ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: 11 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ

ದೇವರಕೊಂಡ ಗ್ರಾಮದ 11 ದಲಿತ ಕುಟುಂಬಗಳಿಗೆ ದೇವಸ್ಥಾನ, ದಿನಸಿ ಅಂಗಡಿಗಳು, ಹೋಟೆಲ್‌ ಪ್ರವೇಶ ನಿರ್ಬಂಧಿಸಿ ಗ್ರಾಮಸ್ಥರು ಬಹಿಷ್ಕಾರ...

ಧಾರವಾಡ: ದೇವರಕೊಂಡ ಗ್ರಾಮದ 11 ದಲಿತ ಕುಟುಂಬಗಳಿಗೆ ದೇವಸ್ಥಾನ, ದಿನಸಿ ಅಂಗಡಿಗಳು, ಹೋಟೆಲ್‌ ಪ್ರವೇಶ ನಿರ್ಬಂಧಿಸಿ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ.
ಧಾರವಾಡದಿಂದ 45 ಕಿಮೀ ದೂರದಲ್ಲಿರುವ ಕಲಘಟಗಿ ತಾಲೂಕಿನ ಗ್ರಾಮವಾಗಿದೆ. ಬಹಿಷ್ಕಾರಕ್ಕೊಳಗಾಗಿರುವ 11 ಕುಟುಂಬಗಳಿಗೆ ಯಾವುದೇ ರೀತಿಯ ಸಾಮಾಗ್ರಿಗಳನ್ನು ನೀಡಬಾರದು ಎಂದು ಗ್ರಾಮದ ಮುಖಂಡರು ಆದೇಶಿಸಿದ್ದಾರೆ.
ದಲಿತರ ಕೇರಿಯಲ್ಲಿದ್ದ ದುರ್ಗಮ್ಮ ದೇವಸ್ಥಾನಕ್ಕೆ ಬಸವಿ ಕರು ಬಿಟ್ಟಿದ್ದು, ಅದು ಸವರ್ಣೀಯರಿಗೆ ಸೇರಿದ ಹೊಲದಲ್ಲಿ ಮೇವು ತಿಂದ ವಿಚಾರಕ್ಕೆ ಸವರ್ಣೀಯರೊಂದಿಗೆ ವಾಗ್ವಾದ ನಡೆದಿತ್ತು. ಗ್ರಾಮದ ಹಿರಿಯರು ಸೇರಿ ಸಮಸ್ಯೆಯನ್ನು ಬಗೆಹಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ದುರ್ಗಪ್ಪ ನೆರೆಹೊರೆ ಗ್ರಾಮದವರೊಂದಿಗೆ ಸೇರಿ ಈರಪ್ಪ ಮತ್ತು ಇತರ 10 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾನೆ.
ಬಹಿಷ್ಕಾರಕ್ಕೊಳಗಾಗಿರುವ ದಲಿತ ಕುಟುಂಬಗಳು ಕಲಘಟಗಿ ಪೊಲೀಸರುನ್ನು ಭೇಟಿ ಮಾಡಿ ತಮಗಾಗಿರುವ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಈ ಸಂಬಂಧ ಗ್ರಾಮದ 8 ಮಂದಿಯನ್ನು ವಿಚಾರಣೆ ನಡೆಸಲಾಗಿದ್ದು, ಯಾರೋಬ್ಬರನ್ನು ಬಂಧಿಸಲಾಗಿಲ್ಲ, ಗ್ರಾಮದಲ್ಲಿ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT