ಬೆಂಗಳೂರು: ಕರ್ನಾಟಕಕ್ಕೆ ಮುಂಗಾರು ಪ್ರವೇಶಿಸಿ 15 ದಿನ ಕಳೆದರು ಮಾನ್ಸೂಮ್ ಮಾರುತಗಳು ಇನ್ನೂ ಚೇತರಿಸಿಕೊಳ್ಳಗದೇ ಕ್ಷೀಣವಾಗಿದೆ. ಪ್ರಮುಖ ಮಳೆ ಬೀಳುವ ಪ್ರದೇಶಗಳಾದ,ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಕಳೆದ ವಾರ ಅತಿ ಕಡಿಮೆ ಮಳೆಯಾಗಿದೆ.
ಯಾವಾಗಲೂ ಬೀಳುತ್ತಿದ್ದ ಮಳೆಗಿಂತ ಶೇ. 40 -50 ರಷ್ಟು ಮಳೆ ಕಡಿಮೆಯಾಗಿದೆ. ಅತಿ ಹೆಚ್ಚು ಮಳೆ ಬೀಳುವ ಪ್ರದೇಶವೆಂದು ಗುರುತಿಸಿಕೊಂಡಿರುವ ಸ್ಥಳಗಳಲ್ಲಿ ಮುಂಗಾರು ದುರ್ಬಲಗೊಂಡಿದೆ. ಇದೇ ಪರಿಸ್ಥಿತಿ ಮುಂದುವರೆಯಲಿದ್ದು ಜೂನ್ 24 ರ ನಂತರ ಮುಂಗಾರು ಚುರುಕುಗೊಳ್ಳಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಮಲೆನಾಡು ಮತ್ತು ಕರಾವಳಿ ತೀರಗಳಲ್ಲಿ ಸರಾಸರಿಗಿಂತ ಮಳೆ ಪ್ರಮಾಣ ಕಡಿಮೆಯಾಗಿದೆ, ಕರಾವಳಿ ತೀರದಲ್ಲಿ ಶೇ.48 ಹಾಗೂ ಮಲೆನಾಡು ಭಾಗದಲ್ಲಿ ಶೇ.40 ರಷ್ಟು ಮಾತ್ರ ಮಳೆಯಾಗಿದೆ.
ಕೊಡಗಿನಲ್ಲಿ ಸರಾಸರಿಗಿಂತ ಮಳೆ ತೀರಾ ಕಡಿಮೆಯಾಗಿದ್ದು, ಶೇ.40 ರಷ್ಟು ಮಾತ್ರ ಮಳೆಯಾಗಿದೆ. ದಕ್ಷಿಣ ಒಳನಾಡಿನಲ್ಲಿ ಕೇವಲ ಶೇ.35 ರಷ್ಟು ಪ್ರಮಾಣದಲ್ಲಿ ಮಳೆಯಾಗಿದೆ. ಆದರೆ ಉತ್ತರ ಒಳನಾಡು ಕರ್ನಾಟಕದಲ್ಲಿ ಮಾತ್ರ ಸರಾಸರಿಗಿಂತ ಹೆಚ್ಚಿನ ಮಳೆಯಾಗಿದೆ.
ಕೆಆರ್ ಎಸ್ ಮತ್ತು ಹೇಮಾವತಿ ಜಲಾಶಯಗಳಲ್ಲಿ ಒಳಹರಿವು ಕಡಿಮೆಯಾಗಿದೆ, ಕಳೆದ ವರ್ಷ ಈ ವೇಳೆಯಲ್ಲಿ ಕೆಆರ್ ಎಸ್ ನಲ್ಲಿ 72.42 ಅಡಿ ನೀರಿತ್ತು, ಆದರೆ ಈ ಬಾರಿ ಕೇವಲ 6795 ಅಡಿ ನೀರು ಮಾತ್ರ ಸಂಗ್ರಹವಾಗಿದೆ.
ಹೇಮಾವತಿ ನದಿಯಲ್ಲಿ ಕಳೆದ ವರ್ಷ 3.3 ಟಿಎಂಸಿ ಅಡಿ ನೀರಿದ್ದರೇ, ಈ ವರ್ಷ ಕೇವಲ 2.01 ಅಡಿ ನೀರು ಮಾತ್ರ ಬಾಕಿಉಳಿದಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos