ಶಿರಾಡಿ ಘಾಟ್ ನಲ್ಲಿ ಡಾಂಬರು ಕಿತ್ತುಹೋಗಲು ಮುಖ್ಯ ಕಾರಣವಾಗುವ ಭಾರೀ ವಾಹನಗಳ ಸಂಚಾರ 
ರಾಜ್ಯ

ಮುಂಗಾರು ಮಳೆ ಆಗಮನ: ಶಿರಾಡಿ ಘಾಟ್ ನಲ್ಲಿ ಮತ್ತೆ ರಸ್ತೆಯದ್ದೇ ಸಮಸ್ಯೆ!

ಮುಂಗಾರು ಋತು ಆಗಮಿಸಿ ಇನ್ನೂ ಹದಿನೈದು ದಿನಗಳಾಗಿಲ್ಲ. ಆಗಲೇ ಬೆಂಗಳೂರು-ಮಂಗಳೂರು ರಾಷ್ಟ್ರೀಯ...

ಮಂಗಳೂರು: ಮುಂಗಾರು ಋತು ಆಗಮಿಸಿ ಇನ್ನೂ ಹದಿನೈದು ದಿನಗಳಾಗಿಲ್ಲ. ಆಗಲೇ ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಶಿರಾಡಿ ಘಾಟ್ ರಸ್ತೆಯಲ್ಲಿ ಹೊಸದಾಗಿ ಹಾಕಿರುವ ಡಾಂಬರು ಕಿತ್ತುಹೋಗುತ್ತಿದೆ.
ಘಾಟ್ ಸೆಕ್ಷನ್ ನ ಮರೇನಹಳ್ಳಿ, ಅಡ್ಡಹೊಳೆ, ಕುಂಪುಹೊಳೆ ಮತ್ತು ಗುಂಡ್ಯದ 22 ಕಿಲೋ ಮೀಟರ್ ಉದ್ದದ ರಸ್ತೆಯಲ್ಲಿ ಹೊಂಡ, ಗುಂಡಿಗಳು ಕಾಣಸಿಗುತ್ತವೆ. ಇಲ್ಲಿ ಕಳೆದ 15 ದಿನಗಳಿಂದ ಮಳೆ ಅವ್ಯಾಹತವಾಗಿ ಸುರಿಯುತ್ತಿದೆ.
ಇಲ್ಲಿನ ರಸ್ತೆಗೆ ಕಳೆದ ಏಪ್ರಿಲ್ ನಲ್ಲಿ ಡಾಂಬರು ಹಾಕಲಾಗಿತ್ತು. ಆದರೆ ಘಾಟ್ ವಲಯದ 13 ಕಿಲೋ ಮೀಟರ್ ಉದ್ದದ ರಸ್ತೆಯ ಕಾಂಕ್ರೀಟ್ ವಿಸ್ತರಣೆ ಕೆಲಸ ಅರ್ಧಕ್ಕೆ ನಿಂತಿದೆ.
'' ಶಿರಾಡಿ ಘಾಟ್ ನಲ್ಲಿ ಬಂದ ನಂತರ ನಮ್ಮ ಕಾರಿನ ಮೋಲೆಲ್ಲಾ ಟಾರಿನ ಸಣ್ಣ ಚುಕ್ಕೆಗಳು ಮಳೆ ನೀರಿಗೆ ಕುಳಿತುಕೊಂಡಿವೆ. ನಮ್ಮ ಸಂಬಂಧಿಕರ ಕಾರಿನಲ್ಲಿಯೂ ಹಾಗೆಯೇ ಆಗಿದೆ ಎಂದು ಮಂಗಳೂರು ನಗರದ ಹೊಟೇಲ್ ಮಾಲೀಕ  ಪ್ರಕಾಶ್ ಶೆಟ್ಟಿ ತಿಳಿಸಿದ್ದಾರೆ.
ರಸ್ತೆಯ ಡಾಂಬರು ಕಿತ್ತುಹೋಗಿರುವುದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಿಶೇಷತೆಯನ್ನೇನು ಉಂಟು ಮಾಡಿಲ್ಲ. ಭಾರೀ ಮಳೆ ಮತ್ತು ಶಿರಾಡಿ ಘಾಟ್ ನಲ್ಲಿ ಭಾರೀ ವಾಹನಗಳ ಸಂಚಾರದಿಂದ ರಸ್ತೆಗಳಿಗೆ ಹಾಕಿದ ಡಾಂಬರು ಕಿತ್ತು  ಹೋಗುವುದು ಸಾಮಾನ್ಯವಾಗಿದೆ. 
ಶಿರಾಡಿ ಘಾಟ್ ನಲ್ಲಿ ಅಧಿಕ ಗಾತ್ರದ ವಾಹನಗಳು ಸಂಚಾರ ನಡೆಸುತ್ತಿರುವುದರಿಂದ ವಾಹನಗಳ ದಟ್ಟಣೆ  ಹೆಚ್ಚಾಗಿರುವುದರಿಂದ ರಸ್ತೆಗಳ ನಿರ್ವಹಣೆಗೆ ನೀಡುವ ಹಣ ಸಾಕಾಗುವುದಿಲ್ಲ ಎನ್ನುತ್ತಾರೆ ಅಧಿಕಾರಿಗಳು.
ಶಿರಾಡಿ ರಸ್ತೆ ದೇಶದಲ್ಲಿ ಅತ್ಯಂತ ಜನನಿಬಿಡ ಮತ್ತು ವಾಹನ ದಟ್ಟಣೆ ಹೊಂದಿರುವ ಹೆದ್ದಾರಿಗಳಲ್ಲಿ ಒಂದಾಗಿದ್ದು, ಪ್ರತಿನಿತ್ಯ ಸುಮಾರು 1 ಲಕ್ಷ ಪ್ರಯಾಣಿಕರ ಕಾರುಗಳು ಓಡಾಡುತ್ತವೆ. ಈ ಹೆದ್ದಾರಿಯ ನಿರ್ವಹಣೆಗೆ 30 ಕೋಟಿ ರೂಪಾಯಿ ಬೇಕಾಗಬಹುದು ಎಂದು ಅಧಿಕಾರಿಗಳು ಹೇಳುತ್ತಾರೆ.
ಕಳೆದ 4 ವರ್ಷಗಳಲ್ಲಿ ಮಂಗಳೂರಿನಿಂದ ಬೆಂಗಳೂರು ಮಧ್ಯೆ ರಸ್ತೆ ಸಂಚಾರ ಸಂಪರ್ಕಕ್ಕೆ ಕೇವಲ 57 ಕೋಟಿ ರೂಪಾಯಿಗಳನ್ನು ಖರ್ಚು ಮಾಡಲಾಗಿದೆ. ತಮ್ಮ  ಹಣವನ್ನು ಸರಿಯಾಗಿ ನೀಡುತ್ತಿಲ್ಲ ಎಂದು ಕಾಮಗಾರಿ ಗುತ್ತಿಗೆಯವರು ಕೂಡ ಕಾಲಕಾಲಕ್ಕೆ ಸರಿಯಾಗಿ ಕೆಲಸ ಮಾಡುತ್ತಿಲ್ಲ.
 ಸರಿಯಾದ ಚರಂಡಿ ನಿರ್ಮಿಸದೆ ಡಾಂಬರು ಹಾಕಿದರೆ ಪ್ರತಿ ಮಳೆಗೂ ಕಿತ್ತುಹೋಗುತ್ತದೆ ಎಂದು ಸಕಲೇಶಪುರದ ಶಿರಾಡಿ ರಾಷ್ಟ್ರೀಯ ಹೆದ್ದಾರಿ ರಕ್ಷಣಾ ಸಮಿತಿಯ ಕಾರ್ಯಕರ್ತರೊಬ್ಬರು ಹೇಳುತ್ತಾರೆ. ಪ್ರತಿ ವರ್ಷ ಸರ್ಕಾರ ಸಾರ್ವಜನಿಕರ ಹಣವನ್ನು ರಸ್ತೆ ಕಾಮಗಾರಿಗೆಂದು ಸುರಿದು ನಿಷ್ಟ್ರಯೋಜಕಗೊಳಿಸುತ್ತಿದೆ ಎಂದು ಹೇಳಿದರು.
ಸುಮಾರು 3,000 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಿಸಲು ಜೈಕೊ ಇನ್ಫ್ರಾಸ್ಟ್ರಕ್ಚರ್ ಕಂಪೆನಿ ಜೊತೆ ಮಾತುಕತೆ ನಡೆಸುತ್ತಿದ್ದೇವೆ ಎಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಪಕ್ಷದ ಮೇಲೆ ನನಗೆ ನಂಬಿಕೆ ಇದೆ: ದುಡ್ಡು- ಬ್ಲಡ್ ನಿರಂತರ ಚಲನೆಯಲ್ಲಿ ಇರಬೇಕು; ಅಕ್ಕಪಕ್ಕದಲ್ಲಿ ಇರುವವರೇ ಮೋಸ ಮಾಡುತ್ತಾರೆ, ಎಚ್ಚರ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT