ಸಾಂದರ್ಭಿಕ ಚಿತ್ರ 
ರಾಜ್ಯ

ರೈತರ ಸಾಲ ಮನ್ನಾ ಸುತ್ತೊಲೆಯ ಪ್ರಮುಖ ಷರತ್ತುಗಳು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರುಪಾಯಿ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ....

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರುಪಾಯಿ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಶನಿವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಒಟ್ಟು 14 ಷರತ್ತುಗಳನ್ನು ವಿಧಿಸಿದ್ದಾರೆ.
ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಂದು ಹೊರಡಿಸಿರುವ ಸುತ್ತೊಲೆಯಲ್ಲಿ, ಪಶುಭಾಗ್ಯ ಸಾಲ, ಕೃಷಿಯೇತರ ಸಾಲಗಳು, ಮಧ್ಯಮಾವಧಿ, ದೀರ್ಘಾವಧಿ ಸಾಲ ಪಡೆದಿರುವವರ ಸಾಲ ಮನ್ನಾ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸುತ್ತೊಲೆಯ ಪ್ರಮುಖ ಷರತ್ತುಗಳು
  • ೫೦ಸಾವಿರಕ್ಕಿಂತ ಹೆಚ್ಚು ಅಲ್ಪಾವಧಿ ಸಾಲ ಪಡೆದವರು ೨೦೧೮, ಜೂನ್ ಒಳಗೆ ಅಸಲು ಪಾವತಿಸಿದ್ರೇ ಮಾತ್ರ ೫೦ ಸಾವಿರ ಸಾಲ ಮನ್ನಾ
  • ಅಲ್ಪಾವಧಿಯ ಸಾಲದಲ್ಲಿ ಸುಸ್ತಿ ಬಾಕಿ ಹೊಂದಿರುವ ರೈತರು ಡಿಸೆಂಬರ್ ೩೧, ೨೦೧೭ರೊಳಗಾಗಿ ಮರುಪಾವತಿ ಮಾಡಿದ್ರೆ ಮಾತ್ರ ೫೦ ಸಾಲ ಮನ್ನಾ, ಅಸಲು ಮತ್ತು ಬಡ್ಡಿ ಸೇರಿ ಸಾಲ ಮನ್ನಾ
  • ಸಾಲಮನ್ನಾ ದಿನಾಂಕದ ಗಡುವಿನ ಬಳಿಕವಷ್ಟೇ ಸಾಲಮನ್ನಾ ಸೌಲಭ್ಯ ಪಡೆದವರಿಗೆ ಮತ್ತೆ ಸಾಲ ಕೊಡುವುದು
  • ರೈತನೊಬ್ಬ ಒಂದಕ್ಕಿಂತ ಹೆಚ್ಚು ಸಹಕಾರಿ ಬ್ಯಾಂಕುಗಳಲ್ಲಿ ಸಾಲ ಪಡೆದಿದ್ರೆ ಒಂದೇ ಬ್ಯಾಂಕಿನಲ್ಲಿ ಮಾತ್ರ ಸಾಲ ಮನ್ನಾ ಸೌಲಭ್ಯ
  • ಸಾಲ ಪಡೆದ ರೈತ ಮೃತಪಟ್ಟಿದ್ದಲ್ಲಿ ಸಂಬಂಧಪಟ್ಟ ವಾರಸುದಾರರು ಸಾಲ ಕಟ್ಟಿದ್ರೆ ಮಾತ್ರ ಸಾಲ ಮನ್ನಾ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!