ಸಾಂದರ್ಭಿಕ ಚಿತ್ರ 
ರಾಜ್ಯ

ರೈತರ ಸಾಲ ಮನ್ನಾ ಸುತ್ತೊಲೆಯ ಪ್ರಮುಖ ಷರತ್ತುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರುಪಾಯಿ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ....

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರುಪಾಯಿ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಶನಿವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಒಟ್ಟು 14 ಷರತ್ತುಗಳನ್ನು ವಿಧಿಸಿದ್ದಾರೆ.
ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಂದು ಹೊರಡಿಸಿರುವ ಸುತ್ತೊಲೆಯಲ್ಲಿ, ಪಶುಭಾಗ್ಯ ಸಾಲ, ಕೃಷಿಯೇತರ ಸಾಲಗಳು, ಮಧ್ಯಮಾವಧಿ, ದೀರ್ಘಾವಧಿ ಸಾಲ ಪಡೆದಿರುವವರ ಸಾಲ ಮನ್ನಾ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸುತ್ತೊಲೆಯ ಪ್ರಮುಖ ಷರತ್ತುಗಳು
  • ೫೦ಸಾವಿರಕ್ಕಿಂತ ಹೆಚ್ಚು ಅಲ್ಪಾವಧಿ ಸಾಲ ಪಡೆದವರು ೨೦೧೮, ಜೂನ್ ಒಳಗೆ ಅಸಲು ಪಾವತಿಸಿದ್ರೇ ಮಾತ್ರ ೫೦ ಸಾವಿರ ಸಾಲ ಮನ್ನಾ
  • ಅಲ್ಪಾವಧಿಯ ಸಾಲದಲ್ಲಿ ಸುಸ್ತಿ ಬಾಕಿ ಹೊಂದಿರುವ ರೈತರು ಡಿಸೆಂಬರ್ ೩೧, ೨೦೧೭ರೊಳಗಾಗಿ ಮರುಪಾವತಿ ಮಾಡಿದ್ರೆ ಮಾತ್ರ ೫೦ ಸಾಲ ಮನ್ನಾ, ಅಸಲು ಮತ್ತು ಬಡ್ಡಿ ಸೇರಿ ಸಾಲ ಮನ್ನಾ
  • ಸಾಲಮನ್ನಾ ದಿನಾಂಕದ ಗಡುವಿನ ಬಳಿಕವಷ್ಟೇ ಸಾಲಮನ್ನಾ ಸೌಲಭ್ಯ ಪಡೆದವರಿಗೆ ಮತ್ತೆ ಸಾಲ ಕೊಡುವುದು
  • ರೈತನೊಬ್ಬ ಒಂದಕ್ಕಿಂತ ಹೆಚ್ಚು ಸಹಕಾರಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ರೆ ಒಂದೇ ಬ್ಯಾಂಕಿನಲ್ಲಿ ಮಾತ್ರ ಸಾಲ ಮನ್ನಾ ಸೌಲಭ್ಯ
  • ಸಾಲ ಪಡೆದ ರೈತ ಮೃತಪಟ್ಟಿದ್ದಲ್ಲಿ ಸಂಬಂಧಪಟ್ಟ ವಾರಸುದಾರರು ಸಾಲ ಕಟ್ಟಿದ್ರೆ ಮಾತ್ರ ಸಾಲ ಮನ್ನಾ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT