ಸಾಂದರ್ಭಿಕ ಚಿತ್ರ 
ರಾಜ್ಯ

ಮಂಗಳೂರು: ಈದ್ ದಿನಾಂಕದ ಬಗ್ಗೆ ಗೊಂದಲ- ಎರಡು ಗುಂಪುಗಳ ನಡುವೆ ಘರ್ಷಣೆ

ಈದ್ ದಿನಾಂಕದ ಬಗ್ಗೆ ಉಂಟಾದ ಗೊಂದಲದಿಂದಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಮಂಗಳೂರಿನ ಉಲ್ಲಾಳ ದರ್ಗಾದಲ್ಲಿ...

ಮಂಗಳೂರು: ಈದ್ ದಿನಾಂಕದ ಬಗ್ಗೆ ಉಂಟಾದ ಗೊಂದಲದಿಂದಾಗಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದಿರುವ ಘಟನೆ ಮಂಗಳೂರಿನ ಉಲ್ಲಾಳ ದರ್ಗಾದಲ್ಲಿ ನಡೆದಿದೆ.
ಉಳ್ಳಾಲದ ನಾಲ್ಕು ಮಸೀದಿಗಳ ವ್ಯಾಪ್ತಿಯಲ್ಲಿ ಈದ್‌ ಉಲ್‌ ಫಿತ್ರ್‌ ಆಚರಣೆ ವಿಚಾರದಲ್ಲಿ ಗೊಂದಲ ಉಂಟಾಯಿತು. ಉಳ್ಳಾಲ ಖಾಜಿ  ಸೂಚನೆಯಂತೆ  ಕೆಲ ಮುಸ್ಲಿ ಮರು ಭಾನುವಾರವೂ ಉಪವಾಸ ವ್ರತ ಕೈಗೊಂಡರು. 
ಭಟ್ಕಳದಲ್ಲಿ ಶನಿವಾರ ಚಂದ್ರ ಕಾಣಿಸಿಕೊಂಡಿತ್ತು. ಹೀಗಾಗಿ  ಕಾಜಿಗಳು ಭಾನುವಾರ ರಂಜಾನ್ ಆಚರಿಸಿದರು.  ಆದರೆ ಉಲ್ಲಾಳ ದರ್ಗಾ ಸಮಿತಿ ಸೋಮವಾರ  ಈದ್ ಆಚರಿಸಲು ನಿರ್ಧರಿಸಿ ಉಲ್ಲಾಳ ದರ್ಗಾಗೆ ಬೀಗ ಹಾಕಲಾಗಿತ್ತು.
ಎಸ್ ಎಸ್ ಎಫ್ ಹಿಂಬಾಲಕರು ದರ್ಗಾಗೆ ನುಗ್ಗಿ ಮೊಹಮದ್ ಎಂಬಾತನ ಮೇಲೆ ಹಲ್ಲೆ ಮಾಡಿದ್ದಾರೆ. ಈ ಘಟನೆ ಎರಡು ಗುಂಪುಗಳ ನಡುವೆ ಘರ್ಷಣೆಗೆ ಕಾರಣವಾಗಿತ್ತು. ಸ್ಥಳಕ್ಕೆ ಬಂದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಡಿಸಿಪಿ ಕೆ.ಎಂ ಶಾಂತರಾಜು, ಪರಿಸ್ಥಿತಿ ನಿಯಂತ್ರಣಕ್ಕೆ ತಂದು ದರ್ಗಾದಲ್ಲಿ ಪ್ರಾರ್ಥನೆ ಮಾಡಲು ಅವಕಾಶ ಕಲ್ಪಿಸಿಕೊಟ್ಟರು. ಬಂಟ್ವಾಳ ತಾಲ್ಲೂಕಿನಲ್ಲಿ ಕೆಲವು ದಿನಗಳಿಂದ ಅಹಿತಕರ ಘಟನೆಗಳು ನಡೆ ಯುತ್ತಿರುವ ಕಾರಣದಿಂದ ಜಿಲ್ಲೆಯಾ ದ್ಯಂತ ನಿಷೇಧಾಜ್ಞೆ ಜಾರಿಯಲ್ಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

SCROLL FOR NEXT