ಡಾ.ಪಾವಗಡ ಪ್ರಕಾಶ್ ರಾವ್-ಸತ್ಯದರ್ಶನ-ಸಹಸ್ರದರ್ಶನ ಸಹಸ್ರಾಭಿನಂದನೆ 
ರಾಜ್ಯ

ಸಾವಿರಕ್ಕೂ ಹೆಚ್ಚಿನ ಸಂಚಿಕೆಗಳ ಸತ್ಯದರ್ಶನ: ಜೂ.27 ರಂದು ಸತ್ಯದರ್ಶನ-ಸಹಸ್ರದರ್ಶನ ಸಹಸ್ರಾಭಿನಂದನೆ ಕಾರ್ಯಕ್ರಮ

2003 ರಿಂದ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಿದ್ವಾನ್ ಡಾ.ಪಾವಗಡ ಪ್ರಕಾಶ್ ರಾವ್ ಅವರ ನಡೆಸಿಕೊಡುತ್ತಿದ್ದ 'ಸತ್ಯದರ್ಶನ' ಕಾರ್ಯಕ್ರಮ ಸಾವಿರ ಸಂಚಿಕೆಗಳ ನಂತರ ಅಂತ್ಯಗೊಳ್ಳುತ್ತಿದ್ದು...

ಬೆಂಗಳೂರು: 2003 ರಿಂದ ಚಂದನ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ವಿದ್ವಾನ್ ಡಾ.ಪಾವಗಡ ಪ್ರಕಾಶ್ ರಾವ್ ಅವರು ನಡೆಸಿಕೊಡುತ್ತಿದ್ದ 'ಸತ್ಯದರ್ಶನ' ಕಾರ್ಯಕ್ರಮ ಸಾವಿರದ ನೂರ ಹನ್ನೋಂದು (1,111) ಸಂಚಿಕೆಗಳ ನಂತರ ಅಂತ್ಯಗೊಂಡಿದ್ದು ಸತ್ಯದರ್ಶನ-ಸಹಸ್ರದರ್ಶನ ಸಹಸ್ರಾಭಿನಂದನೆ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. 
ಡಾ.ಪಾವಗಡ ಪ್ರಕಾಶ್ ರಾವ್ ಅವರಿಗೆ ಗೌರವ ಸಲ್ಲಿಸುವುದಕ್ಕಾಗಿ ಜೂ.27 ರಂದು ಮಂಗಳವಾರ ಸಂಜೆ 6:00 ರಿಂದ ರಾತ್ರಿ 8:00 ವರೆಗೆ  ಕುಮಾರಸ್ವಾಮಿ ಲೇಔಟ್ ನಲ್ಲಿರುವ ದಯಾನಂದ ಸಾಗರ್ ಕಾಲೇಜ್ ನ ಡಾ.ಪ್ರೇಮಚಂದ್ರ ಸಾಗರ ಆಡಿಟೋರಿಯಂ ನಲ್ಲಿ ಸತ್ಯದರ್ಶನ-ಸಹಸ್ರದರ್ಶನ ಸಹಸ್ರಾಭಿನಂದನೆ ಕಾರ್ಯಕ್ರಮ ನಡೆಯಲಿದೆ. ಅಂದು ಸಂಜೆ ಸತ್ಯದರ್ಶನದ ವಿಶೇಶ ಕಾರ್ಯಕ್ರಮ ಇರಲಿದ್ದು, ಈ ಮೂಲಕ ಜನಪ್ರಿಯ ಕಾರ್ಯಕ್ರಮ ಮುಕ್ತಾಯಗೊಳ್ಳಲಿದೆ. 
ಸರ್ವೋಚ್ಛ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಎಂ.ಎನ್ ವೆಂಕಟಾಚಲಯ್ಯ, ರಂಗಭೂಮಿ ಕಲಾವಿದರಾಗಿರುವ ಮಾಸ್ಟರ್ ಹಿರಣ್ಣಯ್ಯ , ಹಿರಿಯ ಚಲನಚಿತ್ರ ಕಲಾವಿದರಾದ ಶಿವರಾಂ, ಚಲನಚಿತ್ರ ನಿರ್ದೇಶಕರು ಹಾಗೂ ರಂಗಭೂಮಿ ಕಲಾವಿದರಾದ ಚಿಂದೋಡಿ ಬಂಗಾರೇಶ್, ಹಿರಿಯ ಪತ್ರಕರ್ತರಾದ ಡಾ.ಬಾಬು ಕೃಷ್ಣಮೂರ್ತಿ, ಸರ್ ಎಂ ವಿಶ್ವೇಶ್ವರಯ್ಯ ಕೋ. ಬ್ಯಾಂಕ್ ನ ಅಧ್ಯಕ್ಷರಾದ ಕೆ.ಎನ್ ವೆಂಕಟನಾರಾಯಣ್, ಯೋಗ ಗುರುಗಳಾದ ಉಮಾಮಹೇಶ್ವರ್, ದಯಾನಂದ ಸಾಗರ್ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ.ಹೇಮಚಂದ್ರ ಸಾಗರ್ ಸೇರಿದಂತೆ ಅನೇಕ ಗಣ್ಯರು ಅತಿಥಿಗಳು ಕಾರ್ಯಕ್ರಮದಲ್ಲಿ ಇರಲಿದ್ದಾರೆ. 
ಕನ್ನಡಪ್ರಭ.ಕಾಂ ನ 'ರಾಮಾಯಣ ಅವಲೋಕನ' ಅಂಕಣಕಾರರೂ ಆಗಿರುವ ಡಾ.ಪಾವಗಡ ಪ್ರಕಾಶ್ ರಾವ್ ಅವರು ನಡೆಸಿಕೊಡುತ್ತಿದ್ದ 'ಸತ್ಯದರ್ಶನ' ಕಾರ್ಯಕ್ರಮ  ಧರ್ಮ, ಧರ್ಮ ಗ್ರಂಥ, ಆಚರಣೆಗಳಿಗೆ ಸಂಬಂಧಿಸಿದಂತೆ ಜನರ ಸಂಶಯಗಳ ನಿವಾರಣೆಗೆ, ಅಪಾರ ಜನಪ್ರಿಯತೆ ಗಳಿಸಿದ್ದ, ಜಿಜ್ಞಾಸುಗಳ ನೆಚ್ಚಿನ ಕಾರ್ಯಕ್ರಮವಾಗಿದೆ.  

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಡಿಕೆಶಿ RSS ಗೀತೆ ಹೇಳಿದ್ದೂ ರಾಹುಲ್‌ ಗಾಂಧಿಗೆ ತಲುಪಲಿ: ಶಾಕ್ ಕೊಟ್ಟ ಸತೀಶ್‌ ಜಾರಕಿಹೊಳಿ ಹೇಳಿಕೆ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

SCROLL FOR NEXT