ಜಿ.ಪರಮೇಶ್ವರ್ 
ರಾಜ್ಯ

ರೈತರ ಸಾಲ ಮನ್ನಾಗೆ ರಾಷ್ಟ್ರೀಯ ನೀತಿ ಅಗತ್ಯವಿದೆ: ಪರಮೇಶ್ವರ್

ರೈತರ ಸಾಲ ಮನ್ನಾದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವನ್ನು ಪ್ರಕಟಿಸುವಂತೆ ಹಾಗೂ ರೈತರ ಸಾಲ ಮನ್ನಾಗೆ ರಾಷ್ಟ್ರೀಯ ನೀತಿ ರೂಪಿಸುವಂತೆ ...

ಬೆಂಗಳೂರು: ಸಾಲಮನ್ನಾ ಮಾಡುವಂತೆ ರೈತರು ಒತ್ತಯಿಸಿ ಹಲವೆಡೆ ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರ ಸಾಲ ಮನ್ನಾದ ಬಗ್ಗೆ ಕೇಂದ್ರ ಸರ್ಕಾರ ಸ್ಪಷ್ಟ ನಿಲುವನ್ನು ಪ್ರಕಟಿಸುವಂತೆ  ಹಾಗೂ ರೈತರ ಸಾಲ ಮನ್ನಾಗೆ ರಾಷ್ಟ್ರೀಯ ನೀತಿ ರೂಪಿಸುವಂತೆ  ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಆಗ್ರಹಿಸಿದ್ದಾರೆ. 
ಸಿದ್ದರಾಮಯ್ಯ ಸರ್ಕಾರ ಕೋ- ಆಪರೇಟಿವ್ ಬ್ಯಾಂಕ್ ಗಳ ಸಾಲಮನ್ನಾ ಮಾಡಲು ಬದ್ಧವಾಗಿದೆ. ಆದರೆ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್ ಗಳ ಸಾಲ ಮನ್ನಾ ಮಾಡಲಿದೆಯೇ ಎಂದು ಅವರು ಪ್ರಶ್ನಿಸಿದ್ದಾರೆ. ರಾಜ್ಯ ಸರ್ಕಾರ ಸಹಕಾರ ಬ್ಯಾಂಕುಗಳ ರೈತರ ಸಾಲ ಮನ್ನಾ ಮಾಡಿದರೆ, ರಾಷ್ಟ್ರೀಕೃತ ಬ್ಯಾಂಕುಗಳ ರೈತರ ಸಾಲ ಉಳಿಯುತ್ತದೆ. ಇದರಿಂದ ಅಸಮಾನತೆ ಸೃಷ್ಟಿಯಾಗುತ್ತದೆ. ಹಾಗಾಗಿ, ರಾಷ್ಟ್ರೀಕೃತ ಬ್ಯಾಂಕುಗಳ ಸಾಲಮನ್ನಾವೂ ಅಗತ್ಯವಿದೆ ಎಂದು ಹೇಳಿದ್ದಾರೆ. 
ವಿವಿಐಪಿಗಳ ವಾಹನಗಳ ಕೆಂಪು ದೀಪಗಳನ್ನು ತೆಗೆಯಲು ರಾತ್ರೋರಾತ್ರಿ ರಾಷ್ಟ್ರೀಯ ತೀರ್ಮಾನವನ್ನು ಕೈಗೊಳ್ಳುವ ಕೇಂದ್ರ ಸರ್ಕಾರ ಸಾಲಮನ್ನಾದ ಬಗ್ಗೆ ರಾಷ್ಟ್ರೀಯ ನೀತಿಯನ್ನು ಕೈಗೊಳ್ಳಲು ಮೀನಾ-ಮೇಷ ಎಣಿಸುತ್ತಿರುವುದು ಸರಿಯಲ್ಲ. ಕೂಡಲೇ ಸಾಲಮನ್ನಾದ ಬಗ್ಗೆ ಒಂದು ಖಚಿತ ನಿಲುವನ್ನು ಪ್ರಕಟಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅನಕ್ಷರಸ್ಥ' ಪ್ರಧಾನಿಯಿಂದಾಗಿ ಪೆಟ್ರೋಲ್-ಡೀಸೆಲ್ ಮತ್ತು ಅನಿಲ ಬೆಲೆಗಳು ಹೆಚ್ಚಳವಾಗಿದೆ: ಸಿಎಂ ಸಿದ್ದರಾಮಯ್ಯ

IPL Valuation Chart: 1.63 ಲಕ್ಷ ಕೋಟಿಗೇರಿದ ಐಪಿಎಲ್ ಮೌಲ್ಯ, CSK ಹಿಂದಿಕ್ಕಿ ಅಗ್ರಸ್ಥಾನಕ್ಕೇರಿದ KKR, 'ಕಿಂಗ್' ವಿರಾಟ್ ಕೊಹ್ಲಿ ಗಳಿಸಿದ್ದೆಷ್ಟು ಗೊತ್ತಾ?

ನಾಯಕತ್ವ ತ್ಯಜಿಸಿದ ಬಳಿಕ ಸಂಕಷ್ಟದಲ್ಲಿದ್ದೆ.. ನೆರವಿಗೆ ಬಂದಿದ್ದು 'ಜಾಮಿ' ಮಾತ್ರ: Virat Kohli

IPL 2026: ವೈಭವ್ ಸೂರ್ಯವಂಶಿ ಆರ್ಭಟಕ್ಕೆ ಮಕಾಡೆ ಮಲಗಿದ LSG, ಗೆದ್ದ RR ಪ್ಲೇ ಆಫ್ ಕನಸು ಜೀವಂತ!

ಮಾರ್ತಾಂಡ ಆನೆ ಕೊಂದ ಕಂಜನ್ ದಸರಾದಿಂದ ಶಾಶ್ವತ ನಿಷೇಧ: ಸಚಿವ ಈಶ್ವರ್ ಖಂಡ್ರೆ ಆದೇಶ

SCROLL FOR NEXT