ಬೆಳಗಾವಿ ಪಾಲಿಕೆ 
ರಾಜ್ಯ

ಬೆಳಗಾವಿ ಪಾಲಿಕೆಯಲ್ಲಿ ಮೊಳಗಿದ ನಾಡಗೀತೆ; ಎದ್ದುನಿಂತು ಗೌರವ ತೋರಿದ ಎಂಇಎಸ್!

ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಮೊಟ್ಟ ಮೊದಲ ಬಾರಿಗೆ ನಾಡಗೀತೆ ಮೊಳಗಿದ್ದು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಂಬಲಿತ ಸದಸ್ಯರು...

ಬೆಳಗಾವಿ: ಬೆಳಗಾವಿ ಮಹಾನಗರ ಪಾಲಿಕೆಯ ಸಭೆಯಲ್ಲಿ ಮೊಟ್ಟ ಮೊದಲ ಬಾರಿಗೆ ನಾಡಗೀತೆ ಮೊಳಗಿದ್ದು ಮಹಾರಾಷ್ಟ್ರ ಏಕೀಕರಣ ಸಮಿತಿ(ಎಂಇಎಸ್) ಬೆಂಬಲಿತ ಸದಸ್ಯರು ಯಾವುದೇ ತಕರಾರು ಮಾಡದೇ ಎದ್ದು ನಿಂತು ಗೌರವ ಸಲ್ಲಿಸಿದರು. 
ವಿವಿಧ ಸ್ಥಾಯಿ ಸಮಿತಿಗಳ ಸದಸ್ಯರ ಚುನಾವಣೆಯು ಇಂದಿಗೆ ನಿಗದಿಯಾಗಿತ್ತು. ಚುನಾವಣೆ ಪ್ರಕ್ರಿಯೆ ಆರಂಭಗೊಳ್ಳುವ ಮೊದಲು ಪ್ರಾದೇಶಿಕ ಆಯುಕ್ತ ಎನ್ ಜಯರಾಮ್ ಮಾತನಾಡಿ ಸರ್ಕಾರದ ಯಾವುದೇ ಕಾರ್ಯಕ್ರಮ ಪ್ರಾರಂಭಿಸುವಾಗ ನಾಡಗೀತೆ ಹಾಗೂ ಮುಕ್ತಾಯದ ವೇಳೆ ರಾಷ್ಟ್ರಗೀತೆ ನುಡಿಬೇಕು. ಈಗ ನಾಡಗೀತೆ ನುಡಿಸಲಾಗುವುದು ಎಲ್ಲರೂ ಎದ್ದುನಿಂತು ಗೌರವ ಸಲ್ಲಿಸಬೇಕು ಎಂದು ಸೂಚಿಸಿದರು.
ನಾಡಗೀತೆ ಆರಂಭಗೊಳ್ಳುತ್ತಿದ್ದಂತೆ ಎಂಇಎಸ್ ಬೆಂಬಲಿತ ಮೇಯರ್ ಸಂಜೋತಾ ಬಾಂದೇಕರ್, ಶಾಸಕ ಸಂಭಾಜಿ ಪಾಟೀಲ ಸೇರಿದಂತೆ ಇತರ ಎಲ್ಲ ಸದಸ್ಯರು ಹಾಗೂ ಅಧಿಕಾರಿಗಳು ಎದ್ದುನಿಂತು ಗೌರವ ನೀಡಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಚರ್ಚೆಗೆ ಕೇಂದ್ರ ಸಿದ್ಧ, 'ಯಾವುದೇ ಷರತ್ತು ಹಾಕಬೇಡಿ' ಎಂದ ಸಚಿವ ರಿಜಿಜು; ಪ್ರತಿಪಕ್ಷಗಳ ಸಭಾತ್ಯಾಗ!

ಪ್ರವಾಹ ಪೀಡಿತ ಶ್ರೀಲಂಕಾಕ್ಕೆ ಅವಧಿ ಮೀರಿದ ಪರಿಹಾರ ಪ್ಯಾಕೇಜ್ ಕಳುಹಿಸಿ ನಗೆಪಾಟಲಿಗೀಡಾದ Pakistan!

ಗಂಭೀರ್- ಕೊಹ್ಲಿ ನಡುವೆ ಬಿರುಕು: ವದಂತಿಗೆ ಪುಷ್ಠಿ ನೀಡುವಂತೆ Video ವೈರಲ್! ಏನಿದು?

ಬೆಂಗಳೂರು ವಿಮಾನ ನಿಲ್ದಾಣದ ಪಿಕಪ್, ಡ್ರಾಪ್ ಪ್ರದೇಶದಲ್ಲಿ ಹೆಚ್ಚು ಟೈಮ್ ನಿಲ್ಲಿಸುವ ವಾಹನಗಳಿಗೆ ದುಬಾರಿ ಶುಲ್ಕ!

ಏಪ್ರಿಲ್ 2026 ಮತ್ತು ಫೆಬ್ರವರಿ 2027 ರಲ್ಲಿ ಎರಡು ಹಂತಗಳಲ್ಲಿ ಜನಗಣತಿ: ಲೋಕಸಭೆಗೆ ಕೇಂದ್ರ ಮಾಹಿತಿ

SCROLL FOR NEXT