ನಾಪತ್ತೆಯಾಗಿರುವ ಮಂಜುನಾಥ್ 
ರಾಜ್ಯ

ಜರ್ಮನಿಯಲ್ಲಿ ಬಾಗಲಕೋಟೆ ಇಂಜಿನಿಯರ್ ನಾಪತ್ತೆ, ವಿದೇಶಾಂಗ ಸಚಿವಾಲಯದ ಸಹಾಯ ಕೋರಿದ ಕುಟುಂಬ

ಕರ್ನಾಟಕದ ಬಾಗಲಕೋಟೆ ಮೂಲದ 26 ವರ್ಷದ ಇಂಜಿನಿಯರ್ ಮಂಜುನಾಥ್ ಅವರು ಕಳೆದ ಭಾನುವಾರದಿಂದ ಜರ್ಮನಿಯ ಹ್ಯಾಂಬರ್ಗ್ ನಲ್ಲಿ...

ಬಾಗಲಕೋಟೆ: ಕರ್ನಾಟಕದ ಬಾಗಲಕೋಟೆ ಮೂಲದ 26 ವರ್ಷದ ಇಂಜಿನಿಯರ್ ಮಂಜುನಾಥ್ ಅವರು ಕಳೆದ ಭಾನುವಾರದಿಂದ ಜರ್ಮನಿಯ ಹ್ಯಾಂಬರ್ಗ್ ನಲ್ಲಿ ನಾಪತ್ತೆಯಾಗಿದ್ದು, ಆತಂಕದಲ್ಲಿರುವ ಆತನ ಕುಟುಂಬ ಪತ್ತೆಗಾಗಿ ಸಹಕಾರ ನೀಡುವಂತೆ ವಿದೇಶಾಂಗ ಸಚಿವಾಲಯಕ್ಕೆ ಗುರುವಾರ ಮನವಿ ಮಾಡಿದೆ.
ಕಳೆದ ಮೂರು ದಿನಗಳಿಂದ ಮಂಜುನಾಥ್ ನಾಪತ್ತೆಯಾಗಿದ್ದು, ಹ್ಯಾಂಬರ್ಗ್ ನದಿ ದಡದಲ್ಲಿ ಆತನ ವಸ್ತುಗಳ ಪತ್ತೆಯಾಗಿವೆ ಎಂದು ಅಧಿಕಾರಿಗಳು  ತಿಳಿಸಿದ್ದಾರೆ. 
ಮಂಜುನಾಥ್ ಬಳಸುತ್ತಿದ್ದ ಸೈಕಲ್, ಇತರೆ ವಸ್ತುಗಳು ಸೇರಿದಂತೆ ಪತ್ರವೊಂದು ಪತ್ತೆಯಾಗಿದ್ದು, ಪತ್ರದ ಕುರಿತು ಅಧಿಕಾರಿಗಳು ತನಿಖೆ ನಡೆಸುತ್ತಿದ್ದಾರೆ.
26 ವರ್ಷದ ಮಂಜುನಾಥ್ ಸಿದ್ದಣ್ಣ ಚುರಿ ಎಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದು, ಮೂಲತಃ ಬಾಗಲಕೋಟೆ ಜಿಲ್ಲೆಯ ಸಿಮಿಕೇರಿ ಗ್ರಾಮದವರಾಗಿದ್ದಾರೆ.
ಮಂಜುನಾಥ್ ಬಸವೇಶ್ವ ಇಂಜಿನಿಯರಿಂಗ್  ಕಾಲೇಜಿನಲ್ಲಿ ಬಿಇ ಮುಗಿಸಿದ್ದರು. ಬಳಿಕ ಮಾಸ್ಟರ್ ಸಾಫ್ಟ್ ವೇರ್ ಉನ್ನತ ವ್ಯಾಸಂಗಕ್ಕಾಗಿ 2 ವರ್ಷಗಳ ಹಿಂದೆ ಜರ್ಮನಿಯ ಹ್ಯಾಂಬರ್ಗ್ ಗೆ ತೆರಳಿದ್ದರು. ಇದೇ ಸೆಪ್ಚೆಂಬರ್ ನಲ್ಲಿ ಊರಿಗೆ ಬರುವುದಾಗಿ ಮಂಜುನಾಥ್  ತಿಳಿಸಿದ್ದರು. ಆದರೆ ಇದೀಗ ಮಂಜುನಾಥ್ ನಾಪತ್ತೆಯಾಗಿದ್ದು, ಈ ಸಂಬಂಧ ಮಂಜುನಾಥ್ ಜೊತೆ ವಾಸಿಸುತ್ತಿದ್ದ ಆತನ ಸ್ನೇಹಿತ ಅನಿಲ್ ದೇಶಪಾಂಡೆ ಅವರು ಹ್ಯಾಂಬರ್ಗ್ ಪೊಲೀಸರಿಗೆ ದೂರು ನೀಡಿದ್ದಾರೆ. ಅಲ್ಲದೆ ಮಂಜುನಾಥ್ ನಾಪತ್ತೆ ಕುರಿತು ಬಾಗಲಕೋಟೆಯಲ್ಲಿರುವ ಕುಟುಂಬಕ್ಕೆ ಮಾಹಿತಿ ನೀಡಿದ್ದಾರೆ.
ಆತಂಕಗೊಂಡ ಮಂಜುನಾಥ್ ಕುಂಟುಂಬ ಬಾಗಲಕೋಟೆ ಸಂಸದ ಪಿಸಿ ಗದ್ದಿಗೌಡರ್ ಅವರನ್ನು ಭೇಟಿ ಮಾಡಿ, ವಿದೇಶಾಂಗ ಸಚಿವಾಲಯದ ನೆರವು ಕೋರಿದ್ದಾರೆ.
ಈ ಬಗ್ಗೆ ತನಿಖೆ ನಡೆಸುತ್ತಿದ್ದ ಜರ್ಮನ್ ಪೊಲೀಸರಿಗೆ ಮಂಜುನಾಥ್ ರೂಮಿನಲ್ಲಿ ಪತ್ರವೊಂದು ದೊರೆತಿದ್ದು, ಇದು ಭಾರತೀಯ ಭಾಷೆಯಲ್ಲಿದ್ದರಿಂದ ಅದನ್ನು ಓದಲು ಸಾಧ್ಯವಾಗದೇ ಭಾರತಿಯ ರಾಯಭಾರ ಕಚೇರಿ  ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರು. ಭಾರತೀಯ ರಾಯಭಾರ ಕಚೇರಿ ಅಧಿಕಾರಿಗಳು ಇದೀಗ ಪತ್ರವನ್ನು ಸ್ವೀಕರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಪ್ರಸ್ತುತ ನಾಪತ್ತೆಯಾಗಿರುವ ಮಂಜುನಾಥ್ ಪತ್ತೆಯಾಗಿ ಕುಟುಂಬಸ್ಥರು ಕೇಂದ್ರ ಸರ್ಕಾರದ  ಮೊರೆ ಹೋಗಿದ್ದು, ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಮನವಿ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT