ಸಂತ್ರಸ್ತೆ ಲಿಷಾ 
ರಾಜ್ಯ

ಮಲ್ಲೇಶ್ವರಂ ಬಾಂಬ್ ಸ್ಫೋಟ ಸಂತ್ರಸ್ತೆ ಲಿಷಾಗೆ ಸರ್ಕಾರಿ ನೌಕರಿ

ಮಲ್ಲೇಶ್ವರಂ ಬಾಂಬ್‌ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ. ಲಿಷಾಗೆ ಸಿ ದರ್ಜೆ ನೌಕರಿ ನೀಡಲು ರಾಜ್ಯ ಸರ್ಕಾರ ..

ಬೆಂಗಳೂರು: ಮಲ್ಲೇಶ್ವರಂ ಬಾಂಬ್‌ ಸ್ಫೋಟದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಸಿ. ಲಿಷಾಗೆ ಸಿ ದರ್ಜೆ ನೌಕರಿ ನೀಡಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಮಲ್ಲೇಶ್ವರದ ಬಿಜೆಪಿ ಕಚೇರಿ ಬಳಿ ನಡೆದ ಬಾಂಬ್‌ಸ್ಫೋಟದಲ್ಲಿ ಲಿಷಾ ಕಾಲಿಗೆ ಗಂಭೀರ ಗಾಯವಾಗಿತ್ತು. ಉದ್ಯೋಗ ನೀಡುವಂತೆ ಹೈಕೋರ್ಟ್ ಆದೇಶ ನೀಡಿದ್ದರೂ ಸರ್ಕಾರ ಅದನ್ನು ಪಾಲಿಸಿಲ್ಲ ಎಂದು ಆಕ್ಷೇಪಿಸಿ ಲಿಷಾ ಅವರು ಇತ್ತೀಚೆಗಷ್ಟೇ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ನ್ಯಾಯಾಂಗ ನಿಂದನೆ ಮೊಕದ್ದಮೆ ದಾಖಲಿಸಿದ್ದರು.
ಲಿಷಾಗೆ 17 ವರ್ಷವಾಗಿದ್ದಾಗ ಏಪ್ರಿಲ್ 2013 ರಂದು ಬಾಂಬ್ ದಾಳಿ ನಡೆದಿತ್ತು. ಟ್ಯೂಷನ್ ಗೆ ತೆರಳಿ ವಾಪಸ್ ಬರುವಾಗ ನಡೆದ ದಾಳಿಯಲ್ಲಿ ಲಿಷಾ ಗಾಯಗೊಂಡಿದ್ದಳು.
ಇನ್ನೂ ಅಪಘಾತದಲ್ಲಿ ಮೃತಪಟ್ಟಿದ್ದ ಲೋಕಾಯುಕ್ತ ಎಸ್‌ಪಿ ರವಿಕುಮಾರ್‌ ಅವರ ಪತ್ನಿಗೆ ಅನುಕಂಪದ ಆಧಾರದಲ್ಲಿ ಉಪ ನೋಂದಣಾಧಿಕಾರಿ ಹುದ್ದೆ ನೀಡಲು ಸರ್ಕಾರ ನಿರ್ಧರಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನಾವು ಯಾರ ಮಾತು ಕೇಳಲ್ಲ: ಹಾರ್ಮುಜ್ ಮೂಲಕ ಭಾರತಕ್ಕೆ ಬರುತ್ತಿದ್ದ ಹಡಗು ಸೇರಿ 3 ಹಡಗುಗಳನ್ನು ವಶಕ್ಕೆ ಪಡೆದ ಇರಾನ್!

ಪಹಲ್ಗಾಮ್ ದಾಳಿ ಭಯಾನಕವಾಗಿತ್ತು, ನಾವು ಭಾರತದೊಂದಿಗೆ ನಿಲ್ಲುತ್ತೇವೆ: ಯುರೋಪಿಯನ್ ಒಕ್ಕೂಟ

ವೈಭವ್ ಸೂರ್ಯವಂಶಿಯಲ್ಲಿ ಬ್ರಿಯಾನ್ ಲಾರಾ ನೋಡಬಲ್ಲೆ, ಆದ್ರೆ...: ಆಸೀಸ್ ಮಾಜಿ ನಾಯಕ ಹೇಳಿದ್ದೇನು?

ಬೆಂಗಳೂರು: ಅಣ್ಣ ಅಣ್ಣ ಅಂತ ಕರಿಯುತ್ತಿದ್ದಳು; ಈಗ ಪ್ರೀತಿಸಿ ಮದುವೆಯಾಗಿದ್ದ ಗಂಡನಿಗೆ ಕೈಕೊಟ್ಟು ಸ್ನೇಹಿತನ ಜೊತೆ ಪತ್ನಿ ಎಸ್ಕೇಪ್!

ಹಾರ್ಮುಜ್ ಜಲಸಂಧಿಯಲ್ಲಿ ಮತ್ತೊಂದು ಹಡಗಿನ ಮೇಲೆ ಇರಾನ್ ಗುಂಡಿನ ದಾಳಿ; ಪರಿಸ್ಥಿತಿ ಮತ್ತಷ್ಟು ಉದ್ವಿಗ್ನ!

SCROLL FOR NEXT