ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಮಗಳ ಓದಿಗೆ ಫೀಸ್ ಕಟ್ಟಲಾಗದೆ ಮನನೊಂದ ತಂದೆ ಆತ್ಮಹತ್ಯೆ

ಮಗಳ ಕಾಲೇಜಿಗೆ ಫೀಸ್ ಕಟ್ಟಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಮೈಸೂರಿನಲ್ಲಿ ...

ಮೈಸೂರು: ಮಗಳ ಕಾಲೇಜಿಗೆ ಫೀಸ್ ಕಟ್ಟಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದೆ.
51 ವರ್ಷದ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡವರು. ಇವರು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿಯಾಗಿದ್ದು, ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ಪ್ರಸಾದ ತಯಾರಕರಾಗಿದ್ದರು. ಒಬ್ಬ ಮಗ ಹಾಗೂ ಮಗಳ ಜೊತೆ  ವಾಸವಿದ್ದರು.
ಮಗಳ ಓದಿಗಾಗಿ 12,500 ರೂ. ಕಾಲೇಜು ಫೀಸ್ ಕಟ್ಟಬೇಕಿತ್ತು. ಆದ್ರೆ ಹಣ ಹೊಂದಿಸಲು ಸಾಧ್ಯವಾಗದೆ ದೇವಸ್ಥಾನದ ಆವರಣದಲ್ಲಿನ ಮನೆಯಲ್ಲಿಯೇ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಇತ್ತೀಚೆಗಷ್ಟೇ ಗಂಗಾಧರ್ ಕೆಲಸಕ್ಕೆ ಸೇರಿದ್ದರು. ಹೀಗಾಗಿ ದೇವಾಸ್ಥಾನ ಆಡಳಿತ ಮಂಡಳಿಗೆ ಗಂಗಾಧರ್ ಸಮಸ್ಯೆಯ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ವಿನಾಯಕ ಮಂಡಳಿ ಸದಸ್ಯರು ಸ್ವಯಂ ಪ್ರೇರಿತರಾಗಿ ಹಣ ನೀಡಿ ಗಂಗಾಧರ್ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1.5 ಲಕ್ಷ ರು ಹಣ ನೀಡಲು ನಿರ್ಧರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT