ಸಾಂಕೇತಿಕ ಚಿತ್ರ 
ರಾಜ್ಯ

ಕದ್ದ ಬೈಕಿನ ಪೆಟ್ರೋಲ್ ಖಾಲಿಯಾಯ್ತು; ಪೊಲೀಸರಿಗೆ ಸಿಕ್ಕಿಬೀಳಲು ಅಷ್ಟೇ ಸಾಕಿತ್ತು!

ಬೈಕನ್ನು ಕದ್ದ ಇಬ್ಬರು ಕಳ್ಳರು ಅದರಲ್ಲಿ ಪೆಟ್ರೋಲ್ ಖಾಲಿಯಾಗಿದ್ದ ಕಾರಣ ಹಿಂತಿರುಗಿಸಲು ನೋಡುತ್ತಿದ್ದ ಸಂದರ್ಭದಲ್ಲಿ...

ಬೆಂಗಳೂರು: ಬೈಕನ್ನು ಕದ್ದ ಇಬ್ಬರು ಕಳ್ಳರು ಅದರಲ್ಲಿ ಪೆಟ್ರೋಲ್ ಖಾಲಿಯಾಗಿದ್ದ ಕಾರಣ ಹಿಂತಿರುಗಿಸಲು ನೋಡುತ್ತಿದ್ದ ಸಂದರ್ಭದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದ ಘಟನೆ ನಡೆದಿದೆ.
ಮೊನ್ನೆ ಸೋಮವಾರ ರಾತ್ರಿ 10 ಗಂಟೆ ಸುಮಾರಿಗೆ ಇಬ್ಬರು ಮೇದಹಳ್ಳಿ ಸೇತುವೆ ಬಳಿ ಹೀರೋ ಮೆಸ್ಟ್ರೊ ಎಡ್ಜ್ ಬೈಕನ್ನು ತಳ್ಳಿಕೊಂಡು ಹೋಗುತ್ತಿರುವುದನ್ನು ಇಬ್ಬರು ಪೊಲೀಸರು ನೋಡಿದ್ದಾರೆ. ಅವರ ಬಗ್ಗೆ ಸಂಶಯ ಬಂದು ಪೊಲೀಸರು ಅವರ ಬಳಿ ಬಂದು ನೀವು ಎಲ್ಲಿಯವರು, ಬೈಕ್ ಎಲ್ಲಿಂದ ಎಂದೆಲ್ಲ ಪ್ರಶ್ನಿಸಿದ್ದಾರೆ. ಅಲ್ಲದೆ ಬೈಕಿನಲ್ಲಿ ಕೀ ಇಲ್ಲದಿರುವುದನ್ನು ಪೊಲೀಸರು ಗಮನಿಸಿದರು. ಪೊಲೀಸರು ಬೈಕಿನ ದಾಖಲೆಗಳನ್ನು ಕೇಳಿದಾಗ  ಅವರ ಬಳಿ ಇರಲಿಲ್ಲ. 
ಕೂಡಲೇ ಕಳ್ಳರನ್ನು ಬಂಧಿಸಿದ ಪೊಲೀಸರು ಪೊಲೀಸ್ ಠಾಣೆಗೆ ಕರೆದೊಯ್ದರು. ಅವರಲ್ಲಿ ಪೆರುಮಾಳ್ ಎನ್ನುವವನು ಪೊಲೀಸ್ ಠಾಣೆಗೆ ತಲುಪುವುದರೊಳಗೆ ತಪ್ಪಿಸಿಕೊಂಡು ಪರಾರಿಯಾಗಿದ್ದಾನೆ. ಮತ್ತೊಬ್ಬ ಆಂಧ್ರ ಪ್ರದೇಶ ಮೂಲದ ವಿಜಿನಾಪುರದಲ್ಲಿ ವಾಸಿಸುತ್ತಿರುವ 20 ವರ್ಷದ ಶಿವ ಎಂಬುವವನು ಪೊಲೀಸ್ ಕಸ್ಟಡಿಯಲ್ಲಿದ್ದಾನೆ.
ಪೆರುಮಾಳ್ ಬೈಕ್ ತಳ್ಳಿಕೊಂಡು ಹೋಗಲು ಮಾತ್ರ ಬಂದಿದ್ದು ತನಗೆ ಆತನ ಜೊತೆ ಯಾವುದೇ ವೈಯಕ್ತಿಕ ಸಂಪರ್ಕವಿಲ್ಲ ಎಂದು ಶಿವ ಪೊಲೀಸರಿಗೆ ಹೇಳಿದ್ದಾನೆ. ಆದರೂ ಇವರಿಬ್ಬರು ಸ್ನೇಹಿತರೆಂದು ಸಂಶಯವಿದೆ ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆ ಮುಂದುವರಿದಿದೆ. ತನಿಖೆ ಮುಂದುವರಿದಿದೆ. ಬೈಕ್ ಸಂಖ್ಯೆ KA-03-JJ-7737 ರ ಮಾಲಿಕರು ಯಾರೂ ಇದುವರೆಗೆ ಬಂದಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಗೆ ರೂ.10 ಕೋಟಿ: ಸುರಂಗ ರಸ್ತೆ ಯೋಜನೆಯಿಂದ 'ಸಸ್ಯೋದ್ಯಾನ'ದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ- ಡಿಕೆ ಶಿವಕುಮಾರ್

US tariff: ಚೀನಾ ಮೇಲೆ ಅಮೆರಿಕ ಶೇ.100 ರಷ್ಟು ಸುಂಕ; ಭಾರತಕ್ಕೆ ಎಚ್ಚರಿಕೆಯ ಗಂಟೆ!

Shocking: ಹೆಣ್ಣಿನ ಶವ ಎಳೆದೊಯ್ದು ಶವಾಗಾರದಲ್ಲೇ ಅತ್ಯಾಚಾರ, 25ರ ಯುವಕನಿಂದ ಪೈಶಾಚಿಕ ಕೃತ್ಯ, CCTV Video

Belagavi: ಲವರ್ ಜೊತೆ ಮಗಳು ಪರಾರಿ; ಇಡೀ ಊರಿಗೆ 'ತಿಥಿ' ಊಟ ಹಾಕಿಸಿದ ತಂದೆ!

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

SCROLL FOR NEXT