ಐಎಎಸ್ ಅಧಿಕಾರಿ ಅನುರಾಗ್ ತಿವಾರಿ 
ರಾಜ್ಯ

ಐಎಎಸ್ ಅಧಿಕಾರಿ ತಿವಾರಿ ನಿಗೂಢ ಸಾವು ಪ್ರಕರಣ: ಸಿಎಂ ಸಿದ್ದರಾಮಯ್ಯ ಭೇಟಿಗೆ ಪೋಷಕರ ನಿರ್ಧಾರ

ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿವಾರಿ ಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು...

ಬೆಂಗಳೂರು: ಐಎಎಸ್ ಅಧಿಕಾರಿ ಅನುರಾಗ್ ತಿವಾರಿ ನಿಗೂಢ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತಿವಾರಿ ಪೋಷಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ಮಂಗಳವಾರ ನಿರ್ಧರಿಸಿದ್ದಾರೆ. 
ನಗರದಲ್ಲಿ ನಿನ್ನೆ ಸುದ್ದಿಗೋಷ್ಟಿಯಲ್ಲಿ ಮಾತನಾಡಿರುವ ಅನುರಾಗ್ ತಿವಾರಿ ತಂದೆ ಬಿ.ಎನ್. ತಿವಾರಿ ಮತ್ತು ತಾಯಿ ಸುಶೀಲಾ ಅವರು, ಪುತ್ರನ ನಿಗೂಢ ಸಾವು ಕುರಿತಂತೆ ಹಲವು ಶಂಕೆಗಳನ್ನು ವ್ಯಕ್ತಪಡಿಸಿದ್ದಾರೆ. ಅಲ್ಲದೆ, ಸಿದ್ದರಾಮಯ್ಯ ಅವರನ್ನು ಭೇಟಿಯಾಗಲು ನಿರ್ಧರಿಸಿದ್ದು, ನ್ಯಾಯ ಕೊಡಿಸುವಂತೆ ಆಗ್ರಹಿಸಲಾಗುತ್ತದೆ ಎಂದು ಹೇಳಿದ್ದಾರೆ. 
ಮುಖ್ಯಮಂದತ್ರಿ ಸಿದ್ದರಾಮಯ್ಯ ಅವರ ಭೇಟಿಗೆ ಅನುಮತಿ ಪಡೆದುಕೊಳ್ಳಲಾಗಿದೆ. ಪುತ್ರನ ಸಾವು ಕುರಿತಂತೆ ನಮ್ಮ ಬಳಿ ಕೆಲ ಮಾಹಿತಿಗಳಿದ್ದು, ಆ ಮಾಹಿತಿಗಳನ್ನು ಇತರರ ಮುಂದೆ ಬಹಿರಂಗ ಪಡಿಸಲು ಸಾಧ್ಯವಿಲ್ಲ. ಹೀಗಾಗಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅವರೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಿದ್ದೇವೆಂದು ತಿಳಿಸಿದ್ದಾರೆ. 
ತಿವಾರಿ ಕುಟುಂಬ ಸದಸ್ಯರು ಇದೀಗ ಉತ್ತರಪ್ರದೇಶ ವಿಶೇಷ ತನಿಖಾ ದಳದ ತನಿಖೆ ಮೇಲೆ ಆರೋಪಗಳನ್ನು ಮಾಡಿದ್ದು, ಅಧಿಕಾರಿಗಳು ವೃತ್ತಿಪರರಂತೆ ತನಿಖೆಯನ್ನು ನಡೆಸುತ್ತಿಲ್ಲ ಎಂದು ಹೇಳಿಕೊಂಡಿದ್ದಾರೆ. 
ತನಿಖಾ ತಂಡದಲ್ಲಿ ವಿಧಿವಿಜ್ಞಾನ ತಜ್ಞರಿಲ್ಲ. ಅನುರಾಗ್ ಲ್ಯಾಪ್ ಟಾಪ್ ನಲ್ಲಿ ಸಾಕಷ್ಟು ದಾಖಲೆಗಳಿವೆ. ಆದರೆ, ಅವರು ಅದಾವುದನ್ನೂ ಪರಿಶೀಲನೆ ನಡೆಸುತ್ತಿಲ್ಲ ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. 
ತಿವಾರಿ ಸಹೋದರ ಮಯಾಂಕ್ ತಿವಾರಿ ಮಾತನಾಡಿ, ಎಸ್ಐಟಿ ಅಧಿಕಾರಿಗಳು ತರಾತುರಿಯಲ್ಲಿ ತನಿಖೆಯನ್ನು ನಡೆಸುತ್ತಿದ್ದು, ಪ್ರಕರಣವನ್ನು ಸಾಮಾನ್ಯ ಪ್ರಕರಣಗಳಂತೆ ಪರಿಗಣಿಸಿ ಬೇಗನೆ ಮುಚ್ಚಿ ಹಾಕಲು ನೋಡುತ್ತಿದ್ದಾರೆ. ಅನುರಾಗ್ ಸಾಕಷ್ಟು ಜೀವ ಬೆದರಿಕೆಗಳ ಮಧ್ಯೆ ಇದ್ದರು ಎಂಬುದು ನಮಗೆ ಗೊತ್ತಿತ್ತು. ಅತ್ಯಂತ ಸೂಕ್ಷ್ಮವಾದ ಹಗರಣಗಳನ್ನು ಆತ ತನಿಖೆ ನಡೆಸುತ್ತಿದ್ದ. ಶೀಘ್ರದಲ್ಲೇ ಪ್ರಕರಣ ಸಂಬಂಧ ಕೇಂದ್ರ ಗೃಹ ಸಚಿವ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಲಿದ್ದಾರೆ. ಸಾಧ್ಯವಾದರೆ ತನಿಖೆಯನ್ನು ಉನ್ನತ ಮಟ್ಟದ ಸಂಸ್ಥೆಗೆ ವಹಿಸುವಂತೆ ಮನವಿ ಮಾಡಿಕೊಳ್ಳುತ್ತೇವೆ. ಸಿಬಿಐ ತನಿಖೆಗೆ ವಹಿಸುವಂತೆ ಮನವಿ ಮಾಡುತ್ತೇವೆ. ನಮಗೆ ನ್ಯಾಯಬೇಕು ಎಂದು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡ್ರಗ್ಸ್ ಸೇವನೆ ದೃಢ: ಫುಕೆಟ್- ದೆಹಲಿ ಏರ್ ಇಂಡಿಯಾ ವಿಮಾನದ ಮುಖ್ಯ ಪೈಲಟ್ ವಜಾ!

Video: 'ಪೊಲೀಸರು ಬುದ್ದಿ ಕಲಿಸಿದ್ದಾರೆ, ತಪ್ಪನ್ನ ಕ್ಷಮಿಸಲ್ಲ'; ಮಗ ಸಾಮ್ರಾಟ್‌ ಬಗ್ಗೆ ಕೊನೆಗೂ ಮೌನ ಮುರಿದ ನಟ Duniya Vijay

‘ಹೂತುಹಾಕಬೇಕು ಎನ್ನುವವರಲ್ಲ ನಾವು’.. ‘ಮಹಿಳೆಯರಿಗೆ ಶಿಕ್ಷಣ, ಅವಕಾಶ ನೀಡುತ್ತಿದ್ದೇವೆ’: ‘ಮನೆಯಲ್ಲೇ ಇರಬೇಕು’ ಹೇಳಿಕೆಗೆ ಮುಸ್ಲಿಂ ಧರ್ಮಗುರು ಸ್ಪಷ್ಟನೆ, Video

ಜಮ್ಮು-ಕಾಶ್ಮೀರ: ಬುಡ್ಗಾಮ್‌ ಎನ್ ಕೌಂಟರ್ ನಲ್ಲಿ ಉಗ್ರನ ಹತ್ಯೆ; AK ರೈಫಲ್ ಮತ್ತಿತರ ಶಸ್ತ್ರಾಸ್ತ್ರಗಳು ವಶ!

Mysuru Dasara: 'ಯುವ ದಸರಾ' ಉದ್ಘಾಟನೆಗೆ ಖ್ಯಾತ ನೃತ್ಯ ನಿರ್ದೇಶಕ ಪ್ರಭುದೇವಗೆ ಆಹ್ವಾನ!