ಸಾಂದರ್ಭಿಕ ಚಿತ್ರ 
ರಾಜ್ಯ

ರಾಜ್ಯದಲ್ಲಿ ಕ್ಷೀಣಗೊಂಡ ಮುಂಗಾರು: ಜಲಾಶಯಗಳಲ್ಲಿ ತಗ್ಗಿದ ನೀರಿನ ಪ್ರಮಾಣ

ರ್ನಾಟಕಕ್ಕೆ ಮುಂಗಾರು ಪ್ರವೇಶಿಸಿ 15 ದಿನ ಕಳೆದರು ಮಾನ್ಸೂಮ್ ಮಾರುತಗಳು ಇನ್ನೂ ಚೇತರಿಸಿಕೊಳ್ಳಗದೇ ಕ್ಷೀಣವಾಗಿದೆ. ಪ್ರಮುಖ ಮಳೆ ಬೀಳುವ ..

ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿ 15 ದಿನ ಕಳೆದರು ಮಾನ್ಸೂಮ್ ಮಾರುತಗಳು ಇನ್ನೂ ಚೇತರಿಸಿಕೊಳ್ಳಗದೇ ಕ್ಷೀಣವಾಗಿದೆ. ಪ್ರಮುಖ ಮಳೆ ಬೀಳುವ ಪ್ರದೇಶಗಳಾದ,ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕಳೆದ ವಾರ ಅತಿ ಕಡಿಮೆ ಮಳೆಯಾಗಿದೆ.
ಯಾವಾಗಲೂ ಬೀಳುತ್ತಿದ್ದ ಮಳೆಗಿಂತ ಶೇ. 40 -50 ರಷ್ಟು ಮಳೆ ಕಡಿಮೆಯಾಗಿದೆ. ಅತಿ ಹೆಚ್ಚು ಮಳೆ ಬೀಳುವ ಪ್ರದೇಶವೆಂದು ಗುರುತಿಸಿಕೊಂಡಿರುವ ಸ್ಥಳಗಳಲ್ಲಿ ಮುಂಗಾರು ದುರ್ಬಲಗೊಂಡಿದೆ. ಇದೇ ಪರಿಸ್ಥಿತಿ ಮುಂದುವರೆಯಲಿದ್ದು ಜೂನ್ 24 ರ  ನಂತರ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಮತ್ತು ಕರಾವಳಿ ತೀರಗಳಲ್ಲಿ ಸರಾಸರಿಗಿಂತ ಮಳೆ ಪ್ರಮಾಣ ಕಡಿಮೆಯಾಗಿದೆ, ಕರಾವಳಿ ತೀರದಲ್ಲಿ ಶೇ.48 ಹಾಗೂ ಮಲೆನಾಡು ಭಾಗದಲ್ಲಿ ಶೇ.40 ರಷ್ಟು ಮಾತ್ರ ಮಳೆಯಾಗಿದೆ.
ಕೊಡಗಿನಲ್ಲಿ ಸರಾಸರಿಗಿಂತ ಮಳೆ ತೀರಾ ಕಡಿಮೆಯಾಗಿದ್ದು, ಶೇ.40 ರಷ್ಟು ಮಾತ್ರ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೇವಲ ಶೇ.35 ರಷ್ಟು ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ ಉತ್ತರ ಒಳನಾಡು ಕರ್ನಾಟಕದಲ್ಲಿ ಮಾತ್ರ ಸರಾಸರಿಗಿಂತ ಹೆಚ್ಚಿನ ಮಳೆಯಾಗಿದೆ.
ಕೆಆರ್ ಎಸ್ ಮತ್ತು ಹೇಮಾವತಿ ಜಲಾಶಯಗಳಲ್ಲಿ  ಒಳಹರಿವು ಕಡಿಮೆಯಾಗಿದೆ, ಕಳೆದ ವರ್ಷ ಈ ವೇಳೆಯಲ್ಲಿ ಕೆಆರ್ ಎಸ್ ನಲ್ಲಿ  72.42 ಅಡಿ ನೀರಿತ್ತು, ಆದರೆ ಈ ಬಾರಿ ಕೇವಲ 6795 ಅಡಿ ನೀರು ಮಾತ್ರ ಸಂಗ್ರಹವಾಗಿದೆ.
ಹೇಮಾವತಿ ನದಿಯಲ್ಲಿ ಕಳೆದ ವರ್ಷ 3.3 ಟಿಎಂಸಿ ಅಡಿ ನೀರಿದ್ದರೇ, ಈ ವರ್ಷ ಕೇವಲ 2.01 ಅಡಿ ನೀರು ಮಾತ್ರ ಬಾಕಿಉಳಿದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ಸಿಎಂ ಸಿದ್ದರಾಮಯ್ಯ ಪದತ್ಯಾಗ; ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮಹತ್ವದ ಸಭೆ

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

SCROLL FOR NEXT