೆ. 
ರಾಜೇಶ್ವರಿ ಏಳು ತಿಂಗಳ ಮಗುವಾಗಿದ್ದಾಗ ವೆಂಕಟಮ್ಮ ಗಂಡನನ್ನು ಕಳೆದುಕೊಂಡಿದ್ದರು. ಕೂಲಿ ಮಾಡುತ್ತಾ ಇಬ್ಬರು ಹೆಣ್ಣು ಮಕ್ಕಳು ಮತ್ತು ಗಂಡು ಮಗುವನ್ನು ಬೆಳೆಸಿದ್ದರು. ಮಗಳು ಪ್ರೀತಿಯಲ್ಲಿ ಬಿದ್ದಿರುವುದರಿಂದಲೇ ದ್ವಿತೀಯ ಪಿಯುಸಿಯಲ್ಲಿ ಫೇಲ್ ಆಗಿದ್ದಾಳೆ ಎಂದು ತಿಳಿದ ವೆಂಕಟಮ್ಮ ಆಕೆಯನ್ನು ಗದುರಿದ್ದಾರೆ. ಆಗ ಮಾತಿಗೆ ಮಾತು ಬೆಳೆದು ವೆಂಕಟಮ್ಮ ದೊಣ್ಣೆ ಕೊಲಿನಿಂದ ಮಗಳ ತಲೆಗೆ ಹೊಡೆದಿದ್ದು ತೀವ್ರ ರಕ್ತಸಾವ್ರದಿಂದ ರಾಜೇಶ್ವರಿ ಮೃತಪಟ್ಟಿದ್ದಾಳೆ ಎಂದು ಪೊಲೀಸರು ಹೇಳಿದ್ದು ಪ್ರಕರಣ ಸಂಬಂಧ ಕೋಲಾರ ಗ್ರಾಮಾಂತರ ಠಾಣಾ ಪೊಲೀಸರು ವೆಂಕಟಮ್ಮನನ್ನು ವಶಕ್ಕೆ ಪಡೆದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT