ಆರೋಪಿ ಜಗದೀಶ್ 
ರಾಜ್ಯ

ಬೈಕ್ ಡೆಲಿವರಿ ವಿಳಂಬ: ಬೆಂಗಳೂರಿನಲ್ಲಿ ಮಾಜಿ ಸೈನಿಕನಿಂದ ಶೋ ರೂಂ ಮಾಲೀಕನ ಮೇಲೆ ಫೈರಿಂಗ್

ಹೊಸ ಬೈಕ್ ಡೆಲಿವರಿ ನಿಧಾನವಾಯ್ತು ಎಂಬ ಕಾರಣಕ್ಕೆ ಆಕ್ರೋಶಗೊಂಡ ಮಾಜಿ ಸೈನಿಕನೊಬ್ಬ, ಶೋರೂಂ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ...

ಬೆಂಗಳೂರು: ಹೊಸ ಬೈಕ್ ಡೆಲಿವರಿ ನಿಧಾನವಾಯ್ತು ಎಂಬ ಕಾರಣಕ್ಕೆ ಆಕ್ರೋಶಗೊಂಡ ಮಾಜಿ ಸೈನಿಕನೊಬ್ಬ, ಶೋರೂಂ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.
ಬೆಂಗಳೂರಿನ ಕೆಂಗೇರಿ ಉಪನಗರದಲ್ಲಿ ಬುಕ್ ಮಾಡಿದ್ದ ಬೈಕ್ ಕೊಡಲು ವಿಳಂಬವಾಯಿತು ಎನ್ನುವ ಕಾರಣಕ್ಕೆ, ಮಾಜಿ ಸೈನಿಕ ಜಗದೀಶ್ ಶೋರೂಂ ಮಾಲೀಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಜಗದೀಶ್  106 ಪ್ಯಾರಾಚೂಟ್ ರೆಜಿಮೆಂಟ್'ನಲ್ಲಿ ಯೋಧರಾಗಿದ್ದರು. 2016ರಲ್ಲಿ ಸ್ವಯಂ ನಿವೃತ್ತಿ ಪಡೆದು, ಬಳಿಕ ಕನ್ನಿಂಗ್ ಹ್ಯಾಮ್ ರಸ್ತೆಯ ಕಂಪನಿಯೊಂದರಲ್ಲಿ ಸೆಕ್ಯುರಿಟಿ ಕೆಲಸ ಮಾಡುತ್ತಿದ್ದರು. ಕಳೆದ ಮಾರ್ಚ್​ 31 ರಂದು ಸ್ಯಾಟಲೈಟ್ ಮೋಟರ್ಸ್ ನಲ್ಲಿ, ಹೋಂಡಾ ಲಿವಾ ಬೈಕ್ ಬುಕ್ ಮಾಡಿದ್ದ ಜಗದೀಶ್'ಗೆ, ನಿನ್ನೆ ಬೈಕ್ ಡಿಲಿವರಿಯಾಗಬೇಕಿತ್ತು. ಆದರೆ ಕೆಲ ಕಾರಣಗಳಿಂದ ಡಿಲಿವರಿ ತಡವಾಗಿದ್ದು, ಮಾಲೀಕರೊಂದಿಗೆ ವಾಗ್ವಾದಕ್ಕಿಳಿದ ಜಗದೀಶ್ ಏಕಾಏಕಿ ಫೈರಿಂಗ್ ಮಾಡಿದ್ದಾರೆ.
ಇನ್ನೂ ಈ ಘಟನೆಯಲ್ಲಿ ಶೋ ರೂಮ್ ಮಾಲೀಕನ ಜೀವ ಉಳಿಸಿದ್ದೇ ಕೆಂಗೇರಿ ಠಾಣೆ ಪೇದೆ ಚಂದ್ರಶೇಖರ್. ಶೋ ರೂಮ್ ಮಾಲೀಕ ಶಫಿವುಲ್ಲಾ ಹಾಗೂ ಮಾಜಿ ಸೈನಿಕ ಜಗದೀಶ್ ಜಗಳ ಜೋರಾಗಿತ್ತು. ಇನ್ನೇನು ಪಿಸ್ತೂಲ್ ತೆಗೆದು ಜಗದೀಶ್ ಶಫಿವುಲ್ಲಾ ಕಡೆ ಹಾರಿಸಬೇಕು ಎನ್ನುವಷ್ಟರಲ್ಲಿ ಅಲ್ಲಿಗೆ ಆಗಮಿಸಿದ ಪೇದೆ ಪಿಸ್ತೂಲ್ ಡೌನ್ ಮಾಡಿದ್ದಾನೆ. 3.2 ಪಿಸ್ತೂಲಿನಿಂದ ಹಾರಿದ ಗುಂಡು ನೆಲಕ್ಕೆ ತಗುಲಿದೆ. ಶಫಿವುಲ್ಲಾ ಬಚಾವಾಗಿದ್ದಾರೆ. ನಡೆಯಬಹುದಾಗಿದ್ದ ಅನಾಹುತ ತಪ್ಪಿಸಿದ ಪೇದೆ ಚಂದ್ರಶೇಖರ್ ಕೆಲಸಕ್ಕೆ ಅವರಿಗೆ ಬಹಮಾನ ನೀಡಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT