ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಈದ್ ದಿನಾಂಕದ ಬಗ್ಗೆ ಗೊಂದಲ- ಎರಡು ಗುಂಪುಗಳ ನಡುವೆ ಘರ್ಷಣೆ

ಈದ್ ದಿನಾಂಕದ ಬಗ್ಗೆ ಉಂಟಾದ ಗೊಂದಲದಿಂದಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಮಂಗಳೂರಿನ ಉಲ್ಲಾಳ ದರ್ಗಾದಲ್ಲಿ...

ಮಂಗಳೂರು: ಈದ್ ದಿನಾಂಕದ ಬಗ್ಗೆ ಉಂಟಾದ ಗೊಂದಲದಿಂದಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಮಂಗಳೂರಿನ ಉಲ್ಲಾಳ ದರ್ಗಾದಲ್ಲಿ ನಡೆದಿದೆ.
ಉಳ್ಳಾಲದ ನಾಲ್ಕು ಮಸೀದಿಗಳ ವ್ಯಾಪ್ತಿಯಲ್ಲಿ ಈದ್‌ ಉಲ್‌ ಫಿತ್ರ್‌ ಆಚರಣೆ ವಿಚಾರದಲ್ಲಿ ಗೊಂದಲ ಉಂಟಾಯಿತು. ಉಳ್ಳಾಲ ಖಾಜಿ  ಸೂಚನೆಯಂತೆ  ಕೆಲ ಮುಸ್ಲಿ ಮರು ಭಾನುವಾರವೂ ಉಪವಾಸ ವ್ರತ ಕೈಗೊಂಡರು. 
ಭಟ್ಕಳದಲ್ಲಿ ಶನಿವಾರ ಚಂದ್ರ ಕಾಣಿಸಿಕೊಂಡಿತ್ತು. ಹೀಗಾಗಿ  ಕಾಜಿಗಳು ಭಾನುವಾರ ರಂಜಾನ್ ಆಚರಿಸಿದರು.  ಆದರೆ ಉಲ್ಲಾಳ ದರ್ಗಾ ಸಮಿತಿ ಸೋಮವಾರ  ಈದ್ ಆಚರಿಸಲು ನಿರ್ಧರಿಸಿ ಉಲ್ಲಾಳ ದರ್ಗಾಗೆ ಬೀಗ ಹಾಕಲಾಗಿತ್ತು.
ಎಸ್ ಎಸ್ ಎಫ್ ಹಿಂಬಾಲಕರು ದರ್ಗಾಗೆ ನುಗ್ಗಿ ಮೊಹಮದ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆ ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಸ್ಥಳಕ್ಕೆ ಬಂದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೆ.ಎಂ ಶಾಂತರಾಜು, ಪರಿಸ್ಥಿತಿ ನಿಯಂತ್ರಣಕ್ಕೆ ತಂದು ದರ್ಗಾದಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟರು. ಬಂಟ್ವಾಳ ತಾಲ್ಲೂಕಿನಲ್ಲಿ ಕೆಲವು ದಿನಗಳಿಂದ ಅಹಿತಕರ ಘಟನೆಗಳು ನಡೆ ಯುತ್ತಿರುವ ಕಾರಣದಿಂದ ಜಿಲ್ಲೆಯಾ ದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT