ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ರೈತರ ಸಹಕಾರಿ ಬ್ಯಾಂಕ್ ಗಳಲ್ಲಿನ 50 ಸಾವಿರ ರುಪಾಯಿ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಶನಿವಾರ ಅಧಿಕೃತ ಆದೇಶ ಹೊರಡಿಸಿದ್ದು, ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ಒಟ್ಟು 14 ಷರತ್ತುಗಳನ್ನು ವಿಧಿಸಿದ್ದಾರೆ.
ರೈತರ ಸಾಲ ಮನ್ನಾಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಇಂದು ಹೊರಡಿಸಿರುವ ಸುತ್ತೊಲೆಯಲ್ಲಿ, ಪಶುಭಾಗ್ಯ ಸಾಲ, ಕೃಷಿಯೇತರ ಸಾಲಗಳು, ಮಧ್ಯಮಾವಧಿ, ದೀರ್ಘಾವಧಿ ಸಾಲ ಪಡೆದಿರುವವರ ಸಾಲ ಮನ್ನಾ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.
ಸುತ್ತೊಲೆಯ ಪ್ರಮುಖ ಷರತ್ತುಗಳು