ಸಾಂದರ್ಭಿಕ ಚಿತ್ರ 
ರಾಜ್ಯ

ಮೈಸೂರು: ಮಗಳ ಓದಿಗೆ ಫೀಸ್ ಕಟ್ಟಲಾಗದೆ ಮನನೊಂದ ತಂದೆ ಆತ್ಮಹತ್ಯೆ

ಮಗಳ ಕಾಲೇಜಿಗೆ ಫೀಸ್ ಕಟ್ಟಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಮೈಸೂರಿನಲ್ಲಿ ...

ಮೈಸೂರು: ಮಗಳ ಕಾಲೇಜಿಗೆ ಫೀಸ್ ಕಟ್ಟಲಾಗದೆ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದೆ.
51 ವರ್ಷದ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡವರು. ಇವರು ಮೈಸೂರಿನ ಬೃಂದಾವನ ಬಡಾವಣೆಯ ನಿವಾಸಿಯಾಗಿದ್ದು, ಬಡಾವಣೆಯ ಗಣಪತಿ ದೇವಸ್ಥಾನದಲ್ಲಿ ಪ್ರಸಾದ ತಯಾರಕರಾಗಿದ್ದರು. ಒಬ್ಬ ಮಗ ಹಾಗೂ ಮಗಳ ಜೊತೆ  ವಾಸವಿದ್ದರು.
ಮಗಳ ಓದಿಗಾಗಿ 12,500 ರೂ. ಕಾಲೇಜು ಫೀಸ್ ಕಟ್ಟಬೇಕಿತ್ತು. ಆದ್ರೆ ಹಣ ಹೊಂದಿಸಲು ಸಾಧ್ಯವಾಗದೆ ದೇವಸ್ಥಾನದ ಆವರಣದಲ್ಲಿನ ಮನೆಯಲ್ಲಿಯೇ ಗಂಗಾಧರ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 
ಇತ್ತೀಚೆಗಷ್ಟೇ ಗಂಗಾಧರ್ ಕೆಲಸಕ್ಕೆ ಸೇರಿದ್ದರು. ಹೀಗಾಗಿ ದೇವಾಸ್ಥಾನ ಆಡಳಿತ ಮಂಡಳಿಗೆ ಗಂಗಾಧರ್ ಸಮಸ್ಯೆಯ ಬಗ್ಗೆ ಮಾಹಿತಿ ಇರಲಿಲ್ಲ. ಹೀಗಾಗಿ ವಿನಾಯಕ ಮಂಡಳಿ ಸದಸ್ಯರು ಸ್ವಯಂ ಪ್ರೇರಿತರಾಗಿ ಹಣ ನೀಡಿ ಗಂಗಾಧರ್ ಅವರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ 1.5 ಲಕ್ಷ ರು ಹಣ ನೀಡಲು ನಿರ್ಧರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಗುಂಡಿನ ಚಕಮಕಿ: ಇಬ್ಬರು ಉಗ್ರರ ಹತ್ಯೆ

RSS Song Controversy: ಡಿಕೆಶಿ ಆರ್‌ಎಸ್‌ಎಸ್‌ ಗೀತೆ ಹಾಡಿದ್ದು ತಪ್ಪು, ಕ್ಷಮೆ ಕೇಳಿದ್ದರಿಂದ ಎಲ್ಲವೂ ಮುಗಿದಿದೆ; ಮಲ್ಲಿಕಾರ್ಜುನ ಖರ್ಗೆ

ವಾಲ್ಮೀಕಿ ನಿಗಮ ಹಗರಣ: ಜಾರಿ ನಿರ್ದೇಶನಾಲಯದಿಂದ 5 ಕೋಟಿ ಮೌಲ್ಯದ ಆಸ್ತಿ ಮುಟ್ಟುಗೋಲು !

SCROLL FOR NEXT