ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರು: ಅಪರಾಧ ಚಾಳಿಕೋರನ ಮೇಲೆ ಗುಂಡು ಹಾರಿಸಿದ ಪೊಲೀಸರು

ನಗರದ ಹೆಚ್ ಎಎಲ್ ಪ್ರದೇಶದಲ್ಲಿ ಪೊಲೀಸರ ಮೇಲೆ ದಾಳಿ ನಡೆಸಲು ಪ್ರಯತ್ನಿಸಿದ ಅಪರಾಧ ಚಾಳಿಕೋರನ ಮೇಲೆ...

ಬೆಂಗಳೂರು: ನಗರದ ಹೆಚ್ ಎಎಲ್ ಪ್ರದೇಶದಲ್ಲಿ  ಪೊಲೀಸರ ಮೇಲೆ ದಾಳಿ ನಡೆಸಲು ಪ್ರಯತ್ನಿಸಿದ ಅಪರಾಧ ಚಾಳಿಕೋರನ ಮೇಲೆ ಇಂದು ಪೊಲೀಸರು ಗುಂಡಿನ ದಾಳಿ ನಡೆಸಿದ ಘಟನೆ ನಡೆದಿದೆ.
ಸರ ಕದ್ದು ಓಡಿ ಹೋಗುವುದನ್ನು ಹಿಡಿಯಲೆತ್ನಿಸಿದ ವ್ಯಕ್ತಿಯನ್ನು ಸಾಯಿಸಲು ಈತ ಪ್ರಯತ್ನಿಸುತ್ತಿದ್ದ ವೇಳೆ ಬಂಧಿತನಾಗಿದ್ದ.
ಹೆಚ್ ಎಎಲ್ ನ ವಿಭೂತಿಪುರದ ನಿವಾಸಿ ಜಾನ್ಸನ್ ನನ್ನು ಪೊಲೀಸರು ನಿನ್ನೆ ಸರ ಕದ್ದು ಓಡಿಹೋಗುವಾಗ ದಾರಿಹೋಕ ಸಾಯಿ ಚರಣ್ ಎಂಬುವವರು ಆತನನ್ನು ತಡೆಯಲು ಯತ್ನಿಸಿದಾಗ ಜಾನ್ಸನ್ ಅವರ ಮೇಲೆ ದಾಳಿ ನಡೆಸಿದ್ದ.ತೀವ್ರ ಗಾಯಗೊಂಡಿದ್ದ ಚರಣ್ ಮೃತಪಟ್ಟಿದ್ದಾರೆ. 
ಇಂದು ಜಾನ್ಸನ್ ನನ್ನು ಅಪರಾಧ ನಡೆದ ಸ್ಥಳಕ್ಕೆ ಪೊಲೀಸರು ಪ್ರಾಥಮಿಕ ಮಾಹಿತಿ ಪಡೆಯಲು ಮತ್ತು ಸಾಕ್ಷಿಗಳನ್ನು ಸಂಗ್ರಹಿಸಲು ಕರೆದುಕೊಂಡು ಹೋಗಿದ್ದರು. ಈ ಸಂದರ್ಭದಲ್ಲಿ ಮೂತ್ರ ಬರುತ್ತದೆಂದು ನಟಿಸಿ ಆಚೆ ಹೋಗಲು ಪೊಲೀಸರ ಬಳಿ ಮನವಿ ಮಾಡಿದ. ಆತನನ್ನು ಬಿಡುಗಡೆ ಮಾಡಿದಾಗ ಕಾನ್ಸ್ಟೇಬಲ್ ಕಾಂತಾ ಅವರ ಮೇಲೆ ದಾಳಿ ಮಾಡಿದ. ಮತ್ತೊಬ್ಬ ಕಾನ್ಸ್ಟೇಬಲ್ ಮಂಜೇಶ್ ಮಧ್ಯ ಪ್ರವೇಶಿಸಲು ಯತ್ನಿಸಿದಾಗ ಅವರ ಮೇಲೆ ಕೂಡ ಜಾನ್ಸನ್ ದಾಳಿ ಮಾಡಿದ. ಆತನಿಗೆ ಶರಣಾಗುವಂತೆ ಮನವಿ ಮಾಡಿದರೂ ಕೇಳಲಿಲ್ಲ. ಆಗ ಪರಿಸ್ಥಿತಿಯ ಅಪಾಯ ಅರಿತು ಇನ್ಸ್ಪೆಕ್ಟರ್ ಸಾದಿಕ್ ಪಾಶಾ ಜಾನ್ಸನ್ ನ ಕಾಲಿಗೆ ಗುಂಡು ಹಾಕಿದರು. ಗಾಯಗೊಂಡ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೂರ್ವ ವಲಯದ ಹೆಚ್ಚುವರಿ ಪೊಲೀಸ್ ಆಯುಕ್ತ ಹೇಮಂತ್ ನಿಂಬಾಳ್ಕರ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇತರರ ಪ್ರಭಾವಕ್ಕೆ ಒಳಗಾಗಿ ಹಾಗೆ ಮಾತನಾಡಿದೆ, ಕ್ಷಮಿಸಿ': ದೆಹಲಿ ಪ್ರತಿಭಟನೆಯಲ್ಲಿ PM ಮೋದಿ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ ಬಾಲಕಿ-Video

'ನನ್ನ ಜೊತೆಗೆ ತಾಯಿಯನ್ನೂ ನಿಂದಿಸಿದರು, ಆದರೂ 'ನಮ್ಮ ದಾರಿತಪ್ಪಿದ ಮಕ್ಕಳನ್ನು' ಕ್ಷಮಿಸಬೇಕು: ಮತ್ತೊಂದು ವಿಡಿಯೊ ಹಂಚಿಕೊಂಡ PM ಮೋದಿ'-Video

'ದೇಶವನ್ನೇ ಕ್ಷಮಿಸಿದ ನರೇಂದ್ರ ಮೋದಿ: ಪ್ರಧಾನಿಯ ಹೊಸ ವಿಡಿಯೋ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ!

ಕೇರಳದಲ್ಲಿ ಭಾರಿ ಮಳೆಯಿಂದ ಭೂಕುಸಿತ; ಮೂವರು ಸಾವು! ಹಲವು ಜಿಲ್ಲೆಗಳಿಗೆ IMD 'ರೆಡ್ ಅಲರ್ಟ್' ಘೋಷಣೆ

ಮಂಡ್ಯ: ಕಾವೇರಿ ಹೋರಾಟಕ್ಕೆ ಸ್ಪಂದಿಸದೆ ರೈತರ ಕೆಂಗಣ್ಣಿಗೆ ಗುರಿಯಾದ ನಟಿ ರಾಗಿಣಿ ದ್ವಿವೇದಿ!