ಸಾಂದರ್ಭಿಕ ಚಿತ್ರ 
ರಾಜ್ಯ

ಹಾಸನದಲ್ಲಿ ಆನೆ ಕಾರಿಡಾರ್ ನಿರ್ಮಾಣಕ್ಕೆ ರಾಜ್ಯದಿಂದ ಕೇಂದ್ರದ ಧನ ಸಹಾಯ ಕೋರಿಕೆ

ಹೆಚ್ಚುತ್ತಿರುವ ಆನೆಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ 272 ಕೋಟಿ ರು ವೆಚ್ಚದಲ್ಲಿ ಆನೆ ಕಾರಿಡಾರ್ ನಿರ್ಮಾಣ ಮಾಡಲು...

ಬೆಂಗಳೂರು: ಹೆಚ್ಚುತ್ತಿರುವ ಆನೆಗಳ ಹಾವಳಿ ತಡೆಯಲು ರಾಜ್ಯ ಸರ್ಕಾರ  272  ಕೋಟಿ ರು ವೆಚ್ಚದಲ್ಲಿ ಆನೆ ಕಾರಿಡಾರ್ ನಿರ್ಮಾಣ ಮಾಡಲು ನಿರ್ಧರಿಸಲಾಗಿದೆ. 
ಹೆತ್ತೂರು ಹೋಬಳಿಯ 7 ಹಳ್ಳಿಗಳ ವ್ಯಾಪ್ತಿಯ 3,143 ಎಕರೆ ಭೂಮಿ ಸ್ವಾಧೀನ ಮಾಡಿಕೊಂಡು ಆನೆ ಕಾರಿಡಾರ್  ಮಾಡಲು ನಿರ್ಧರಿಸಲಾಗಿದೆ. ಆನೆಗಳು ಬಹುಕಾಲದಿಂದ ವಲಸೆ ಮಾರ್ಗವಾಗಿ  ಬಳಸುವ ಕಾಡಿನ ಮಧ್ಯಭಾಗ ಹಾಗೂ ಹೊಂದಿಕೊಂಡಂತಿರುವ ಖಾಸಗಿ ಜಮೀನುಗಳನ್ನು ಖರೀದಿಸಿ ನಿರ್ಮಿಸಲು ನಿರ್ಧರಿಸಲಾಗಿದೆ. 
ಹೊಸ ಭೂ ಸ್ವಾಧೀನ ಕಾಯಿದೆಯಂತೆ ಜಮೀನು ಸ್ವಾಧೀನ ಮಾಡಿಕೊಳ್ಳಬೇಕಿದ್ದು, ಈ ಉದ್ದೇಶಕ್ಕೆ ಅಗತ್ಯವಾದ 272 ಕೋಟಿ ರು. ಅನುದಾನವನ್ನು ಕಾಂಪಾ ನಿಧಿಯಿಂದ ಭರಿಸುವಂತೆ ಕೇಂದ್ರ ಸರ್ಕಾರವನ್ನು ಕೋರಲಾಗಿದೆ ಎಂದು ವಿಧಾನಸಭೆಯಲ್ಲಿ ಅರಣ್ಯ ಸಚಿವ ರಮಾನಾಥ ರೈ  ವಿವರಿಸಿದ್ದಾರೆ.
ಸಕಲೇಶಪುರ ತಾಲೂಕಿನ ಹೂಂಕರವಳ್ಳಿಯಲ್ಲಿ ಜೂನ್- 3ರಂದು  ರೈತನೊಬ್ಬ ಆನೆ ದಾಳಿಯಲ್ಲಿ ಮೃತಪಟ್ಟ ಪ್ರಕರಣದ ಬಗ್ಗೆ ಶೂನ್ಯ ವೇಳೆಯಲ್ಲಿ ಈ ವಿಚಾರ ಪ್ರಸ್ತಾಪಿಸಲಾಯಿತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT