ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ 
ರಾಜ್ಯ

ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಕುರಿತು ಸಮಗ್ರ ತನಿಖೆ: ರಮೇಶ್ ಕುಮಾರ್

ಜನತೆಯಲ್ಲಿ ಆತಂಕ ಸೃಷ್ಟಿಸಿರುವ ಪ್ಲಾಸ್ಟಿಕ್ ಅಕ್ಕಿ ಮತ್ತು ಪ್ಲಾಸ್ಟಿಕ್ ಮೊಟ್ಟೆ ಕಲಬೆರಕೆ ವಿಷಯವಾಗಿ ಸಮಗ್ರ ತನಿಖೆಗೆ ಆದೇಶಸಲಾಗಿದೆ ಎಂದು ಆರೋಗ್ಯ ಸಚಿವ...

ಬೆಂಗಳೂರು: ಜನತೆಯಲ್ಲಿ ಆತಂಕ ಸೃಷ್ಟಿಸಿರುವ ಪ್ಲಾಸ್ಟಿಕ್ ಅಕ್ಕಿ ಮತ್ತು ಪ್ಲಾಸ್ಟಿಕ್ ಮೊಟ್ಟೆ ಕಲಬೆರಕೆ ವಿಷಯವಾಗಿ ಸಮಗ್ರ ತನಿಖೆಗೆ ಆದೇಶಸಲಾಗಿದೆ ಎಂದು ಆರೋಗ್ಯ ಸಚಿವ ರಮೇಶ್ ಕುಮಾರ್ ಅವರು ಹೇಳಿದ್ದಾರೆ. 
ವಿಧಾನಸಭೆಯಲ್ಲಿ ಜಗದೀಶ್ ಶೆಟ್ಟರ್ ಅವರು ಕಲಬೆರಕೆ ವಿಷಯವಾಗಿ ಪ್ರಸ್ತಾಪಿಸಿದರು. ಇದಕ್ಕೆ ಪ್ರತಿಕ್ರಿಯಿಸಿರುವ ರಮೇಶ್ ಕುಮಾರ್ ಅವರು ಪ್ಲಾಸ್ಟಿಕ್ ಅಕ್ಕಿ, ಮೊಟ್ಟೆ ಮತ್ತು ಸಕ್ಕರೆ ಸುದ್ದಿ ಜನರಲ್ಲಿ ಗಾಬರಿ ಮೂಡಿಸಿದ್ದು ಈ ಬಗ್ಗೆ ಪರೀಕ್ಷಿಸಬೇಕಿದೆ. ಆಯುಕ್ತರಿಗೆ ಈಗಾಗಲೇ ಸೂಚನೆ ನೀಡಿದ್ದೇನೆ. ಪ್ಲಾಸ್ಟಿಕ್ ಅಕ್ಕಿ ತಯಾರಿಕೆ ಸಾಧ್ಯವೇ ಎಂಬುದನ್ನೂ ತಿಳಿದುಕೊಳ್ಳಬೇಕಿದ್ದು ಇದರ ಸಮಗ್ರ ವರದಿಯನ್ನು ಸೋಮವಾರ ಸದನದ ಮುಂದಿಡಲಾಗುವುದು ಎಂದು ಹೇಳಿದರು. 
ನ್ಯಾಯಬೆಲೆ ಅಂಗಡಿಯಲ್ಲಿ ವಿತರಿಸಿದ ಅಕ್ಕಿಯಲ್ಲೂ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆ ಆಗಿರುವುದು ಮಾಧ್ಯಮಗಳಲ್ಲಿ ಪ್ರಸಾರವಾಗಿದ್ದು, ಅನ್ನಭಾಗ್ಯದ ಹೆಸರಿನಲ್ಲಿ ಸರ್ಕಾರವೇ ಪ್ಲಾಸ್ಟಿಕ್ ಅಕ್ಕಿ ವಿತರಿಸುತ್ತಿದೆಯೇ ಎಂಬ ಸಂದೇಹ ಬರುತ್ತದೆ ಎಂದು ಬಿಜೆಪಿಯ ಸಿಟಿ ರವಿ ಆಗ್ರಹಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಹಾರ ಸಚಿವ ಯುಟಿ ಖಾದರ್ ಪ್ಲಾಸ್ಟಿಕ್ ಅಕ್ಕಿ ಕಲಬೆರಕೆ ಸಾಧ್ಯವೇ ಇಲ್ಲ. ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಕೆಯಾಗುವುದು ಕೇಂದ್ರ ಸರ್ಕಾರದಿಂದ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT