ಸಂತೋಷ್ ಲಾಡ್ 
ರಾಜ್ಯ

ಸಚಿವ ಸಂತೋಷ್ ಲಾಡ್ ಗೆ 5 ತಿಂಗಳು ಜೈಲು ಶಿಕ್ಷೆ: 7.5 ಕೋಟಿ ರು ದಂಡ

ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ದಾಖಲಿಸಿದ್ದ ಚೆಕ್‌ ಬೌನ್ಸ್‌ ಪ್ರಕರಣ ಸಂಬಂಧ ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರಿಗೆ 5 ತಿಂಗಳ ಸಾಧಾರಣ ...

ಬೆಂಗಳೂರು: ನಿರ್ಮಾಪಕ ರಾಕ್ ಲೈನ್ ವೆಂಕಟೇಶ್ ಅವರು ದಾಖಲಿಸಿದ್ದ ಚೆಕ್‌ ಬೌನ್ಸ್‌ ಪ್ರಕರಣ ಸಂಬಂಧ ಕಾರ್ಮಿಕ ಸಚಿವ ಸಂತೋಷ್ ಲಾಡ್‌ ಅವರಿಗೆ 5 ತಿಂಗಳ ಸಾಧಾರಣ ಜೈಲು ಶಿಕ್ಷೆ ವಿಧಿಸಿ ನಗರದ 42ನೇ ಎಸಿಎಂಎಂ ನ್ಯಾಯಾಲಯ ಆದೇಶ ಹೊರಡಿಸಿದೆ.
ರಾಕ್‌ಲೈನ್‌ ಎಂಟರ್‌ಟೈನ್‌ಮೆಂಟ್‌’ ಪರವಾಗಿ ಸಿನಿಮಾ ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌ ದಾಖಲಿಸಿದ್ದ ಖಾಸಗಿ ಮೊಕದ್ದಮೆಯ ವಿಚಾರಣೆ ನಡೆಸಿದ್ದ ನ್ಯಾಯಾಧೀಶರಾದ ಅನ್ನುಗೌಡ ಪಾಟೀಲ, ಶಿಕ್ಷೆಯ ಜೊತೆಗೆ ರು. 7.25 ಕೋಟಿ ದಂಡ ಪಾವತಿ ಮಾಡಬೇಕು. ಪಾವತಿಸದಿದ್ದರೆ ಪ್ರತ್ಯೇಕವಾಗಿ ಆರು ತಿಂಗಳು ಸಾಧಾರಣ ಜೈಲು ಶಿಕ್ಷೆ ಅನುಭವಿಸಬೇಕು’ ಎಂದು  ಆದೇಶದಲ್ಲಿ ತಿಳಿಸಿದ್ದಾರೆ.
ರಾಕ್‌ಲೈನ್‌ ವೆಂಕಟೇಶ್‌ ಹಾಗೂ ಸಂತೋಷ್‌ ಲಾಡ್‌ ಹಲವು ವರ್ಷಗಳಿಂದ ಸ್ನೇಹಿತರು.
ದೆಹಲಿ ಬಿಲ್ಡರೊಬ್ಬರು ನ್ಯಾಯಾಲಯದಲ್ಲಿ ದಾಖಲಿಸಿದ್ದ ಪ್ರಕರಣದಲ್ಲಿ ಹಣ ಪಾವತಿ ಮಾಡಲು ಆರ್ಥಿಕ ತೊಂದರೆ ಇದೆ  ಎಂದು ಹೇಳಿದ್ದ ಲಾಡ್‌, ವೆಂಕಟೇಶ್‌ ಅವರ ಬಳಿ 2014ರಲ್ಲಿ 6.20 ಕೋಟಿ ಪಡೆದಿದ್ದರು. ಈ ಹಣವನ್ನು ವೆಂಕಟೇಶ್‌, ರಾಕ್‌ಲೈನ್‌ ಎಂಟರ್‌ಟೈನ್‌ಮೆಂಟ್‌’  ಕಂಪೆನಿಯ ಮೂಲಕ ಶೀತಲ್‌ ಡೆವಲಪರ್ಸ್‌ ಕಂಪೆನಿಯ ಹೆಸರಿಗೆ ಡಿ.ಡಿ ತೆಗೆಸಿ ಕೊಟ್ಟಿದ್ದರು.
ಈ ವೇಳೆ ಚೆಕ್‌ ನೀಡಿದ್ದ ಲಾಡ್‌, ಐದೂವರೆ ತಿಂಗಳ ನಂತರ ಹಣ ವಾಪಸ್‌ ಕೊಡುತ್ತೇನೆ ಎಂದು ಭರವಸೆ ನೀಡಿದ್ದರು. ನಿಗದಿತ ಸಮಯ ಮುಗಿದ ಬಳಿಕ ಚೆಕ್‌ ಅನ್ನು ಬ್ಯಾಂಕ್‌ಗೆ ಹಾಕಿದಾಗ ಬೌನ್ಸ್‌ ಆಗಿತ್ತು.
ಇದಾದ ನಂತರ ಹಣ ವಾಪಸ್‌ ಕೊಡುವಂತೆ ವೆಂಕಟೇಶ್‌ ಅವರು ಹಲವು ಬಾರಿ ಕೇಳಿದರೂ ಯಾವುದೇ ಸ್ಪಂದನೆ ಸಿಕ್ಕಿರಲಿಲ್ಲ. ಹೀಗಾಗಿ 2015ರಲ್ಲಿ ಲಾಡ್‌ ವಿರುದ್ಧ ಖಾಸಗಿ ಮೊಕದ್ದಮೆ ಹೂಡಿದ್ದರು.
ಸೋಮವಾರ ಬೆಳಿಗ್ಗೆ ಪ್ರಕರಣದ ಆದೇಶ ಹೊರಬಿದ್ದರೂ ಲಾಡ್‌ ನ್ಯಾಯಾಲಯದಲ್ಲಿ ಹಾಜರಿರಲಿಲ್ಲ. ಆಗ ನ್ಯಾಯಾಧೀಶರು, ಮಧ್ಯಾಹ್ನ 3 ಗಂಟೆಯೊಳಗಾಗಿ  (ಲಾಡ್‌) ನ್ಯಾಯಾಲಯಕ್ಕೆ ಹಾಜರಾಗಬೇಕು. ಇಲ್ಲದಿದ್ದರೆ ಅವರು ಇರುವ ಸ್ಥಳದಲ್ಲೇ ಬಂಧಿಸಲು ಸೂಚನೆ ನೀಡುವುದಾಗಿ ಹೇಳಿದ್ದರು.
ಈ ಮಾಹಿತಿ ತಿಳಿದ ಲಾಡ್‌ ಮಧ್ಯಾಹ್ನ 3 ಗಂಟೆಗೆ ನ್ಯಾಯಾಲಯಕ್ಕೆ ಹಾಜರಾಗಿ, ‘ಪ್ರಕರಣ ಸಂಬಂಧ ಮೇಲ್ಮನವಿ ಸಲ್ಲಿಸುತ್ತೇನೆ. ಅದಕ್ಕೆ ಕಾಲಾವಕಾಶ ನೀಡಬೇಕು’ ಎಂದು ಕೋರಿದರು. ಅದನ್ನು ಮನ್ನಿಸಿದ ನ್ಯಾಯಾಲಯವು  ಶಿಕ್ಷೆಯನ್ನು ಒಂದು ತಿಂಗಳು ಅಮಾನತ್ತಿನಲ್ಲಿಟ್ಟು ಜಾಮೀನು ಮಂಜೂರು ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

SCROLL FOR NEXT