ವಿಧಾನಸಭೆ 
ರಾಜ್ಯ

ಜಿಎಸ್‌ಟಿ ವಿಧೇಯಕಕ್ಕೆ ರಾಜ್ಯ ವಿಧಾನಸಭೆ ಅಂಗೀಕಾರ

ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ- 2017 ಅನ್ನು ಗುರುವಾರ ವಿಧಾನಸಭೆಯಲ್ಲಿ ಅವಿರೋಧವಾಗಿ ಅಂಗೀಕಾರ....

ಬೆಂಗಳೂರು: ಕರ್ನಾಟಕ ಸರಕು ಮತ್ತು ಸೇವೆಗಳ ತೆರಿಗೆ ವಿಧೇಯಕ- 2017 ಅನ್ನು ಗುರುವಾರ ವಿಧಾನಸಭೆಯಲ್ಲಿ ಅವಿರೋಧವಾಗಿ ಅಂಗೀಕಾರ ನೀಡಲಾಯಿತು.  
ಹಣಕಾಸು ಸಚಿವರಾಗಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯ ಇಂದು ವಿಧಾನಸಭೆಯಲ್ಲಿ ವಿಧೇಯಕವನ್ನು ಮಂಡಿಸಿ, ಮಸೂದೆ ಕುರಿತು ವಿವರಿಸಿದರು. ಸುದೀರ್ಘ ಚರ್ಚೆಯ ನಂತರ ಜಿಎಸ್ ಟಿ ವಿಧೇಯಕಕ್ಕೆ ಒಪ್ಪಿಗೆ ನೀಡಲಾಯಿತು. 
ಈ ವೇಳೆ ಮಾತನಾಡಿದ ಸಿಎಂ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಜಿಎಸ್‌ಟಿ ಕಾಯ್ದೆಗೆ ಪೂರಕವಾಗಿ ವಿಧೇಯಕವನ್ನು ಮಂಡಿಸಲಾಗಿದೆ. ಇಲ್ಲಿ ನಡೆಯುವ ಚರ್ಚೆಗಳಿಂದ ಬದಲಾವಣೆಗಳು ಅಸಾಧ್ಯ. ಆದರೂ, ಇಲ್ಲಿ ವ್ಯಕ್ತವಾದ ಅಭಿಪ್ರಾಯಗಳನ್ನು ಜಿಎಸ್‌ಟಿ ಮಂಡಳಿ ಗಮನಕ್ಕೆ ತರಲಾಗುವುದು ಎಂದು ಹೇಳಿದರು.
ಈ ಕುರಿತು ಮಾತನಾಡಿದ ಬಿಜೆಪಿಯ ವಿಶ್ವೇಶ್ವರಯ್ಯ ಹೆಗಡೆ ಕಾಗೇರಿ, ಕೇಂದ್ರ ಸರ್ಕಾರ ಜಾರಿಗೆ ತರುವ ಮುನ್ನ ರಾಜ್ಯ ಸರ್ಕಾರ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯಬೇಕಾಗಿತ್ತು. ಆ ಮೂಲಕ ಈ ವಿಚಾರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ ಎಂಬುದನ್ನು ತೋರಿಸುವ ಮೂಲಕ ಮಾದರಿಯಾಗಬೇಕಿತ್ತು ಎಂದರು.
ಮಸೂದೆ ಕುರಿತಂತೆ ವರ್ತಕರಲ್ಲಿ ಇನ್ನೂ ಗೊಂದಲ ಇದೆ. ಈ ಕುರಿತಂತೆ ಹೆಚ್ಚಿನ ಪ್ರಚಾರ ಮಾಡಬೇಕಾಗಿತ್ತು. ಅವರಿಗೆ ತಿಳುವಳಿಕೆ ಮೂಡಿಸಬೇಕಾಗಿತ್ತು ಎಂದರು.
ಇದಕ್ಕೆ ಪ್ರತಿಕ್ರಿಯಿಸಿದ ಕೃಷಿ ಸಚಿವ ಕೃಷ್ಣಬೈರೇಗೌಡ, ಜಿಎಸ್‌ಟಿ ನೋಂದಣಿಯಲ್ಲಿ ನಾವು ದೇಶದಲ್ಲೇ ನಂ. 1 ಸ್ಥಾನದಲ್ಲಿದ್ದೇವೆ. ಜಿಎಸ್‌ಟಿ ಜಾರಿಗೆ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳುವಲ್ಲಿಯೂ ಮುಂದಿದ್ದೇವೆ. ವರ್ತಕರಲ್ಲಿ ಯಾವುದೇ ಗೊಂದಲ ಇಲ್ಲ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ದ್ವಿಶತಕ ಮಿಸ್: ಗಿಲ್ ತಪ್ಪಿನಿಂದ ರನ್ ಔಟ್ ಆಗಿ ತಲೆ ಚಚ್ಚಿಕೊಂಡ ಜೈಸ್ವಾಲ್; ಮೈದಾನ ತೊರೆಯುವಂತೆ ಅಂಪೈರ್ ತಾಕೀತು; Video!

SCROLL FOR NEXT