ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕ ಬಂದ್ ಗೆ ನೀರಸ ಪ್ರತಿಕ್ರಿಯೆ: ಮೆಟ್ರೋ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಯಥಾಸ್ಥಿತಿ

ಬಯಲು ಸೀಮೆಗೆ ಶಾಶ್ವತ ನೀರಾವರಿ, ಮಹದಾಯಿ-ಕಳಸಾ ಬಂಡೂರಿ ಯೋಜನೆಯ ತ್ವರಿತ ಜಾರಿ, ಮೇಕೆದಾಟು ಯೋಜನೆ ಜಾರಿ, ರೈತರ ಸಾಲ ಮನ್ನಾ ...

ಬೆಂಗಳೂರು: ಬಯಲು ಸೀಮೆಗೆ ಶಾಶ್ವತ ನೀರಾವರಿ, ಮಹದಾಯಿ-ಕಳಸಾ ಬಂಡೂರಿ ಯೋಜನೆಯ ತ್ವರಿತ ಜಾರಿ, ಮೇಕೆದಾಟು ಯೋಜನೆ ಜಾರಿ, ರೈತರ ಸಾಲ ಮನ್ನಾ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಾಟಾಳ್ ನಾಗರಾಜ್ ನೇತೃತ್ವದ ಕನ್ನಡ ಒಕ್ಕೂಟ ಬಂದ್‍ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ.
ಬಂದ್ ಹೋರಾಟದ ಭಾಗವೆಂದು ವಾದಿಸಿರುವ ಕೆಲವು ಸಂಘಟನೆಗಳು ಬೆಂಬಲ ಘೋಷಿಸಿವೆ. ಸಾರಾ ಗೋವಿಂದು ಅಧ್ಯಕ್ಷರಾಗಿರುವ ರಾಜ್ಯ ಚಲನಚಿತ್ರ ವಾಣಿಜ್ಯ ಮಂಡಳಿ, ರಾಜ್ಯ ಲಾರಿ ಮಾಲೀಕರ ಸಂಘ, ಕರವೇ ಪ್ರವೀಣ್ ಶೆಟ್ಟಿ ಬಣ, ಕನ್ನಡ ಸೇನೆ, ರೈತ ಸಂಘ, ಬಯಲು ಸೀಮೆ ಹೋರಾಟಗಾರರ ಸಮಿತಿ ಬೆಂಬಲ ಘೋಷಿಸಿದೆ.
ಇಂದಿನ ಬಂದ್‍ಗೆ ಕರವೇ ನಾರಾಯಣಗೌಡ ಬಣ, ರಾಜ್ಯ ರಸ್ತೆ ಸಾರಿಗೆ ನೌಕರರ ಒಕ್ಕೂಟ, ಬಿಎಂಟಿಸಿ ನೌಕರರ ಸಂಘ, ಖಾಸಗಿ ಶಾಲಾ-ಕಾಲೇಜುಗಳ ಆಡಳಿತ ಮಂಡಳಿಗಳ ಒಕ್ಕೂಟ, ಹೋಟೆಲ್ ಮಾಲೀಕರ ಸಂಘ, ಆಟೋ ಚಾಲಕರ ಸಂಘ, ಪೆಟ್ರೋಲ್ ಬಂಕ್ ಮಾಲೀಕರ ಸಂಘ ಬೆಂಬಲ ಸೂಚಿಸಿಲ್ಲ.
ಬಂದ್‍ನಿಂದ ಖಾಸಗಿ ಶಾಲೆಗಳ ಸಂಘ ಹೊರಗುಳಿದಿವೆ. ರಾಮನಗರ, ಚಿಕ್ಕಬಳ್ಳಾಪುರ, ಕೋಲಾರದಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಬಂದ್ ಗೆ  ಬೆಂಬಲ ನೀಡಲಾಗಿದೆ. ಬೆಂಗಲೂರಿನಲ್ಲಿ ಎಂದಿನಂತೆ ಕೆಎಸ್ ಆರ್ ಟಿಸಿ ಬಸ್, ಮೆಟ್ರೋ ರೈಲು, ಆಟೋ, ಕ್ಯಾಬ್ ಗಳು ಸಂಚರಿಸುತ್ತಿವೆ. ಇದುವರೆಗೂ ಯಾವುದೇ ಅಹಿತರಕರ ಘಟನೆಯ ವರದಿಯಾಗಿಲ್ಲ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

17 ಭಾಷೆಗಳಲ್ಲಿ ಹಾಡಿದರೂ ಕನ್ನಡದ ನೆಲದಲ್ಲೇ ಮಣ್ಣಾದ ಗಾನಕೋಗಿಲೆ: ತೆಲುಗು ಬ್ರಾಹ್ಮಣ ಸಂಪ್ರದಾಯದಂತೆ ಎಸ್.ಜಾನಕಿ ಅಂತ್ಯಕ್ರಿಯೆ!

ನಿಮ್ಮ ತಲೆ ತೆಗಿತೀವಿ: ಟ್ರಂಪ್, ನೆತನ್ಯಾಹು, ಮೆಲೋನಿ ಹಾಗೂ ಯುರೋಪಿಯನ್ ನಾಯಕರು ನಮ್ಮ ಟಾರ್ಗೆಟ್; ಇರಾನ್ ಪತ್ರಿಕೆ

ಮಾರುವೇಷ ಯಾಕೆ ಸ್ವಾಮಿ... ಇದು ಚಿಲ್ಲರೆ ಕಾಲವಲ್ಲ, ಕ್ಯೂಆರ್ ಕೋಡ್ ಕಾಲ: ಸಚಿವ ಸುರೇಶ್‌ಗೆ ಶಾಸಕ ಸುರೇಶ್ ಕುಮಾರ್ ಪಾಠ

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

ಅಯೋಧ್ಯೆ ಟ್ರಸ್ಟ್ ಸಿಇಒ ಅಧಿಕಾರಗಳನ್ನು ನಿರ್ಧರಿಸುತ್ತದೆ, ಸರ್ಕಾರವಲ್ಲ: ನಿರ್ಮಾಣ ಸಮಿತಿಯ ಅಧ್ಯಕ್ಷ ನೃಪೇಂದ್ರ ಮಿಶ್ರಾ