ಸಾಂದರ್ಭಿಕ ಚಿತ್ರ 
ರಾಜ್ಯ

ಧಾರವಾಡ: 11 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ

ದೇವರಕೊಂಡ ಗ್ರಾಮದ 11 ದಲಿತ ಕುಟುಂಬಗಳಿಗೆ ದೇವಸ್ಥಾನ, ದಿನಸಿ ಅಂಗಡಿಗಳು, ಹೋಟೆಲ್‌ ಪ್ರವೇಶ ನಿರ್ಬಂಧಿಸಿ ಗ್ರಾಮಸ್ಥರು ಬಹಿಷ್ಕಾರ...

ಧಾರವಾಡ: ದೇವರಕೊಂಡ ಗ್ರಾಮದ 11 ದಲಿತ ಕುಟುಂಬಗಳಿಗೆ ದೇವಸ್ಥಾನ, ದಿನಸಿ ಅಂಗಡಿಗಳು, ಹೋಟೆಲ್‌ ಪ್ರವೇಶ ನಿರ್ಬಂಧಿಸಿ ಗ್ರಾಮಸ್ಥರು ಬಹಿಷ್ಕಾರ ಹಾಕಿದ್ದಾರೆ.
ಧಾರವಾಡದಿಂದ 45 ಕಿಮೀ ದೂರದಲ್ಲಿರುವ ಕಲಘಟಗಿ ತಾಲೂಕಿನ ಗ್ರಾಮವಾಗಿದೆ. ಬಹಿಷ್ಕಾರಕ್ಕೊಳಗಾಗಿರುವ 11 ಕುಟುಂಬಗಳಿಗೆ ಯಾವುದೇ ರೀತಿಯ ಸಾಮಾಗ್ರಿಗಳನ್ನು ನೀಡಬಾರದು ಎಂದು ಗ್ರಾಮದ ಮುಖಂಡರು ಆದೇಶಿಸಿದ್ದಾರೆ.
ದಲಿತರ ಕೇರಿಯಲ್ಲಿದ್ದ ದುರ್ಗಮ್ಮ ದೇವಸ್ಥಾನಕ್ಕೆ ಬಸವಿ ಕರು ಬಿಟ್ಟಿದ್ದು, ಅದು ಸವರ್ಣೀಯರಿಗೆ ಸೇರಿದ ಹೊಲದಲ್ಲಿ ಮೇವು ತಿಂದ ವಿಚಾರಕ್ಕೆ ಸವರ್ಣೀಯರೊಂದಿಗೆ ವಾಗ್ವಾದ ನಡೆದಿತ್ತು. ಗ್ರಾಮದ ಹಿರಿಯರು ಸೇರಿ ಸಮಸ್ಯೆಯನ್ನು ಬಗೆಹಿಸಿದ್ದರು. ಇಷ್ಟಕ್ಕೆ ಸುಮ್ಮನಾಗದ ದುರ್ಗಪ್ಪ ನೆರೆಹೊರೆ ಗ್ರಾಮದವರೊಂದಿಗೆ ಸೇರಿ ಈರಪ್ಪ ಮತ್ತು ಇತರ 10 ದಲಿತ ಕುಟುಂಬಗಳಿಗೆ ಸಾಮಾಜಿಕ ಬಹಿಷ್ಕಾರ ಹಾಕಿದ್ದಾನೆ.
ಬಹಿಷ್ಕಾರಕ್ಕೊಳಗಾಗಿರುವ ದಲಿತ ಕುಟುಂಬಗಳು ಕಲಘಟಗಿ ಪೊಲೀಸರುನ್ನು ಭೇಟಿ ಮಾಡಿ ತಮಗಾಗಿರುವ ಸಮಸ್ಯೆ ಬಗ್ಗೆ ಹೇಳಿಕೊಂಡಿದ್ದಾರೆ. ಈ ಸಂಬಂಧ ಗ್ರಾಮದ 8 ಮಂದಿಯನ್ನು ವಿಚಾರಣೆ ನಡೆಸಲಾಗಿದ್ದು, ಯಾರೋಬ್ಬರನ್ನು ಬಂಧಿಸಲಾಗಿಲ್ಲ, ಗ್ರಾಮದಲ್ಲಿ ಸಭೆ ನಡೆಸಿ ಸಮಸ್ಯೆಯನ್ನು ಬಗೆಹರಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TNIE Exclusive | Air India ವಿಮಾನದಲ್ಲಿ ಭಾರೀ ತಾಂತ್ರಿಕ ದೋಷ..! Phuket-Delhi ವಿಮಾನ 300 ಅಡಿ ಕುಸಿತಕ್ಕೆ Triple hydraulic systems ವೈಫಲ್ಯ ಕಾರಣ..?

ಸಂಪುಟ ವಿಸ್ತರಣೆ ಬಿಕ್ಕಟ್ಟು ಶಮನಕ್ಕೆ ಸಿಎಂ ಡಿಕೆ.ಶಿವಕುಮಾರ್ ದೆಹಲಿಗೆ ದೌಡು: ಹೈಕಮಾಂಡ್‌ ಜೊತೆ ಮಹತ್ವದ ಚರ್ಚೆ..!

'Toxic': ಸಿನಿಮಾ ಮಾಡುವುದು ಸುಲಭವಲ್ಲ, ಇಡೀ ಪ್ರಪಂಚದ ವಿರುದ್ಧ ಯುದ್ಧಕ್ಕೆ ಹೋದಂತೆ': ವದಂತಿಗಳ ನಡುವೆ ಆ ವ್ಯಕ್ತಿ ಬಂಡೆಯಂತೆ ನಿಂತರು- ಯಶ್!

Toxic: ಯಶ್ ಜೊತೆಗೆ ಕಿಯಾರಾ ಬೋಲ್ಡ್ ಅವತಾರ, ಟ್ರೋಲರ್ ಗಳ ಬಾಯಿ ಮುಚ್ಚಿಸಿದ ಪತಿ ಸಿದ್ಧಾರ್ಥ್ ಮಲ್ಹೋತ್ರಾ!

'ಕಳ್ಳಿ, ಕಳ್ಳಿ' ಅಂತಾ ಘೋಷಣೆ ಕೂಗಿ ಮಮತಾ ಬ್ಯಾನರ್ಜಿ ಕಾರಿನ ಮೇಲೆ ಕಲ್ಲು ತೂರಾಟ, ಕೆಸರು ಎರಚಿ ಆಕ್ರೋಶ! ಭಯಾನಕ Video