ಡಾ.ಪಾವಗಡ ಪ್ರಕಾಶ್ ರಾವ್-ಸತ್ಯದರ್ಶನ-ಸಹಸ್ರದರ್ಶನ ಸಹಸ್ರಾಭಿನಂದನೆ 
ರಾಜ್ಯ

ಸಾವಿರಕ್ಕೂ ಹೆಚ್ಚಿನ ಸಂಚಿಕೆಗಳ ಸತ್ಯದರ್ಶನ: ಜೂ.27 ರಂದು ಸತ್ಯದರ್ಶನ-ಸಹಸ್ರದರ್ಶನ ಸಹಸ್ರಾಭಿನಂದನೆ ಕಾರ್ಯಕ್ರಮ

2003 ರಿಂದ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಿದ್ವಾನ್ ಡಾ.ಪಾವಗಡ ಪ್ರಕಾಶ್ ರಾವ್ ಅವರ ನಡೆಸಿಕೊಡುತ್ತಿದ್ದ 'ಸತ್ಯದರ್ಶನ' ಕಾರ್ಯಕ್ರಮ ಸಾವಿರ ಸಂಚಿಕೆಗಳ ನಂತರ ಅಂತ್ಯಗೊಳ್ಳುತ್ತಿದ್ದು...

ಬೆಂಗಳೂರು: 2003 ರಿಂದ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಿದ್ವಾನ್ ಡಾ.ಪಾವಗಡ ಪ್ರಕಾಶ್ ರಾವ್ ಅವರು ನಡೆಸಿಕೊಡುತ್ತಿದ್ದ 'ಸತ್ಯದರ್ಶನ' ಕಾರ್ಯಕ್ರಮ ಸಾವಿರದ ನೂರ ಹನ್ನೋಂದು (1,111) ಸಂಚಿಕೆಗಳ ನಂತರ ಅಂತ್ಯಗೊಂಡಿದ್ದು ಸತ್ಯದರ್ಶನ-ಸಹಸ್ರದರ್ಶನ ಸಹಸ್ರಾಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 
ಡಾ.ಪಾವಗಡ ಪ್ರಕಾಶ್ ರಾವ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಜೂ.27 ರಂದು ಮಂಗಳವಾರ ಸಂಜೆ 6:00 ರಿಂದ ರಾತ್ರಿ 8:00 ವರೆಗೆ  ಕುಮಾರಸ್ವಾಮಿ ಲೇಔಟ್ ನಲ್ಲಿರುವ ದಯಾನಂದ ಸಾಗರ್ ಕಾಲೇಜ್ ನ ಡಾ.ಪ್ರೇಮಚಂದ್ರ ಸಾಗರ ಆಡಿಟೋರಿಯಂ ನಲ್ಲಿ ಸತ್ಯದರ್ಶನ-ಸಹಸ್ರದರ್ಶನ ಸಹಸ್ರಾಭಿನಂದನೆ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ ಸತ್ಯದರ್ಶನದ ವಿಶೇಶ ಕಾರ್ಯಕ್ರಮ ಇರಲಿದ್ದು, ಈ ಮೂಲಕ ಜನಪ್ರಿಯ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ. 
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಎಂ.ಎನ್ ವೆಂಕಟಾಚಲಯ್ಯ, ರಂಗಭೂಮಿ ಕಲಾವಿದರಾಗಿರುವ ಮಾಸ್ಟರ್ ಹಿರಣ್ಣಯ್ಯ , ಹಿರಿಯ ಚಲನಚಿತ್ರ ಕಲಾವಿದರಾದ ಶಿವರಾಂ, ಚಲನಚಿತ್ರ ನಿರ್ದೇಶಕರು ಹಾಗೂ ರಂಗಭೂಮಿ ಕಲಾವಿದರಾದ ಚಿಂದೋಡಿ ಬಂಗಾರೇಶ್, ಹಿರಿಯ ಪತ್ರಕರ್ತರಾದ ಡಾ.ಬಾಬು ಕೃಷ್ಣಮೂರ್ತಿ, ಸರ್ ಎಂ ವಿಶ್ವೇಶ್ವರಯ್ಯ ಕೋ. ಬ್ಯಾಂಕ್ ನ ಅಧ್ಯಕ್ಷರಾದ ಕೆ.ಎನ್ ವೆಂಕಟನಾರಾಯಣ್, ಯೋಗ ಗುರುಗಳಾದ ಉಮಾಮಹೇಶ್ವರ್, ದಯಾನಂದ ಸಾಗರ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಹೇಮಚಂದ್ರ ಸಾಗರ್ ಸೇರಿದಂತೆ ಅನೇಕ ಗಣ್ಯರು ಅತಿಥಿಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ. 
ಕನ್ನಡಪ್ರಭ.ಕಾಂ ನ 'ರಾಮಾಯಣ ಅವಲೋಕನ' ಅಂಕಣಕಾರರೂ ಆಗಿರುವ ಡಾ.ಪಾವಗಡ ಪ್ರಕಾಶ್ ರಾವ್ ಅವರು ನಡೆಸಿಕೊಡುತ್ತಿದ್ದ 'ಸತ್ಯದರ್ಶನ' ಕಾರ್ಯಕ್ರಮ  ಧರ್ಮ, ಧರ್ಮ ಗ್ರಂಥ, ಆಚರಣೆಗಳಿಗೆ ಸಂಬಂಧಿಸಿದಂತೆ ಜನರ ಸಂಶಯಗಳ ನಿವಾರಣೆಗೆ, ಅಪಾರ ಜನಪ್ರಿಯತೆ ಗಳಿಸಿದ್ದ, ಜಿಜ್ಞಾಸುಗಳ ನೆಚ್ಚಿನ ಕಾರ್ಯಕ್ರಮವಾಗಿದೆ.  

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT