ಸಾಂದರ್ಭಿಕ ಚಿತ್ರ 
ರಾಜ್ಯ

ರೈತರ ಸಾಲ ಮನ್ನಾ ಸುತ್ತೊಲೆಯ ಪ್ರಮುಖ ಷರತ್ತುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರುಪಾಯಿ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ....

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರುಪಾಯಿ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಶನಿವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಒಟ್ಟು 14 ಷರತ್ತುಗಳನ್ನು ವಿಧಿಸಿದ್ದಾರೆ.
ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಂದು ಹೊರಡಿಸಿರುವ ಸುತ್ತೊಲೆಯಲ್ಲಿ, ಪಶುಭಾಗ್ಯ ಸಾಲ, ಕೃಷಿಯೇತರ ಸಾಲಗಳು, ಮಧ್ಯಮಾವಧಿ, ದೀರ್ಘಾವಧಿ ಸಾಲ ಪಡೆದಿರುವವರ ಸಾಲ ಮನ್ನಾ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸುತ್ತೊಲೆಯ ಪ್ರಮುಖ ಷರತ್ತುಗಳು
  • ೫೦ಸಾವಿರಕ್ಕಿಂತ ಹೆಚ್ಚು ಅಲ್ಪಾವಧಿ ಸಾಲ ಪಡೆದವರು ೨೦೧೮, ಜೂನ್ ಒಳಗೆ ಅಸಲು ಪಾವತಿಸಿದ್ರೇ ಮಾತ್ರ ೫೦ ಸಾವಿರ ಸಾಲ ಮನ್ನಾ
  • ಅಲ್ಪಾವಧಿಯ ಸಾಲದಲ್ಲಿ ಸುಸ್ತಿ ಬಾಕಿ ಹೊಂದಿರುವ ರೈತರು ಡಿಸೆಂಬರ್ ೩೧, ೨೦೧೭ರೊಳಗಾಗಿ ಮರುಪಾವತಿ ಮಾಡಿದ್ರೆ ಮಾತ್ರ ೫೦ ಸಾಲ ಮನ್ನಾ, ಅಸಲು ಮತ್ತು ಬಡ್ಡಿ ಸೇರಿ ಸಾಲ ಮನ್ನಾ
  • ಸಾಲಮನ್ನಾ ದಿನಾಂಕದ ಗಡುವಿನ ಬಳಿಕವಷ್ಟೇ ಸಾಲಮನ್ನಾ ಸೌಲಭ್ಯ ಪಡೆದವರಿಗೆ ಮತ್ತೆ ಸಾಲ ಕೊಡುವುದು
  • ರೈತನೊಬ್ಬ ಒಂದಕ್ಕಿಂತ ಹೆಚ್ಚು ಸಹಕಾರಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ರೆ ಒಂದೇ ಬ್ಯಾಂಕಿನಲ್ಲಿ ಮಾತ್ರ ಸಾಲ ಮನ್ನಾ ಸೌಲಭ್ಯ
  • ಸಾಲ ಪಡೆದ ರೈತ ಮೃತಪಟ್ಟಿದ್ದಲ್ಲಿ ಸಂಬಂಧಪಟ್ಟ ವಾರಸುದಾರರು ಸಾಲ ಕಟ್ಟಿದ್ರೆ ಮಾತ್ರ ಸಾಲ ಮನ್ನಾ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

ಕನ್ನಡ ಸಿನಿಮಾ ನಿರ್ದೇಶಕನ ಅಪಹರಿಸಿ, ಹಲ್ಲೆ: ನಟಿ ಸೇರಿದಂತೆ 11 ಜನರ ಬಂಧನ

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

ಉರ್ದು ಭಾಷೆಯಲ್ಲಿ ಸರ್ಕಾರದ ಜಾಹೀರಾತು: ಸಿಎಂ ಸಿದ್ದರಾಮಯ್ಯ ಸಮರ್ಥನೆ ಹೇಗಿದೆ ಗೊತ್ತಾ?

SCROLL FOR NEXT