ನಗರಕ್ಕೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್: ದೇವೇಗೌಡರೊಂದಿಗೆ ಚರ್ಚೆ 
ರಾಜ್ಯ

ನಗರಕ್ಕೆ ಆಗಮಿಸಿದ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್: ದೇವೇಗೌಡರೊಂದಿಗೆ ಚರ್ಚೆ

ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌರ ಅವರನ್ನು ಭೇಟಿಯಾಗಿ ಶನಿವಾರ...

ಬೆಂಗಳೂರು: ಪ್ರತಿಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿ ಮೀರಾಕುಮಾರ್ ಅವರು ಬೆಂಗಳೂರಿಗೆ ಆಗಮಿಸಿದ್ದು, ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌರ ಅವರನ್ನು ಭೇಟಿಯಾಗಿ ಶನಿವಾರ ಮಾತುಕತೆ ನಡೆಸಿದ್ದಾರೆ. 
ಇಂದು ಬೆಳಿಗ್ಗೆ 9.10ರ ಸುಮಾರಿಗೆ ಏರ್ ಇಂಡಿಯಾ ವಿಮಾನದಲ್ಲಿ ಬಂದಿಳಿದ ಮೀರಾ ಕುಮಾರ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಸೇರಿದಂತೆ ಹಲವು ನಾಯಕರು ಸ್ವಾಗತಿಸಿದರು. 
ಇದೇ ವೇಳೆ ದೆಹಲಿಯಿಂದ ನಗರಕ್ಕೆ ಮಾಜಿ ಪ್ರಧಾನಮಂತ್ರಿ ಹಾಗೂ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ಅವರು ಆಗಮಿಸಿದ್ದರು. ವಿಮಾನ ನಿಲ್ದಾಣದ ವಿಐಪಿ ಲಾಂಚ್ ನಲ್ಲಿ ಮೀರಾ ಕುಮಾರ್ ಹಾಗೂ ದೇವೇಗೌಡ ಅವರು ಉಭಯ ಕುಶಲೋಪರಿ ನಡೆಸಿದರು. 
ದೇವೇಗೌಡ ಅವರೊಂದಿಗೆ ಮಾತುಕತೆ ನಡೆಸಿದ ಮೀರಾಕುಮಾರ್ ಅವರು ರಾಷ್ಟ್ರಪತಿ ಚುನಾವಣೆಯಲ್ಲಿ ತಮಗೆ ಬೆಂಬಲ ನೀಡುವಂತೆ ದೇವೇಗೌಡ ಅವರ ಬಳಿ ಮನವಿ ಮಾಡಿಕೊಂಡಲು ಎಂದು ಮೂಲಗಳು ತಿಳಿಸಿವೆ. 
ಜುಲೈ17ಕ್ಕೆ ರಾಷ್ಟ್ರಪತಿ ಚುನಾವಣೆ ನಡೆಯಲಿದ್ದು. ಜು.20ಕ್ಕೆ ಫಲಿತಾಂಶ ಪ್ರಕಟಗೊಳ್ಳಲಿದೆ. ಬಿಹಾರ ರಾಜ್ಯ ಪಾಲ ರಾಮನಾಥ ಕೋವಿಂದ್ ಎನ್ ಡಿಎ ಅಭ್ಯರ್ಥಿಯಾಗಿದ್ದು, ಮೀರಾಕುಮಾರ್ ಅವರು ಯುಪಿಎ ಮಿತ್ರಪಕ್ಷಗಳ ರಾಷ್ಟ್ರಪತಿ ಅಭ್ಯರ್ಥಿಯಾಗಿ ಚುನಾವಣಾ ಕಣಕ್ಕಳಿದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಅಧಿಕಾರ ಹಂಚಿಕೆ ಬಗ್ಗೆ ಯಾರೂ ಮಾತನಾಡಬೇಡಿ, ಸಾರ್ವಜನಿಕ ಹೇಳಿಕೆ ಕೊಡಬೇಡಿ': ಕಾಂಗ್ರೆಸ್ ಶಾಸಕರಿಗೆ ಸಿಎಂ ಸಿದ್ದರಾಮಯ್ಯ ಬುದ್ದಿಮಾತು

'ನೀವು ಶಾಶ್ವತ ವಿಪತ್ತು ನಿಧಿ ಏಕೆ ರಚಿಸಿಲ್ಲ': ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್ ಅಶೋಕ್ ಪ್ರಶ್ನೆ

ರೈಲಿನಲ್ಲಿ ನಿದ್ದೆಗೆ ಜಾರಿದ ವ್ಯಾಪಾರಿ; 5.53 ಕೋಟಿ ಮೌಲ್ಯದ ಚಿನ್ನಾಭರಣ ಕಳ್ಳತನ!

ಜೈಪುರ-ಬಿಕಾನೇರ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಬಸ್-ಟ್ರಕ್ ಮುಖಾಮುಖಿ ಡಿಕ್ಕಿ: ನಾಲ್ವರು ಸಾವು, 27 ಜನರಿಗೆ ಗಾಯ

ಕೇಂದ್ರ ಸರ್ಕಾರ ರೈತರಿಗೆ ದ್ರೋಹ ಬಗೆದಿದೆ: ಡಿ ಕೆ ಶಿವಕುಮಾರ್

SCROLL FOR NEXT