ಕೆ.ಬಿ ಕೋಳಿವಾಡ 
ರಾಜ್ಯ

ರವಿ ಬೆಳಗೆರೆ ಸೇರಿ ಇಬ್ಬರು ಪತ್ರಕರ್ತರಿಗೆ 1 ವರ್ಷ ಜೈಲು ಶಿಕ್ಷೆ: ವಿಧಾನಸಭೆ ಒಪ್ಪಿಗೆ

ಹಾಯ್‌ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್‌ ರಾಜ್‌ ಗೆ ಸ್ಪೀಕರ್‌ ಕೆ.ಬಿ. ಕೋಳಿವಾಡ 1 ವರ್ಷ ಶಿಕ್ಷೆ ...

ಬೆಂಗಳೂರು:  ಹಾಯ್‌ ಬೆಂಗಳೂರು ಪತ್ರಿಕೆ ಸಂಪಾದಕ ರವಿ ಬೆಳಗೆರೆ ಹಾಗೂ ಯಲಹಂಕ ವಾಯ್ಸ್ ಪತ್ರಿಕೆ ಸಂಪಾದಕ ಅನಿಲ್‌ ರಾಜ್‌ ಗೆ ಸ್ಪೀಕರ್‌ ಕೆ.ಬಿ. ಕೋಳಿವಾಡ 1 ವರ್ಷ ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸಿದ್ದಾರೆ.
ಶಾಸಕ ನಾಗರಾಜ್‌ ಹಾಗೂ ಕೆ.ಬಿ. ಕೋಳಿವಾಡ  ವಿರುದ್ಧ ಅವಹೇಳನಕಾರಿಯಾಗಿ ಸುದ್ದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಹಕ್ಕು ಬಾಧ್ಯತಾ ಸಮಿತಿಯಲ್ಲಿ ಪತ್ರಿಕೆ ಸಂಪಾದಕರ ವಿರುದ್ಧ ದೂರು ನೀಡಲಾಗಿ.  ದೂರಿನನ್ವಯ ಸಮಿತಿಯು ರವಿ ಬೆಳಗೆರೆ ಅವರಿಗೆ 1 ವರ್ಷ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ. ದಂಡ ವಿಧಿಸುವಂತೆ ಶಿಫಾರಸು ಮಾಡಿತ್ತು. ಸಮಿತಿಯ ಶಿಫಾರಸಿನಂತೆ ಅವರ ವಿರುದ್ಧ 1 ವರ್ಷ ಜೈಲು ಶಿಕ್ಷೆ ಮತ್ತು 10 ಸಾವಿರ ರೂ. ದಂಡ ವಿಧಿಸಬೇಕೆಂದು ಸದನದಲ್ಲಿ ಪಕ್ಷಭೇದ ಮರೆತು ಶಾಸಕರು ಒತ್ತಾಯ ಮಾಡಿದರು.
ಸದನದ ಒಪ್ಪಿಗೆಯ ಹಿನ್ನೆಲೆಯಲ್ಲಿ ಸ್ಪೀಕರ್‌ ಕೆ.ಬಿ. ಕೋಳಿವಾಡ ಶಿಕ್ಷೆ ಘೋಷಿಸಿದ್ದಾರೆ. ಅದೇ ರೀತಿ ಯಲಹಂಕ ಶಾಸಕ ಎಸ್‌.ಆರ್‌. ವಿಶ್ವನಾಥ್ ವಿರುದ್ಧ ಯಲಹಂಕ ವಾಯ್ಸ್ ಪತ್ರಿಕೆಯಲ್ಲಿ ನಿರಂತರವಾಗಿ ಅವಹೇಳಕಾರಿಯಾಗಿ ವರದಿ ಪ್ರಕಟಿಸಿದ ಹಿನ್ನೆಲೆಯಲ್ಲಿ ಅವರ ವಿರುದ್ಧವೂ ಹಕ್ಕುಚ್ಯುತಿ ಮಂಡಿಸಿದ್ದರು.
ಪತ್ರಿಕೆ ಸಂಪಾದಕರು ಸದನವನ್ನೇ ಅವಮಾನಿಸುವ ರೀತಿಯಲ್ಲಿ ವರದಿ ಗಳನ್ನು ಪ್ರಕಟಿಸುತ್ತಿದ್ದಾರೆ. ಈ ರೀತಿಯ ಪತ್ರಕರ್ತರಿಂದ ಇಡೀ ಪತ್ರಕರ್ತರ ಸಮುದಾಯಕ್ಕೆ ಕೆಟ್ಟ ಹೆಸರು ಬರುತ್ತದೆ. ಹೀಗಾಗಿ ಈ ರೀತಿಯ ಬ್ಲಾಕ್‌ ಮೇಲ್‌ ಮಾಡುವ ಪತ್ರಕರ್ತರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. 
2014ರ ಸೆಪ್ಟಂಬರ್ ತಿಂಗಳ ಹಾಯ್ ಬೆಂಗಳೂರು ಪತ್ರಿಕೆಯಲ್ಲಿ ಸ್ಪೀಕರ್ ಕೋಳಿವಾಡ ಸೇರಿದಂತೆ ಹಲವು ರಾಜಕಾರಣಿಗಳ ವಿರುದ್ಧ ಲೇಖನ ಪ್ರಕಟವಾಗಿತ್ತು.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಎಲ್ಲರ ಹುಬ್ಬೇರುವಂತೆ ಮಾಡಿದ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT